AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

38 ಲಕ್ಷ ರೂ ಮೌಲ್ಯದ 200 ಮೊಬೈಲ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರಿಸಿದ ಕಲಬುರಗಿ ಪೊಲೀಸ್

ಹೊಸದಾಗಿ ರಾಜ್ಯ ಪೊಲೀಸರು ಜಾರಿ ಮಾಡಿರುವ ಸಿಇಐಆರ್ ಪೋರ್ಟಲ್​ನಿಂದ ಕಳೆದು ಹೋದ ಹಾಗೂ ಕಳ್ಳತನವಾಗಿರುವ ಮೊಬೈಲ್ ಫೋನ್​ಗಳ ಪತ್ತೆ ಕಾರ್ಯಕ್ಕೆ ಅನುಕೂಲವಾಗುತ್ತಿದೆ. ಸದ್ಯ ಈ ಪೋರ್ಟಲ್​ನಿಂದ ಕಲಬುರಗಿ ಜಿಲ್ಲೆಯಲ್ಲಿ ಕಳುವಾಗಿದ್ದ ಬರೋಬ್ಬರಿ 200 ಮೊಬೈಲ್​ಗಳನ್ನು ಪೊಲೀಸರು ಪತ್ತೆ ಮಾಡಿ ಮಾಲೀಕರಿಗೆ ಹಸ್ತಾಂತರ‌ ಮಾಡಿದ್ದಾರೆ.

38 ಲಕ್ಷ ರೂ ಮೌಲ್ಯದ 200 ಮೊಬೈಲ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರಿಸಿದ ಕಲಬುರಗಿ ಪೊಲೀಸ್
38 ಲಕ್ಷ ರೂ ಮೌಲ್ಯದ 200 ಮೊಬೈಲ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರಿಸಿದ ಕಲಬುರಗಿ ಪೊಲೀಸ್
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Oct 23, 2024 | 2:59 PM

Share

ಕಲಬುರಗಿ, ಅಕ್ಟೋಬರ್​ 23: ಜಿಲ್ಲೆಯಲ್ಲಿ ಕಳುವಾಗಿದ್ದ ಬರೋಬ್ಬರಿ 38 ಲಕ್ಷ ರೂ. ಮೌಲ್ಯದ 200 ಮೊಬೈಲ್ (mobile) ಪತ್ತೆ ಹಚ್ಚಿ ಮಾಲೀಕರಿಗೆ ಪೊಲೀಸರು ಹಸ್ತಾಂತರ‌ ಮಾಡಿದ್ದಾರೆ. ನಗರದ ವಿವಿಧ ಠಾಣೆಗಳಲ್ಲಿ ಮೊಬೈಲ್ ಕಳವು ಕೇಸ್ ದಾಖಲಾಗಿದ್ದವು ಎಂದು ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಅವರು, ಸಿಇಐಆರ್​ (CEIR) ಪೋರ್ಟಲ್​ನಲ್ಲಿ ಮೊಬೈಲ್ ಕಳುವಾಗಿದ್ದ ಬಗ್ಗೆ ದಾಖಲಿಸಲಾಗಿತ್ತು. 9 ತಿಂಗಳಲ್ಲಿ ಸಿಇಐಆರ್ ಪೋರ್ಟಲ್ ಮೂಲಕ 672 ಮೊಬೈಲ್​ ಪತ್ತೆ ಹಚ್ಚಿದ್ದೇವೆ. ಇಂದು ಒಂದೇ ದಿನದಲ್ಲಿ 200 ಜನರಿಗೆ ಮೊಬೈಲ್​​ ಹಸ್ತಾಂತರಿಸಿದ್ದೇವೆ. ಇದರಲ್ಲಿ ಕಳ್ಳತನವಾಗಿದ್ದ ಹಾಗೂ ಕಳೆದು ಹೋಗಿರುವ ಮೊಬೈಲ್​​ಗಳಿವೆ ಎಂದಿದ್ದಾರೆ.

ಇದನ್ನೂ ಓದಿ: ರೈಸ್ ಪುಲ್ಲಿಂಗ್ ವಸ್ತು ತೋರಿಸಿ ಉದ್ಯಮಿಗೆ ವಂಚನೆ: ಎಕರೆಗಟ್ಟಲೇ ಜಮೀನು ವಂಚಿಸಿದ್ದ ಐವರ ಬಂಧನ

ಹೊಸದಾಗಿ ರಾಜ್ಯ ಪೊಲೀಸರು ಜಾರಿ ಮಾಡಿರುವ ಸಿಇಐಆರ್ ಪೋರ್ಟಲ್​ನಿಂದ ಕಳೆದು ಹೋದ ಹಾಗೂ ಕಳ್ಳತನವಾಗಿರುವ ಮೊಬೈಲ್ ಫೋನ್​ಗಳ ಪತ್ತೆ ಕಾರ್ಯಕ್ಕೆ ಅನುಕೂಲವಾಗುತ್ತಿದೆ. ಯಾಕೆಂದರೆ ಯಾದಗಿರಿ ಜಿಲ್ಲೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸೈಬರ್ ಕ್ರೈಂ (ಸೆನ್) ಠಾಣೆಯಿಂದ ಈ ಪೋರ್ಟಲ್​ನಿಂದಾಗಿ 1113 ಫೋನ್​ಗಳನ್ನ ಪತ್ತೆ ಮಾಡಲಾಗಿದೆ.

ಫೋನ್ ಕಳೆದುಕೊಂಡವರಿಗೆ ಹುಡುಕಿ ವಾಪಸ್ ಫೋನ್ ಕೊಡುವ ಕೆಲಸ ಪೊಲೀಸರು ಮಾಡಿದ್ದಾರೆ. ಕಳೆದುಕೊಂಡ ಫೋನ್​ ಸಿಗೋದೆ ಇಲ್ಲ ಅಂತ ಅಂದುಕೊಂಡಿದ್ದ ಜನರಿಗೆ ಪೊಲೀಸರು ಫೋನ್ ಹುಡುಕಿ ಕೊಟ್ಟಿದ್ದಕ್ಕೆ ಹರ್ಷ ವ್ಯಕ್ತ ಪಡಿಸಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ಮೊಬೈಲ್ ಕಳ್ಳನ

ಕೋಲಾರ: ಜಿಲ್ಲಾಸ್ಪತ್ರೆಯಲ್ಲಿ ಮೊಬೈಲ್ ಕಳ್ಳನ ಕೈಚಳಕಕ್ಕೆ ಸುಮಾರು ಎಂಟಕ್ಕೂ ಹೆಚ್ಚು ಮೊಬೈಲ್​ಗಳು ಕಳ್ಳತನವಾಗಿವೆ. ಕೋಲಾರ ನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ಕಳ್ಳನೊಬ್ಬ ಬಂದು ರೋಗಿಗಳ ಬಳಿ ಇರುವ ಪೋನ್​ಗಳನ್ನು ಎಗರಿಸಿರುವ ದೃಶ್ಯಗಳು ಆಸ್ಪತ್ರೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.

ಇದನ್ನೂ ಓದಿ: ಅಂಚೆ ಇಲಾಖೆ ಮೂಲಕ ಬೆಂಗಳೂರಿಗೆ ಬರ್ತಾಯಿದೆ ವಿದೇಶಿ ಡ್ರಗ್ಸ್​: 21 ಕೋಟಿ ರೂ ಮೌಲ್ಯದ ಡ್ರಗ್ಸ್ ವಶಕ್ಕೆ

ರೋಗಿಗಳು ನಿದ್ದೆ ಮಾಡುವ ವೇಳೆ ಕಳ್ಳ ಬೆಕ್ಕಿನಂತೆ ಬರುವ ಮೊಬೈಲ್​ ಕಳ್ಳ ಮೊಬೈಲ್ ಎಗರಿಸಿಕೊಂಡು ಹೋಗುತ್ತಾನೆ, ಸದ್ಯ ಮೇಲಿಂದ ಮೇಲೆ ಹೀಗೆ ಮೊಬೈಲ್​ ಕಳ್ಳತನವಾಗುತ್ತಿರುವುದಕ್ಕೆ ಜಿಲ್ಲಾಸ್ಪತ್ರೆಯ ರೋಗಿಗಳು ಆಕ್ರೋಶ ಹೊರಹಾಕಿದ್ದು, ಕೂಡಲೇ ಮೊಬೈಲ್​ ಕಳ್ಳನನ್ನು ಬಂಧಿಸುವಂತೆ ಅಗ್ರಹಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೊಬೈಲ್​ ಕಳ್ಳನಿಗೆ ಹುಡುಕಾಟ ನಡೆಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್