AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫಜಲಪುರ ಪಟ್ಟಣದಲ್ಲಿ ಟ್ರ್ಯಾಕ್ಟರ್ ಹರಿದು ಪಾದಚಾರಿ ಸಾವು; ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಪಾದಾಚಾರಿ ಸಾವನ್ನಪ್ಪಿದ ಭೀಕರ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ನಡೆದಿದೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಫಜಲಪುರ ಪಟ್ಟಣದಲ್ಲಿ ಟ್ರ್ಯಾಕ್ಟರ್ ಹರಿದು ಪಾದಚಾರಿ ಸಾವು; ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಟ್ರ್ಯಾಕ್ಟರ್ ಹರಿದು ಪಾದಾಚಾರಿ ಸಾವು
TV9 Web
| Edited By: Rakesh Nayak Manchi|

Updated on:Nov 26, 2022 | 5:15 PM

Share

ಕಲಬುರಗಿ: ಟ್ರ್ಯಾಕ್ಟರ್ ಹರಿದು ಪಾದಾಚಾರಿ ಸಾವನ್ನಪ್ಪಿದ ಭೀಕರ ಘಟನೆ ಜಿಲ್ಲೆಯ ಅಫಜಲಪುರ ಪಟ್ಟಣದ ನಿಂಬಾಳ್​ ಪೆಟ್ರೋಲ್ ಬಂಕ್​ ಬಳಿ ನಡೆದಿದ್ದು, ಅಪಘಾತದ (Accident) ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಫಜಲಪುರ ಪಟ್ಟಣದ ನಿವಾಸಿ ಬರ್ಮಾ ದಂಡಗೂಲೆ (45) ಮೃತ ದುರ್ದೈವಿಯಾಗಿದ್ದಾರೆ. ಮುಂಜಾನೆ ರಸ್ತೆ ಪಕ್ಕದಲ್ಲಿ ಬರ್ಮಾ ದಂಡಗೂಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಟ್ರ್ಯಾಕ್ಟರ್​ನ ಇಂಜಿನ್​ಗೆ ಅಳವಡಿಸಿದ್ದ ಟೇಲರ್ ಸಂಪರ್ಕ ಕಡಿತಗೊಂಡು ಬರ್ಮಾ ಅವರ ಮೇಲೆ ಹರಿದಿದೆ.

ಇದನ್ನೂ ಓದಿ: ಸೆಲ್ಫೀ ತೆಗೆದುಕೊಳ್ಳುವಾಗ ಕಿತವಾಡ ಜಲಪಾತದಲ್ಲಿ ನೀರಿಗೆ ಜಾರಿದ ಯುವತಿಯರಲ್ಲಿ ನಾಲ್ವರು ಜಲಸಮಾಧಿ, ಒಬ್ಬಳ ಸ್ಥಿತಿ ಚಿಂತಾಜನಕ

ಜಮೀನಿನಲ್ಲಿ ಮರಗಳನ್ನು ಕಡಿದುಹಾಖಿದ ದುಷ್ಕರ್ಮಿಗಳು

ದಾವಣಗೆರೆ: ಜಮೀನಿನಲ್ಲಿದ್ದ 10ಕ್ಕೂ ಹೆಚ್ಚು ಮರಗಳು ದುಷ್ಕರ್ಮಿಗಳ ತಂಡವೊಂದು ಕಡಿದುಹಾಕಿದ ಘಟನೆ ತಾಲೂಕಿನ‌ ಗಡಿ ಗುಡಾಳ್ ಗ್ರಾಮದಲ್ಲಿ ನಡೆದಿದೆ. ಹೇಮಂತಕುಮಾರ್‌ ಎಂಬವರಿಗೆ ಸೇರಿದ ಜಮೀನಿನಲ್ಲಿ ಅವರ ತಂದೆಯ ಸಮಾಧಿ ಪಕ್ಕದಲ್ಲಿದ್ದ ಬೇವಿನ ಮರ ಸೇರಿದಂತೆ ಸುಮಾರು 10ಕ್ಕೂ ಹೆಚ್ಚು ಬೇವಿನ ಮರಗಳನ್ನು ಕಡಿದು ನಾಶಗೊಳಿಸಲಾಗಿದ್ದು, ಪಕ್ಕದ ಜಮೀನಿನ ಮಾಲೀಕನೇ ಕಡಿದು ಹಾಕಿದ್ದಾಗಿ ಆರೋಪ ಮಾಡಲಾಗಿದೆ. ಕೃತ್ಯ ಸಂಬಂಧ ಹೇಮಂತಕುಮಾರ್ ಅವರು ಜಯಪ್ಪ ವಿರುದ್ಧ ದಾವಣಗೆರೆ ಗ್ರಾಮಾಂತರ ಠಾಣೆಗೆ ದೂರು ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಗೌರಿಶಂಕರ್ ಕೊಲೆ ಸುಪಾರಿ ಕೊಟ್ಟಿದ್ದರೆಂದು ಪ್ರಪಂಚದ ಯಾವುದೇ ದೇವರ ಮುಂದೆ ಪ್ರಮಾಣ ಮಾಡಿ ಹೇಳಲು ಸಿದ್ಧ: ಬಿಜೆಪಿ ಮಾಜಿ ಶಾಸಕ

BWSSB ಕಾಮಗಾರಿ ವೇಳೆ ಸ್ಲ್ಯಾಬ್​ ಬಿದ್ದು ಕಾರ್ಮಿಕ ಸಾವು

ಬೆಂಗಳೂರು: ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(BWSSB) ಕಾಮಗಾರಿ ವೇಳೆ ಸ್ಲ್ಯಾಬ್​ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಗರದ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾಮಗಾರಿ ನಡೆಸುವ ವೇಳೆ ಸಿಮೆಂಟ್ ಸ್ಲ್ಯಾಬ್ ಕುಸಿದುಬಿದ್ದಿದೆ. ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕ ಸಾವನ್ನಪ್ಪಿದ್ದು, ಮೃತದೇಹವನ್ನು ರಾಜರಾಜೇಶ್ವರಿ ನಗರ ಆಸ್ಪತ್ರೆಗೆ ರವಾನಿಸಲಾಗಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:15 pm, Sat, 26 November 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ