AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫಜಲಪುರ ಪಟ್ಟಣದಲ್ಲಿ ಟ್ರ್ಯಾಕ್ಟರ್ ಹರಿದು ಪಾದಚಾರಿ ಸಾವು; ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಪಾದಾಚಾರಿ ಸಾವನ್ನಪ್ಪಿದ ಭೀಕರ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ನಡೆದಿದೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಫಜಲಪುರ ಪಟ್ಟಣದಲ್ಲಿ ಟ್ರ್ಯಾಕ್ಟರ್ ಹರಿದು ಪಾದಚಾರಿ ಸಾವು; ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಟ್ರ್ಯಾಕ್ಟರ್ ಹರಿದು ಪಾದಾಚಾರಿ ಸಾವು
TV9 Web
| Edited By: Rakesh Nayak Manchi|

Updated on:Nov 26, 2022 | 5:15 PM

Share

ಕಲಬುರಗಿ: ಟ್ರ್ಯಾಕ್ಟರ್ ಹರಿದು ಪಾದಾಚಾರಿ ಸಾವನ್ನಪ್ಪಿದ ಭೀಕರ ಘಟನೆ ಜಿಲ್ಲೆಯ ಅಫಜಲಪುರ ಪಟ್ಟಣದ ನಿಂಬಾಳ್​ ಪೆಟ್ರೋಲ್ ಬಂಕ್​ ಬಳಿ ನಡೆದಿದ್ದು, ಅಪಘಾತದ (Accident) ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಫಜಲಪುರ ಪಟ್ಟಣದ ನಿವಾಸಿ ಬರ್ಮಾ ದಂಡಗೂಲೆ (45) ಮೃತ ದುರ್ದೈವಿಯಾಗಿದ್ದಾರೆ. ಮುಂಜಾನೆ ರಸ್ತೆ ಪಕ್ಕದಲ್ಲಿ ಬರ್ಮಾ ದಂಡಗೂಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಟ್ರ್ಯಾಕ್ಟರ್​ನ ಇಂಜಿನ್​ಗೆ ಅಳವಡಿಸಿದ್ದ ಟೇಲರ್ ಸಂಪರ್ಕ ಕಡಿತಗೊಂಡು ಬರ್ಮಾ ಅವರ ಮೇಲೆ ಹರಿದಿದೆ.

ಇದನ್ನೂ ಓದಿ: ಸೆಲ್ಫೀ ತೆಗೆದುಕೊಳ್ಳುವಾಗ ಕಿತವಾಡ ಜಲಪಾತದಲ್ಲಿ ನೀರಿಗೆ ಜಾರಿದ ಯುವತಿಯರಲ್ಲಿ ನಾಲ್ವರು ಜಲಸಮಾಧಿ, ಒಬ್ಬಳ ಸ್ಥಿತಿ ಚಿಂತಾಜನಕ

ಜಮೀನಿನಲ್ಲಿ ಮರಗಳನ್ನು ಕಡಿದುಹಾಖಿದ ದುಷ್ಕರ್ಮಿಗಳು

ದಾವಣಗೆರೆ: ಜಮೀನಿನಲ್ಲಿದ್ದ 10ಕ್ಕೂ ಹೆಚ್ಚು ಮರಗಳು ದುಷ್ಕರ್ಮಿಗಳ ತಂಡವೊಂದು ಕಡಿದುಹಾಕಿದ ಘಟನೆ ತಾಲೂಕಿನ‌ ಗಡಿ ಗುಡಾಳ್ ಗ್ರಾಮದಲ್ಲಿ ನಡೆದಿದೆ. ಹೇಮಂತಕುಮಾರ್‌ ಎಂಬವರಿಗೆ ಸೇರಿದ ಜಮೀನಿನಲ್ಲಿ ಅವರ ತಂದೆಯ ಸಮಾಧಿ ಪಕ್ಕದಲ್ಲಿದ್ದ ಬೇವಿನ ಮರ ಸೇರಿದಂತೆ ಸುಮಾರು 10ಕ್ಕೂ ಹೆಚ್ಚು ಬೇವಿನ ಮರಗಳನ್ನು ಕಡಿದು ನಾಶಗೊಳಿಸಲಾಗಿದ್ದು, ಪಕ್ಕದ ಜಮೀನಿನ ಮಾಲೀಕನೇ ಕಡಿದು ಹಾಕಿದ್ದಾಗಿ ಆರೋಪ ಮಾಡಲಾಗಿದೆ. ಕೃತ್ಯ ಸಂಬಂಧ ಹೇಮಂತಕುಮಾರ್ ಅವರು ಜಯಪ್ಪ ವಿರುದ್ಧ ದಾವಣಗೆರೆ ಗ್ರಾಮಾಂತರ ಠಾಣೆಗೆ ದೂರು ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಗೌರಿಶಂಕರ್ ಕೊಲೆ ಸುಪಾರಿ ಕೊಟ್ಟಿದ್ದರೆಂದು ಪ್ರಪಂಚದ ಯಾವುದೇ ದೇವರ ಮುಂದೆ ಪ್ರಮಾಣ ಮಾಡಿ ಹೇಳಲು ಸಿದ್ಧ: ಬಿಜೆಪಿ ಮಾಜಿ ಶಾಸಕ

BWSSB ಕಾಮಗಾರಿ ವೇಳೆ ಸ್ಲ್ಯಾಬ್​ ಬಿದ್ದು ಕಾರ್ಮಿಕ ಸಾವು

ಬೆಂಗಳೂರು: ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(BWSSB) ಕಾಮಗಾರಿ ವೇಳೆ ಸ್ಲ್ಯಾಬ್​ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಗರದ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾಮಗಾರಿ ನಡೆಸುವ ವೇಳೆ ಸಿಮೆಂಟ್ ಸ್ಲ್ಯಾಬ್ ಕುಸಿದುಬಿದ್ದಿದೆ. ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕ ಸಾವನ್ನಪ್ಪಿದ್ದು, ಮೃತದೇಹವನ್ನು ರಾಜರಾಜೇಶ್ವರಿ ನಗರ ಆಸ್ಪತ್ರೆಗೆ ರವಾನಿಸಲಾಗಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:15 pm, Sat, 26 November 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ