AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫಜಲಪುರ ಪಟ್ಟಣದಲ್ಲಿ ಟ್ರ್ಯಾಕ್ಟರ್ ಹರಿದು ಪಾದಚಾರಿ ಸಾವು; ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಪಾದಾಚಾರಿ ಸಾವನ್ನಪ್ಪಿದ ಭೀಕರ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ನಡೆದಿದೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಫಜಲಪುರ ಪಟ್ಟಣದಲ್ಲಿ ಟ್ರ್ಯಾಕ್ಟರ್ ಹರಿದು ಪಾದಚಾರಿ ಸಾವು; ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಟ್ರ್ಯಾಕ್ಟರ್ ಹರಿದು ಪಾದಾಚಾರಿ ಸಾವು
TV9 Web
| Updated By: Rakesh Nayak Manchi|

Updated on:Nov 26, 2022 | 5:15 PM

Share

ಕಲಬುರಗಿ: ಟ್ರ್ಯಾಕ್ಟರ್ ಹರಿದು ಪಾದಾಚಾರಿ ಸಾವನ್ನಪ್ಪಿದ ಭೀಕರ ಘಟನೆ ಜಿಲ್ಲೆಯ ಅಫಜಲಪುರ ಪಟ್ಟಣದ ನಿಂಬಾಳ್​ ಪೆಟ್ರೋಲ್ ಬಂಕ್​ ಬಳಿ ನಡೆದಿದ್ದು, ಅಪಘಾತದ (Accident) ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಫಜಲಪುರ ಪಟ್ಟಣದ ನಿವಾಸಿ ಬರ್ಮಾ ದಂಡಗೂಲೆ (45) ಮೃತ ದುರ್ದೈವಿಯಾಗಿದ್ದಾರೆ. ಮುಂಜಾನೆ ರಸ್ತೆ ಪಕ್ಕದಲ್ಲಿ ಬರ್ಮಾ ದಂಡಗೂಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಟ್ರ್ಯಾಕ್ಟರ್​ನ ಇಂಜಿನ್​ಗೆ ಅಳವಡಿಸಿದ್ದ ಟೇಲರ್ ಸಂಪರ್ಕ ಕಡಿತಗೊಂಡು ಬರ್ಮಾ ಅವರ ಮೇಲೆ ಹರಿದಿದೆ.

ಇದನ್ನೂ ಓದಿ: ಸೆಲ್ಫೀ ತೆಗೆದುಕೊಳ್ಳುವಾಗ ಕಿತವಾಡ ಜಲಪಾತದಲ್ಲಿ ನೀರಿಗೆ ಜಾರಿದ ಯುವತಿಯರಲ್ಲಿ ನಾಲ್ವರು ಜಲಸಮಾಧಿ, ಒಬ್ಬಳ ಸ್ಥಿತಿ ಚಿಂತಾಜನಕ

ಜಮೀನಿನಲ್ಲಿ ಮರಗಳನ್ನು ಕಡಿದುಹಾಖಿದ ದುಷ್ಕರ್ಮಿಗಳು

ದಾವಣಗೆರೆ: ಜಮೀನಿನಲ್ಲಿದ್ದ 10ಕ್ಕೂ ಹೆಚ್ಚು ಮರಗಳು ದುಷ್ಕರ್ಮಿಗಳ ತಂಡವೊಂದು ಕಡಿದುಹಾಕಿದ ಘಟನೆ ತಾಲೂಕಿನ‌ ಗಡಿ ಗುಡಾಳ್ ಗ್ರಾಮದಲ್ಲಿ ನಡೆದಿದೆ. ಹೇಮಂತಕುಮಾರ್‌ ಎಂಬವರಿಗೆ ಸೇರಿದ ಜಮೀನಿನಲ್ಲಿ ಅವರ ತಂದೆಯ ಸಮಾಧಿ ಪಕ್ಕದಲ್ಲಿದ್ದ ಬೇವಿನ ಮರ ಸೇರಿದಂತೆ ಸುಮಾರು 10ಕ್ಕೂ ಹೆಚ್ಚು ಬೇವಿನ ಮರಗಳನ್ನು ಕಡಿದು ನಾಶಗೊಳಿಸಲಾಗಿದ್ದು, ಪಕ್ಕದ ಜಮೀನಿನ ಮಾಲೀಕನೇ ಕಡಿದು ಹಾಕಿದ್ದಾಗಿ ಆರೋಪ ಮಾಡಲಾಗಿದೆ. ಕೃತ್ಯ ಸಂಬಂಧ ಹೇಮಂತಕುಮಾರ್ ಅವರು ಜಯಪ್ಪ ವಿರುದ್ಧ ದಾವಣಗೆರೆ ಗ್ರಾಮಾಂತರ ಠಾಣೆಗೆ ದೂರು ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಗೌರಿಶಂಕರ್ ಕೊಲೆ ಸುಪಾರಿ ಕೊಟ್ಟಿದ್ದರೆಂದು ಪ್ರಪಂಚದ ಯಾವುದೇ ದೇವರ ಮುಂದೆ ಪ್ರಮಾಣ ಮಾಡಿ ಹೇಳಲು ಸಿದ್ಧ: ಬಿಜೆಪಿ ಮಾಜಿ ಶಾಸಕ

BWSSB ಕಾಮಗಾರಿ ವೇಳೆ ಸ್ಲ್ಯಾಬ್​ ಬಿದ್ದು ಕಾರ್ಮಿಕ ಸಾವು

ಬೆಂಗಳೂರು: ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(BWSSB) ಕಾಮಗಾರಿ ವೇಳೆ ಸ್ಲ್ಯಾಬ್​ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಗರದ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾಮಗಾರಿ ನಡೆಸುವ ವೇಳೆ ಸಿಮೆಂಟ್ ಸ್ಲ್ಯಾಬ್ ಕುಸಿದುಬಿದ್ದಿದೆ. ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕ ಸಾವನ್ನಪ್ಪಿದ್ದು, ಮೃತದೇಹವನ್ನು ರಾಜರಾಜೇಶ್ವರಿ ನಗರ ಆಸ್ಪತ್ರೆಗೆ ರವಾನಿಸಲಾಗಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:15 pm, Sat, 26 November 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ