AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡು ಪ್ರಾಣಿಗಳನ್ನ ಕೊಂದು ಟಿಕ್ ಟಾಕ್ ಮಾಡಿದ್ದ ಆರೋಪಿಗಳು ಅಂದರ್​

ಕಲಬುರಗಿ: ಇತ್ತೀಚೆಗೆ ಚೀನಾದ ಟಿಕ್ ಟಾಕ್ ಎಲ್ಲಡೆ ತನ್ನ ಸದ್ದನ್ನು ಜೋರಾಗಿ ಮಾಡ್ತಿದೆ. ಅನೇಕರು ತಮಗಿಷ್ಟವಾದ ವಿಡಿಯೋಗಳನ್ನು ಮಾಡಿ, ಟಿಕ್ ಟಾಕ್​ನಲ್ಲಿ ಹಾಕಿ, ಲೈಕ್, ಕಮೆಂಟ್​ಗಳನ್ನು ನೋಡಿ ಆನಂದ ಪಡ್ತಿದ್ದಾರೆ. ಇದು ಇದಕ್ಕಷ್ಟೇ ಸೀಮಿತವಾಗಿದ್ದರೆ ಯಾವುದೇ ಸಮಸ್ಯೆ ಇರ್ತಿರಲಿಲ್ಲ. ಆದ್ರೆ ಕಲಬುರಗಿಯಲ್ಲಿ ಅಳಿವಿನಂಚಿನಲ್ಲಿರುವ ಕಾಡು ಪ್ರಾಣಿಗಳನ್ನು ಕೊಂದು ಟಿಕ್ ಟಾಕ್ ವಿಡಿಯೋ ಮಾಡುತ್ತಿರುವವರ ಹಾವಾಳಿ ಹೆಚ್ಚಾಗಿದೆ. ಇದು ಅರಣ್ಯ ಇಲಾಖೆಯ ನಿದ್ದೆಗೆಡಿಸುತ್ತಿದೆ. ಇಬ್ಬರು ಆರೋಪಿಗಳ ಬಂಧನ: ಕಲಬುರಗಿ ಜಿಲ್ಲೆಯ ಅರಣ್ಯ ಇಲಾಖೆ ಅಧಿಕಾರಿಗಳು ಎರಡು ದಿನದ ಹಿಂದೆ […]

ಕಾಡು ಪ್ರಾಣಿಗಳನ್ನ ಕೊಂದು ಟಿಕ್ ಟಾಕ್ ಮಾಡಿದ್ದ ಆರೋಪಿಗಳು ಅಂದರ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: May 24, 2020 | 2:37 PM

Share

ಕಲಬುರಗಿ: ಇತ್ತೀಚೆಗೆ ಚೀನಾದ ಟಿಕ್ ಟಾಕ್ ಎಲ್ಲಡೆ ತನ್ನ ಸದ್ದನ್ನು ಜೋರಾಗಿ ಮಾಡ್ತಿದೆ. ಅನೇಕರು ತಮಗಿಷ್ಟವಾದ ವಿಡಿಯೋಗಳನ್ನು ಮಾಡಿ, ಟಿಕ್ ಟಾಕ್​ನಲ್ಲಿ ಹಾಕಿ, ಲೈಕ್, ಕಮೆಂಟ್​ಗಳನ್ನು ನೋಡಿ ಆನಂದ ಪಡ್ತಿದ್ದಾರೆ. ಇದು ಇದಕ್ಕಷ್ಟೇ ಸೀಮಿತವಾಗಿದ್ದರೆ ಯಾವುದೇ ಸಮಸ್ಯೆ ಇರ್ತಿರಲಿಲ್ಲ. ಆದ್ರೆ ಕಲಬುರಗಿಯಲ್ಲಿ ಅಳಿವಿನಂಚಿನಲ್ಲಿರುವ ಕಾಡು ಪ್ರಾಣಿಗಳನ್ನು ಕೊಂದು ಟಿಕ್ ಟಾಕ್ ವಿಡಿಯೋ ಮಾಡುತ್ತಿರುವವರ ಹಾವಾಳಿ ಹೆಚ್ಚಾಗಿದೆ. ಇದು ಅರಣ್ಯ ಇಲಾಖೆಯ ನಿದ್ದೆಗೆಡಿಸುತ್ತಿದೆ.

ಇಬ್ಬರು ಆರೋಪಿಗಳ ಬಂಧನ: ಕಲಬುರಗಿ ಜಿಲ್ಲೆಯ ಅರಣ್ಯ ಇಲಾಖೆ ಅಧಿಕಾರಿಗಳು ಎರಡು ದಿನದ ಹಿಂದೆ ಮುಳ್ಳು ಹಂದಿಯನ್ನು ಕೊಂದು ಟಿಕ್ ಟಾಕ್ ಮಾಡಿದ್ದ ಇಬ್ಬರನ್ನು ಬಂಧಿಸಿದ್ದಾರೆ. ತಾಲೂಕಿನ ಬೋಳೆವಾಡ ಗ್ರಾಮದ ಅಂಬರೀಶ್ ಮತ್ತು ನಾಗೇಶ್ ಅನ್ನೋ ಇಬ್ಬರು ಯುವಕರನ್ನು ಬಂಧಿಸಿ, ನ್ಯಾಯಂಗ ಬಂಧನಕ್ಕೊಪ್ಪಿಸಿದ್ದಾರೆ. ಬೋಳೆವಾಡ ಗ್ರಾಮದ ಹೊರವಲಯದಲ್ಲಿ ಮುಳ್ಳು ಹಂದಿಯನ್ನು ಭೇಟಿಯಾಡಿದ್ದ ಇವರು, ನಂತರ ಅದರ ಬಗ್ಗೆ ವಿಡಿಯೋಗಳನ್ನು ಮಾಡಿ, ಟಿಕ್ ಟಾಕ್​ನಲ್ಲಿ ಹರಿಬಿಟ್ಟಿದ್ದರು.

ಇದು ಕಲಬುರಗಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮುಟ್ಟಿತ್ತು. ಟಿಕ್ ಟಾಕ್ ಐಡಿಯನ್ನು ಪತ್ತೆಮಾಡಿ, ಅದರ ಬೆನ್ನುಬಿದ್ದಾಗ, ವಿಡಿಯೋ ಮಾಡಿ ಹರಿಬಿಟ್ಟವರು ಬೋಳೆವಾಡದ ಇಬ್ಬರು ಅನ್ನೋದನ್ನು ಅರಣ್ಯ ಇಲಾಖೆ ಸಿಬ್ಬಂದಿ ಪತ್ತೆ ಹಚ್ಚಿದ್ದರು. ಕೊನೆಗೆ ಇಬ್ಬರನ್ನು ಬಂಧಿಸಿದ್ದಾರೆ. ಇದು ಎರಡು ದಿನದ ಹಿಂದೆ ಕಲಬುರಗಿ ಜಿಲ್ಲೆಯಲ್ಲಿ ಟಿಕ್ ಟಾಕ್ ಶೋಕಿಗಾಗಿ ಕಾಡು ಪ್ರಾಣಿಗಳನ್ನು ಕೊಂದು, ಇದೀಗ ಕಂಬಿ ಹಿಂದೆ ಹೋದವರ ಕಥೆ. ಇಂತಹ ಅನೇಕ ಘಟನೆಗಳು ಕಲಬುರಗಿ ಜಿಲ್ಲೆಯಲ್ಲಿ ನಡೆಯುತ್ತಿವೆ. ಇದು ಅರಣ್ಯ ಇಲಾಖೆಯ ಸಿಬ್ಬಂದಿಗೆ ತಲೆನೋವಾಗಿ ಪರಿಣಮಿಸಿದೆ.

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ