AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಮದುವೆ ಮೆರವಣಿಗೆಯಲ್ಲಿ ಮಿನಿಲಾರಿ ಹರಿದು ನಾಲ್ವರು ಸಾವು! 10ಕ್ಕೂ ಹೆಚ್ಚು ಜನರಿಗೆ ಗಾಯ

ಮದನಾ ತಾಂಡದ ವಧು ಹಾಗೂ ಕಡತಾಲ ತಾಂಡಾದ ವರನ ಮದುವೆ ಗುರುವಾರ ಕಡತಾಲ ತಾಂಡಾದಲ್ಲಿ ನಡೆಯಬೇಕಾಗಿತ್ತು. ಮದುವೆಯ ಹಿಂದಿನ ದಿನ ಮದುಮಗಳನ್ನ ಕಡತಾಲ ತಾಂಡಾಕ್ಕೆ ಕರೆದುಕೊಂಡು ಬರಲಾಗಿತ್ತು.

ಕಲಬುರಗಿ ಮದುವೆ ಮೆರವಣಿಗೆಯಲ್ಲಿ ಮಿನಿಲಾರಿ ಹರಿದು ನಾಲ್ವರು ಸಾವು! 10ಕ್ಕೂ ಹೆಚ್ಚು ಜನರಿಗೆ ಗಾಯ
ಜನರ ಮೇಲೆ ಹರಿದ ಲಾರಿ
TV9 Web
| Updated By: sandhya thejappa|

Updated on:May 08, 2022 | 9:24 AM

Share

ಕಲಬುರಗಿ: ಮದುವೆ (Marriage) ಮೆರವಣಿಗೆಯಲ್ಲಿ ನೃತ್ಯ (Dance) ಮಾಡುತ್ತಿದ್ದವರ ಮೇಲೆ ಡಿಜೆ ಇದ್ದ ಮಿನಿಲಾರಿ ಹರಿದು ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಗಡಿ ಭಾಗದಲ್ಲಿ ನಡೆದಿದೆ. ಘಟನೆಯಲ್ಲಿ ಹತ್ತಕ್ಕೂ ಅಧಿಕ ಜನರು ಗಾಯಗೊಂಡಿದ್ದು, ನಾಲ್ಕು ದಿನದ ಹಿಂದೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತೆಲಂಗಾಣ- ಕರ್ನಾಟಕ ಗಡಿಭಾಗ ಸೇಡಂ ತಾಲೂಕಿನ ಕಡತಾಲ ತಾಂಡಾದಲ್ಲಿ ಕಳೆದ ಬುಧವಾರ ರಾತ್ರಿ ಇಂತಹದೊಂದು ದುರಂತ ನಡೆದಿದೆ.

ಮದನಾ ತಾಂಡದ ವಧು ಹಾಗೂ ಕಡತಾಲ ತಾಂಡಾದ ವರನ ಮದುವೆ ಗುರುವಾರ ಕಡತಾಲ ತಾಂಡಾದಲ್ಲಿ ನಡೆಯಬೇಕಾಗಿತ್ತು. ಮದುವೆಯ ಹಿಂದಿನ ದಿನ ಮದುಮಗಳನ್ನ ಕಡತಾಲ ತಾಂಡಾಕ್ಕೆ ಕರೆದುಕೊಂಡು ಬರಲಾಗಿತ್ತು. ಮದುಮಗಳನ್ನ ಸ್ವಾಗತಿಸಲು ತೆಲಂಗಾಣದಿಂದ ತರಿಸಲಾಗಿದ್ದ ಡಿಜೆ ಜೊತೆ ರಾತ್ರಿ ಮೆರವಣಿಗೆ ಮಾಡಲಾಗುತ್ತಿತ್ತು. ಬೇರೆ ಊರುಗಳಿಂದ ಆಗಮಿಸಿದ್ದ ಸಂಬಂಧಿಕರು ಕುಣಿದು ಸಂಭ್ರಮಿಸುವಾಗ ಡಿಜೆಯಿದ್ದ ಮಿನಿಲಾರಿ ಏಕಾಏಕಿ ಜನರ ಮೇಲೆ ಹರಿದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹತ್ತಕ್ಕೂ ಅಧಿಕ ಜನರು ಗಾಯಗೊಂಡಿದ್ದು, ಕಲಬುರಗಿಯ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸೇಡಂ ತಾಲೂಕಿನ ಮೇದಕ ತಾಂಡಾದ ಸುಗಣಾಬಾಯಿ ಚೌವ್ಹಾಣ (40), ತೆಲಂಗಾಣದ ದುಂಕುಡನಾಯಕ ತಾಂಡಾದ ವಿಜ್ಜಿಬಾಯಿ ರಾಥೋಡ್ (30), ಕುಮಾರನಾಯಕ ರಾಥೋಡ್ (35) ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಮುದೋಳ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಡಿ‌ಜೆ ಹಾಗೂ ಜನರೇಟರ್ ಇಡಲಾಗಿದ್ದ ಮಿನಿಲಾರಿಯನ್ನ ವಶಕ್ಕೆ ಪಡೆದಿದ್ದಾರೆ.

ಅಪಘಾತ ತಪ್ಪಿಸಲು ಹೋಗಿ 2 ವಾಹನಗಳಿಗೆ ಡಿಕ್ಕಿ ಹೊಡೆದ ಬೈಕ್​: ಬೆಳಗಾವಿ: ಅಪಘಾತ ತಪ್ಪಿಸಲು ಹೋಗಿ ಬೈಕ್ 2 ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಈ ಘಟನೆ ಬೆಳಗಾವಿ ತಾಲೂಕಿನ ಸುತಗಟ್ಟಿ ಗ್ರಾಮದ ಬಳಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತದ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಮೂವರಿಗೆ ಗಂಭೀರ ಗಾಯವಾಗಿದೆ.​ ಮೂವರು ಗಾಯಾಳುಗಳಿಗೆ ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ

ಮೈಸೂರಿನಲ್ಲಿ ಭಾರಿ ಮಳೆ; ಸೂರಿಲ್ಲದೆ ನಿವಾಸಿಗಳ ಪರದಾಟ, ಅಪಾರ ಪ್ರಮಾಣದ ಹಾನಿ

Mother’s Day 2022: ತಾಯಿಯ ನಿಸ್ವಾರ್ಥ ಪ್ರೀತಿ ಎಂದಿಗೂ ಶಾಶ್ವತ

Published On - 9:17 am, Sun, 8 May 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ