AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಮದುವೆ ಮೆರವಣಿಗೆಯಲ್ಲಿ ಮಿನಿಲಾರಿ ಹರಿದು ನಾಲ್ವರು ಸಾವು! 10ಕ್ಕೂ ಹೆಚ್ಚು ಜನರಿಗೆ ಗಾಯ

ಮದನಾ ತಾಂಡದ ವಧು ಹಾಗೂ ಕಡತಾಲ ತಾಂಡಾದ ವರನ ಮದುವೆ ಗುರುವಾರ ಕಡತಾಲ ತಾಂಡಾದಲ್ಲಿ ನಡೆಯಬೇಕಾಗಿತ್ತು. ಮದುವೆಯ ಹಿಂದಿನ ದಿನ ಮದುಮಗಳನ್ನ ಕಡತಾಲ ತಾಂಡಾಕ್ಕೆ ಕರೆದುಕೊಂಡು ಬರಲಾಗಿತ್ತು.

ಕಲಬುರಗಿ ಮದುವೆ ಮೆರವಣಿಗೆಯಲ್ಲಿ ಮಿನಿಲಾರಿ ಹರಿದು ನಾಲ್ವರು ಸಾವು! 10ಕ್ಕೂ ಹೆಚ್ಚು ಜನರಿಗೆ ಗಾಯ
ಜನರ ಮೇಲೆ ಹರಿದ ಲಾರಿ
TV9 Web
| Edited By: |

Updated on:May 08, 2022 | 9:24 AM

Share

ಕಲಬುರಗಿ: ಮದುವೆ (Marriage) ಮೆರವಣಿಗೆಯಲ್ಲಿ ನೃತ್ಯ (Dance) ಮಾಡುತ್ತಿದ್ದವರ ಮೇಲೆ ಡಿಜೆ ಇದ್ದ ಮಿನಿಲಾರಿ ಹರಿದು ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಗಡಿ ಭಾಗದಲ್ಲಿ ನಡೆದಿದೆ. ಘಟನೆಯಲ್ಲಿ ಹತ್ತಕ್ಕೂ ಅಧಿಕ ಜನರು ಗಾಯಗೊಂಡಿದ್ದು, ನಾಲ್ಕು ದಿನದ ಹಿಂದೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತೆಲಂಗಾಣ- ಕರ್ನಾಟಕ ಗಡಿಭಾಗ ಸೇಡಂ ತಾಲೂಕಿನ ಕಡತಾಲ ತಾಂಡಾದಲ್ಲಿ ಕಳೆದ ಬುಧವಾರ ರಾತ್ರಿ ಇಂತಹದೊಂದು ದುರಂತ ನಡೆದಿದೆ.

ಮದನಾ ತಾಂಡದ ವಧು ಹಾಗೂ ಕಡತಾಲ ತಾಂಡಾದ ವರನ ಮದುವೆ ಗುರುವಾರ ಕಡತಾಲ ತಾಂಡಾದಲ್ಲಿ ನಡೆಯಬೇಕಾಗಿತ್ತು. ಮದುವೆಯ ಹಿಂದಿನ ದಿನ ಮದುಮಗಳನ್ನ ಕಡತಾಲ ತಾಂಡಾಕ್ಕೆ ಕರೆದುಕೊಂಡು ಬರಲಾಗಿತ್ತು. ಮದುಮಗಳನ್ನ ಸ್ವಾಗತಿಸಲು ತೆಲಂಗಾಣದಿಂದ ತರಿಸಲಾಗಿದ್ದ ಡಿಜೆ ಜೊತೆ ರಾತ್ರಿ ಮೆರವಣಿಗೆ ಮಾಡಲಾಗುತ್ತಿತ್ತು. ಬೇರೆ ಊರುಗಳಿಂದ ಆಗಮಿಸಿದ್ದ ಸಂಬಂಧಿಕರು ಕುಣಿದು ಸಂಭ್ರಮಿಸುವಾಗ ಡಿಜೆಯಿದ್ದ ಮಿನಿಲಾರಿ ಏಕಾಏಕಿ ಜನರ ಮೇಲೆ ಹರಿದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹತ್ತಕ್ಕೂ ಅಧಿಕ ಜನರು ಗಾಯಗೊಂಡಿದ್ದು, ಕಲಬುರಗಿಯ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸೇಡಂ ತಾಲೂಕಿನ ಮೇದಕ ತಾಂಡಾದ ಸುಗಣಾಬಾಯಿ ಚೌವ್ಹಾಣ (40), ತೆಲಂಗಾಣದ ದುಂಕುಡನಾಯಕ ತಾಂಡಾದ ವಿಜ್ಜಿಬಾಯಿ ರಾಥೋಡ್ (30), ಕುಮಾರನಾಯಕ ರಾಥೋಡ್ (35) ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಮುದೋಳ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಡಿ‌ಜೆ ಹಾಗೂ ಜನರೇಟರ್ ಇಡಲಾಗಿದ್ದ ಮಿನಿಲಾರಿಯನ್ನ ವಶಕ್ಕೆ ಪಡೆದಿದ್ದಾರೆ.

ಅಪಘಾತ ತಪ್ಪಿಸಲು ಹೋಗಿ 2 ವಾಹನಗಳಿಗೆ ಡಿಕ್ಕಿ ಹೊಡೆದ ಬೈಕ್​: ಬೆಳಗಾವಿ: ಅಪಘಾತ ತಪ್ಪಿಸಲು ಹೋಗಿ ಬೈಕ್ 2 ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಈ ಘಟನೆ ಬೆಳಗಾವಿ ತಾಲೂಕಿನ ಸುತಗಟ್ಟಿ ಗ್ರಾಮದ ಬಳಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತದ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಮೂವರಿಗೆ ಗಂಭೀರ ಗಾಯವಾಗಿದೆ.​ ಮೂವರು ಗಾಯಾಳುಗಳಿಗೆ ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ

ಮೈಸೂರಿನಲ್ಲಿ ಭಾರಿ ಮಳೆ; ಸೂರಿಲ್ಲದೆ ನಿವಾಸಿಗಳ ಪರದಾಟ, ಅಪಾರ ಪ್ರಮಾಣದ ಹಾನಿ

Mother’s Day 2022: ತಾಯಿಯ ನಿಸ್ವಾರ್ಥ ಪ್ರೀತಿ ಎಂದಿಗೂ ಶಾಶ್ವತ

Published On - 9:17 am, Sun, 8 May 22

ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ