AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಪೂಜಿ ಸೇವಾಕೇಂದ್ರಗಳಲ್ಲಿ 44 ಹೆಚ್ಚುವರಿ ಸೇವೆ ಲಭ್ಯ; ಯಾವೆಲ್ಲಾ ಸೌಲಭ್ಯಗಳು ಇರಲಿವೆ ಗೊತ್ತಾ?

ಬಾಪೂಜಿ ಸೇವಾ ಕೇಂದ್ರ (Bapuji Service Center)ಗಳ ಮೂಲಕ ಈಗಾಗಲೇ ಒದಗಿಸುತ್ತಿರುವ 28 ಸೇವೆಗಳ ಜೊತೆಗೆ ನಾಡ ಕಚೇರಿಗಳ ಅಟಲ್‌ಜಿ ಜನಸ್ನೇಹಿ ಕೇಂದ್ರಗಳಲ್ಲಿ ಲಭ್ಯವಿದ್ದ ಇನ್ನೂ 44 ಸೇವೆಗಳನ್ನು ಪಡೆದುಕೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಅನುವು ಮಾಡಿಕೊಟ್ಟಿದೆ.

ಬಾಪೂಜಿ ಸೇವಾಕೇಂದ್ರಗಳಲ್ಲಿ 44 ಹೆಚ್ಚುವರಿ ಸೇವೆ ಲಭ್ಯ; ಯಾವೆಲ್ಲಾ ಸೌಲಭ್ಯಗಳು ಇರಲಿವೆ ಗೊತ್ತಾ?
ಬಾಪೂಜಿ ಸೇವಾ ಕೇಂದ್ರದಲ್ಲಿ ಹೆಚ್ಚುವರಿ ಸೌಲಭ್ಯ
ಸಂಜಯ್ಯಾ ಚಿಕ್ಕಮಠ
| Edited By: |

Updated on: Oct 03, 2023 | 7:47 PM

Share

ಕಲಬುರಗಿ, ಅ.03: ಗ್ರಾಮೀಣ ಜನತೆಗೆ ಅವಶ್ಯವಿರುವ ವಿವಿಧ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು 2016 ರಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಆರಂಭಿಸಿದ ಬಾಪೂಜಿ ಸೇವಾ ಕೇಂದ್ರ (Bapuji Service Center)ಗಳ ಮೂಲಕ ಈಗಾಗಲೇ ಒದಗಿಸುತ್ತಿರುವ 28 ಸೇವೆಗಳ ಜೊತೆಗೆ ನಾಡ ಕಚೇರಿಗಳ ಅಟಲ್‌ಜಿ ಜನಸ್ನೇಹಿ ಕೇಂದ್ರಗಳಲ್ಲಿ ಲಭ್ಯವಿದ್ದ ಇನ್ನೂ 44 ಸೇವೆಗಳನ್ನು ಪಡೆದುಕೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಅನುವು ಮಾಡಿಕೊಟ್ಟಿದೆ. ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸೇವೆಗಳಿಗೆ ಚಾಲನೆ ನೀಡಿದ್ದು, ಈ ಸೇವೆ ಬಳಸಿಕೊಳ್ಳಲು‌ ಸಚಿವ ಪ್ರಿಯಾಂಕ್ ಖರ್ಗೆ(Priyank kharge) ಮನವಿ ಮಾಡಿದ್ದಾರೆ.

ಬಾಪೂಜಿ ಕೇಂದ್ರಗಳಲ್ಲಿ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸೇವೆಗಳ ಜೊತೆಯಲ್ಲಿ ಇನ್ನು ಮುಂದೆ ಸಾರ್ವಜನಿಕರು ಕಂದಾಯ, ಕಾರ್ಮಿಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಇಂಧನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗಳ ಸೇವೆಗಳನ್ನು ಪಡೆಯಬಹುದಿದ್ದು,ಆಧಾರ್‌ ಸೇವೆಗಳ ಸೌಲಭ್ಯವನ್ನು ಹೊಂದಬಹುದಾಗಿದೆ.

ಇದನ್ನೂ ಓದಿ:ಹಾವೇರಿಯಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಬಾಪೂಜಿ ಸೇವಾ ಕೇಂದ್ರ: ಕಚೇರಿಗಳಿಗೆ ಅಲೆದಲೆದು ಸಾರ್ವಜನಿಕರು ಹೈರಾಣ

ಇನ್ನು ಪ್ರತಿಯೊಂದು ಹೋಬಳಿಯು 6 ರಿಂದ 7 ಗ್ರಾಮ ಪಂಚಾಯತಿಗಳನ್ನು ಹೊಂದಿದ್ದು, ಈ ವ್ಯಾಪ್ತಿಯ 20-50 ಸಾವಿರ ಜನರು ವಿವಿಧ ಸರ್ಕಾರಿ ಸೇವೆಗಳನ್ನು ಪಡೆಯಲು ಹೋಬಳಿ ಕೇಂದ್ರಕ್ಕೆ ಹೋಗಬೇಕಾಗಿತ್ತು. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿತ್ತು. ಈ ಸಮಸ್ಯೆಗೆ ಪರಿಹಾರವಾಗಿ ನಾಡ ಕಚೇರಿಗಳ ಅಟಲ್‌ಜಿ ಜನಸ್ನೇಹಿ ನಿರ್ದೇಶನಾಲಯದಡಿ ಸಿಗುತ್ತಿದ್ದ ಆದಾಯ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸ ಸ್ಥಳ ಪ್ರಮಾಣ ಪತ್ರ ಗಳಂತಹ ಪ್ರಮುಖ ಸೇವೆಗಳನ್ನು ದಕ್ಷ ಹಾಗೂ ತ್ವರಿತ ರೀತಿಯಲ್ಲಿ ಗ್ರಾಮ ಪಂಚಾಯತಿಗಳ ಮೂಲಕವೇ ನೀಡಲು ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೂತನವಾಗಿ ಒದಗಿಸಲು ಸರ್ಕಾರವು ನಿರ್ಧರಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಬಾಪೂಜಿ ಸೇವಾ ಕೇಂದ್ರಗಳಲ್ಲಿ ಲಭ್ಯವಿರುವ ಸೇವೆಗಳು

ಜನಸಂಖ್ಯಾ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ (ಪ್ರವರ್ಗ-ಎ), ಜಾತಿ ಪ್ರಮಾಣ ಪತ್ರ (ಅ.ಜಾ/ಅ.ಪಂ), ಹಿಂದುಳಿದ ವರ್ಗ ಪ್ರ.ಪತ್ರ (ಕೇ.ಸ), ವಾಸ ಸ್ಥಳ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಗೇಣಿರಹಿತ ದೃಢೀಕರಣ ಪತ್ರ, ವಿಧವೆ ದೃಢೀಕರಣ ಪತ್ರ, ಜೀವಂತ ದೃಡೀಕರಣ ಪತ್ರ, ವ್ಯವಸಾಯಗಾರರ ಕುಟುಂಬದ ದೃಡೀಕರಣ ಪತ್ರ, ಮರುವಿವಾಹವಾಗದಿರುವ ಬಗ್ಗೆ ದೃಡೀಕರಣ ಪತ್ರ, ಜಮೀನು ಇಲ್ಲದಿರುವ ಬಗ್ಗೆ ದೃಡೀಕರಣ ಪತ್ರ, ಮೃತರ ಕುಟುಂಬ ಸದಸ್ಯರ ದೃಡೀಕರಣ ಪತ್ರ, ನಿರುದ್ಯೋಗಿ ದೃಢಿಕರಣ ಪತ್ರ, ಸರ್ಕಾರಿ ನೌಕರಿ ಇಲ್ಲದಿರುವ ಬಗ್ಗೆ ಪ್ರಮಾಣ ಪತ್ರ, ವ್ಯವಸಾಯಗಾರ ದೃಡಿಕರಣ ಪತ್ರ, ಸಣ್ಣ /ಅತಿ ಸಣ್ಣ ಹಿಡುವಳಿದಾರ ಪ್ರಮಾಣ ಪತ್ರ, ಕೃಷಿ ಕಾರ್ಮಿಕ ಪ್ರಮಾಣ ಪತ್ರ, ಮೇಲುಸ್ಥರಕ್ಕೆ ಸೇರಿಲ್ಲವೆಂದು ದೃಢಿಕರಣ ಪತ್ರ, ಭೂ ಹಿಡುವಳಿ ಪ್ರಮಾಣ ಪತ್ರ.

ಇದನ್ನೂ ಓದಿ:ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ: ಅರ್ಜಿ ಸಲ್ಲಿಕೆಗೆ ಅರ್ಹತೆ ಏನು? ಕೊನೆಯ ದಿನಾಂಕ ಯಾವಾಗ? ಇಲ್ಲಿದೆ ಮಾಹಿತಿ

ಜೊತೆಗೆ ಬೋನಫೈಡ್ ದೃಡಿಕರಣ ಪತ್ರ, ಸಾಲ ತೀರಿಸುವ ಶಕ್ತಿ ಪ್ರಮಾಣ ಪತ್ರ, ನಿವಾಸಿ ಪ್ರಮಾಣ ಪತ್ರ, ಆದಾಯ ದೃಢಿಕರಣ ಪತ್ರ (ಉದ್ಯೋಗದ ಸಲುವಾಗಿ ಮಾತ್ರ), ಆದಾಯ ದೃಢಿಕರಣ ಪತ್ರ (ಅನುಕಂಪದ ಆದಾರದ ನೇಮಕಾತಿಗೆ), ಕುಟುಂಬ ವಂಶವೃಕ್ಷ ದೃಢಿಕರಣ ಪತ್ರ, ಹೈದ್ರಾಬಾದ್-ಕರ್ನಾಟಕ ವಿಭಾಗ/ವಲಯದ ವಾಸಸ್ಥಳ ದೃಢೀಕರಣ ಪತ್ರ, ಬೆಳೆ ದೃಡೀಕರಣ ಪತ್ರ, ಅಲ್ಪಸಂಖ್ಯಾತ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ (ಆರ್ಯ ವೈಶ್ಯ), ಆದಾಯ ಹಾಗೂ ಆಸ್ತಿ ಪ್ರಮಾಣಪತ್ರ (EWS), ಜಾತಿ ಪ್ರಮಾಣಪತ್ರ, ಅಂಗವಿಕಲ ಪೋಷಣಾ ವೇತನ, ನಿರ್ಗತಿಕ ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ರಾಷ್ಟ್ರೀಯ ಕುಟುಂಬ ಕ್ಷೇಮ ಯೋಜನೆ, ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಮೈತ್ರಿ, ಮನಸ್ವಿನಿ, ಅಂತ್ಯ ಸಂಸ್ಕಾರ ಯೋಜನೆ, ಆಸಿಡ್ ದಾಳಿಗೊಳಗಾದ ಮಹಿಳೆಯ ವೇತನ, ರೈತರ ವಿಧವಾ ವೇತನ ಮತ್ತು ಎಂಡೋಸಲ್ಫಾನ್ ವಿಕ್ಟಿಮ್ ಪೆನ್ಷನ್ ಸೇರಿದಂತೆ ಎಲ್ಲ ಸೌಲಭ್ಯಗಳು ಸಿಗಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ