AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾಕ್ಟರ್​​ ಆಗಬೇಕೆಂಬ ಕನಸು ನನಸಾಗದಿದ್ದಕ್ಕೆ ಜೀವ ಕಳೆದುಕೊಂಡ ವಿದ್ಯಾರ್ಥಿನಿ

ಸಿಇಟಿಯಲ್ಲಿ ಕಡಿಮೆ ಅಂಕ ಪಡೆದಿದ್ದರಿಂದ ಎಂಬಿಬಿಎಸ್ ಸೀಟು ಸಿಕ್ಕಿಲ್ಲವೆಂದು ವಿದ್ಯಾರ್ಥಿನಿಯೋರ್ವಳು ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಎರಡು ಬಾರಿಯೂ ಎಂಬಿಬಿಎಸ್ ಸೀಟ್‌ ಸಿಗದಿದ್ದಕ್ಕೆ ಮನನೊಂದಿದ್ದ ತನುಜಾ ಎನ್ನುವ ಕಲಬುರಗಿ ಮೂಲದ ವಿದ್ಯಾರ್ಥಿನಿ ಚಲಿಸುವ ರೈಲಿನಿಂದಲೇ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಡಾಕ್ಟರ್​​ ಆಗಬೇಕೆಂಬ ಕನಸು ನನಸಾಗದಿದ್ದಕ್ಕೆ ಜೀವ ಕಳೆದುಕೊಂಡ ವಿದ್ಯಾರ್ಥಿನಿ
ತನುಜಾ
ರಮೇಶ್ ಬಿ. ಜವಳಗೇರಾ
|

Updated on:Dec 06, 2024 | 7:00 PM

Share

ಕಲಬುರಗಿ, (ಡಿಸೆಂಬರ್ 06): ಎಂಬಿಬಿಎಸ್​ ವೈದ್ಯೆಯಾಗಬೇಕೆಂಬ ಕನಸು ನನಸಾಗದಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅನಂತಪುರ ಜಿಲ್ಲೆಯ ರಾಯದುರ್ಗದಲ್ಲಿ ನಡೆದಿದೆ. ಕಲಬುರಗಿ ಮೂಲದ ತನುಜಾ ಎನ್ನುವ ವಿದ್ಯಾರ್ಥಿನಿ, ವೈದ್ಯೆಯಾಗಬೇಕೆಂಬ ಕನಸು ಕಂಡಿದ್ದಳು. ಆದ್ರೆ, ಸಿಇಟಿಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಎರಡೂ ಬಾರಿಯೂ ಸಹ ಎಂಬಿಬಿಎಸ್​ ಸೀಟು ಸಿಕ್ಕಿರಲಿಲ್ಲ. ಇದರಿಂದ ಮನನೊಂದಿದ್ದ ತನುಜಾ, ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಅನಂತಪುರ ಜಿಲ್ಲೆಯ ರಾಯದುರ್ಗದ ಬಳಿ ರೈಲಿನಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದಾಳೆ.

ರಾಯದುರ್ಗದ ಉಪನಗರದ ರೈಲ್ವೆ ಹಳಿಯಲ್ಲಿ ಯುವತಿಯ ಶವವನ್ನು ರೈಲ್ವೆ ಪೊಲೀಸರು ಪತ್ತೆ ಮಾಡಿದ್ದು, ಕೂಡಲೇ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಆರಂಭದಲ್ಲಿ ಆಕಸ್ಮಿಕವಾಗಿ ರೈಲಿನಿಂದ ಬಿದ್ದು ಯುವತಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು. ಆದ್ರೆ, ಸಾಯುವ ಮುನ್ನ ತನುಜಾ ತನ್ನ ಪೋಷಕರಿಗೆ ದೂರವಾಣಿ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿರುವುದು ಗೊತ್ತಾಗಿದೆ. ಆಗ ಪೊಲೀಸರಿಗೆ ಇದೊಂದು ಆಕಸ್ಮಕ ಸಾವು ಅಲ್ಲ, ಆತ್ಮಹತ್ಯೆ ಎನ್ನುವುದು ಖಚಿತವಾಗಿದೆ.

ವೈದ್ಯೆಯಾಗಬೇಕೆಂಬ ಕನಸು ಕಂಡಿದ್ದ ತನುಜಾ, ಎರಡೂ ಬಾರಿ ಪ್ರಯತ್ನಿಸಿದರೂ ಸಹ ಎಂಬಿಬಿಎಸ್ ಸೀಟು ಸಿಕ್ಕಿರಲಿಲ್ಲ. ಇದರಿಂದ ತನುಜಾ ಹತಾಷೆಗೊಂಡಿದ್ದಳು. ಆದರೂ ಪೋಷಕರು ಮನವೊಲಿಸಿ, ದೃತಿಗೆಡಬೇಡ ಎಂದು ಧೈರ್ಯ ತುಂಬಿ ಎಂಬಿಬಿಎಸ್ ಸೀಟ್​ ಸಿಗದಿದ್ದಕ್ಕೆ ಚಿಂತೆ ಮಾಡದೇ ಬಿ.ಎ.ಎಂ.ಎಸ್​ ಮಾಡು ಎಂದು ಹೇಳಿ ಮನವೊಲಿಸಿದ್ದರು. ಅದರಂತೆ ತನುಜಾ ಬಿ.ಎ.ಎಂ.ಎಸ್​ ಪದವಿಗೆ ಪ್ರವೇಶ ಪಡೆದಿದ್ದಳು. ಆದರೂ ಸಹ ತನುಜಾ ಮನಸ್ಸಲ್ಲಿ ಎರಡೂ ಸಲ ಎಂಬಿಬಿಎಸ್​ ಸೀಟು ಸಿಗಲಿಲ್ಲವೆಂಬ ನೋವು ಕಾಡುತ್ತಲೇ ಇತ್ತು. ಕೊನೆಗೆ ತನುಜಾ, ಸಾಯುವ ನಿರ್ಧಾರ ಮಾಡಿ ರೈಲಿನಿಂದ ಜಿಗಿದು ಪ್ರಾಣ ಬಿಟ್ಟಿದ್ದಾಳೆ.

Published On - 6:39 pm, Fri, 6 December 24

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ