AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾಕ್ಟರ್​​ ಆಗಬೇಕೆಂಬ ಕನಸು ನನಸಾಗದಿದ್ದಕ್ಕೆ ಜೀವ ಕಳೆದುಕೊಂಡ ವಿದ್ಯಾರ್ಥಿನಿ

ಸಿಇಟಿಯಲ್ಲಿ ಕಡಿಮೆ ಅಂಕ ಪಡೆದಿದ್ದರಿಂದ ಎಂಬಿಬಿಎಸ್ ಸೀಟು ಸಿಕ್ಕಿಲ್ಲವೆಂದು ವಿದ್ಯಾರ್ಥಿನಿಯೋರ್ವಳು ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಎರಡು ಬಾರಿಯೂ ಎಂಬಿಬಿಎಸ್ ಸೀಟ್‌ ಸಿಗದಿದ್ದಕ್ಕೆ ಮನನೊಂದಿದ್ದ ತನುಜಾ ಎನ್ನುವ ಕಲಬುರಗಿ ಮೂಲದ ವಿದ್ಯಾರ್ಥಿನಿ ಚಲಿಸುವ ರೈಲಿನಿಂದಲೇ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಡಾಕ್ಟರ್​​ ಆಗಬೇಕೆಂಬ ಕನಸು ನನಸಾಗದಿದ್ದಕ್ಕೆ ಜೀವ ಕಳೆದುಕೊಂಡ ವಿದ್ಯಾರ್ಥಿನಿ
ತನುಜಾ
ರಮೇಶ್ ಬಿ. ಜವಳಗೇರಾ
|

Updated on:Dec 06, 2024 | 7:00 PM

Share

ಕಲಬುರಗಿ, (ಡಿಸೆಂಬರ್ 06): ಎಂಬಿಬಿಎಸ್​ ವೈದ್ಯೆಯಾಗಬೇಕೆಂಬ ಕನಸು ನನಸಾಗದಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅನಂತಪುರ ಜಿಲ್ಲೆಯ ರಾಯದುರ್ಗದಲ್ಲಿ ನಡೆದಿದೆ. ಕಲಬುರಗಿ ಮೂಲದ ತನುಜಾ ಎನ್ನುವ ವಿದ್ಯಾರ್ಥಿನಿ, ವೈದ್ಯೆಯಾಗಬೇಕೆಂಬ ಕನಸು ಕಂಡಿದ್ದಳು. ಆದ್ರೆ, ಸಿಇಟಿಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಎರಡೂ ಬಾರಿಯೂ ಸಹ ಎಂಬಿಬಿಎಸ್​ ಸೀಟು ಸಿಕ್ಕಿರಲಿಲ್ಲ. ಇದರಿಂದ ಮನನೊಂದಿದ್ದ ತನುಜಾ, ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಅನಂತಪುರ ಜಿಲ್ಲೆಯ ರಾಯದುರ್ಗದ ಬಳಿ ರೈಲಿನಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದಾಳೆ.

ರಾಯದುರ್ಗದ ಉಪನಗರದ ರೈಲ್ವೆ ಹಳಿಯಲ್ಲಿ ಯುವತಿಯ ಶವವನ್ನು ರೈಲ್ವೆ ಪೊಲೀಸರು ಪತ್ತೆ ಮಾಡಿದ್ದು, ಕೂಡಲೇ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಆರಂಭದಲ್ಲಿ ಆಕಸ್ಮಿಕವಾಗಿ ರೈಲಿನಿಂದ ಬಿದ್ದು ಯುವತಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು. ಆದ್ರೆ, ಸಾಯುವ ಮುನ್ನ ತನುಜಾ ತನ್ನ ಪೋಷಕರಿಗೆ ದೂರವಾಣಿ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿರುವುದು ಗೊತ್ತಾಗಿದೆ. ಆಗ ಪೊಲೀಸರಿಗೆ ಇದೊಂದು ಆಕಸ್ಮಕ ಸಾವು ಅಲ್ಲ, ಆತ್ಮಹತ್ಯೆ ಎನ್ನುವುದು ಖಚಿತವಾಗಿದೆ.

ವೈದ್ಯೆಯಾಗಬೇಕೆಂಬ ಕನಸು ಕಂಡಿದ್ದ ತನುಜಾ, ಎರಡೂ ಬಾರಿ ಪ್ರಯತ್ನಿಸಿದರೂ ಸಹ ಎಂಬಿಬಿಎಸ್ ಸೀಟು ಸಿಕ್ಕಿರಲಿಲ್ಲ. ಇದರಿಂದ ತನುಜಾ ಹತಾಷೆಗೊಂಡಿದ್ದಳು. ಆದರೂ ಪೋಷಕರು ಮನವೊಲಿಸಿ, ದೃತಿಗೆಡಬೇಡ ಎಂದು ಧೈರ್ಯ ತುಂಬಿ ಎಂಬಿಬಿಎಸ್ ಸೀಟ್​ ಸಿಗದಿದ್ದಕ್ಕೆ ಚಿಂತೆ ಮಾಡದೇ ಬಿ.ಎ.ಎಂ.ಎಸ್​ ಮಾಡು ಎಂದು ಹೇಳಿ ಮನವೊಲಿಸಿದ್ದರು. ಅದರಂತೆ ತನುಜಾ ಬಿ.ಎ.ಎಂ.ಎಸ್​ ಪದವಿಗೆ ಪ್ರವೇಶ ಪಡೆದಿದ್ದಳು. ಆದರೂ ಸಹ ತನುಜಾ ಮನಸ್ಸಲ್ಲಿ ಎರಡೂ ಸಲ ಎಂಬಿಬಿಎಸ್​ ಸೀಟು ಸಿಗಲಿಲ್ಲವೆಂಬ ನೋವು ಕಾಡುತ್ತಲೇ ಇತ್ತು. ಕೊನೆಗೆ ತನುಜಾ, ಸಾಯುವ ನಿರ್ಧಾರ ಮಾಡಿ ರೈಲಿನಿಂದ ಜಿಗಿದು ಪ್ರಾಣ ಬಿಟ್ಟಿದ್ದಾಳೆ.

Published On - 6:39 pm, Fri, 6 December 24

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?