AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalaburagi News: ಬಂಧಿಸಲು ಹೋದಾಗ PSI ಪಿಸ್ತೂಲ್​ ಕಸಿದುಕೊಂಡು ಪರಾರಿಯಾದ ಕುಖ್ಯಾತ ಕಳ್ಳ

ಕಳ್ಳನೋರ್ವ ಪಿಎಸ್​ಐ ಸರ್ವಿಸ್ ರಿವಾಲ್ವರ್ ಕಸಿದುಕೊಂಡು ಪರಾರಿಯಾದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ನಡೆದಿದೆ.

Kalaburagi News: ಬಂಧಿಸಲು ಹೋದಾಗ PSI ಪಿಸ್ತೂಲ್​ ಕಸಿದುಕೊಂಡು ಪರಾರಿಯಾದ ಕುಖ್ಯಾತ ಕಳ್ಳ
ಅಫಜಲಪುರ ಪೊಲೀಸ್ ಠಾಣೆ
ಸಂಜಯ್ಯಾ ಚಿಕ್ಕಮಠ
| Edited By: |

Updated on: Jul 17, 2023 | 11:05 AM

Share

ಕಲಬುರಗಿ: ಕುಖ್ಯಾತ ಕಳ್ಳನೋರ್ವ ಪಿಎಸ್​ಐ ಸರ್ವಿಸ್ ರಿವಾಲ್ವರ್  (revolver) ಕಸಿದುಕೊಂಡು ಪರಾರಿಯಾದ ಘಟನೆ ನಿನ್ನೆ ರಾತ್ರಿ (ಜುಲೈ 16) ಕಲಬುರಗಿ(Kalaburagi) ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ನಡೆದಿದೆ. ಅಫಜಲಪುರ ತಾಲೂಕಿನ ಬಳ್ಳೂರಗಿ ಮೂಲದ ಖಾಜಪ್ಪ ಎನ್ನುವ ಕುಖ್ಯಾತ ಕಳ್ಳ ಅಫಜಲಪುರ PSI ಭೀಮರಾಯ್ ಬಂಕಲಿ ಅವರ ರಿವಾಲ್ವರ್ ಕಸಿದುಕೊಂಡು ಪರಾರಿಯಾಗಿದ್ದಾನೆ. ಸಿಸಿಬಿ ಪೊಲೀಸರು ಖಾಜಪ್ಪ ಎಂಬಾತನನ್ನ ಬಂಧಿಸಲು ಬೆಂಗಳೂರಿನಿಂದ ಅಫಜಲಪುರಕ್ಕೆ ಬಂದಿದ್ದರು. ಈ ವೇಳೆ ಪಿಎಸ್‌ಐ ಭೀಮರಾಯ್ ಅವರ ಸರ್ವಿಸ್ ರಿವಾಲ್ವರ್ ತಗೆದುಕೊಂಡ ಎಸ್ಕೇಪ್ ಆಗಿದ್ದಾನೆ.

ಇದನ್ನೂ ಓದಿ: Kalaburagi News: ಮೇಲಧಿಕಾರಿಗಳು ಹಫ್ತಾ ವಸೂಲಿಗೆ ಒತ್ತಡ ಹೇರುತ್ತಾರೆಂದು ಆರೋಪಿಸಿದ ಕಾನ್​ಸ್ಟೇಬಲ್​​ಗಳು, ಆತ್ಮಹತ್ಯೆಗೆ ಯತ್ನ

ಖಾಜಪ್ಪ ವಿರುದ್ಧ ಬೆಂಗಳೂರು, ಅಫಜಲಪುರ, ಕಲಬುರಗಿ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ 20 ಅಧಿಕ ಕಳ್ಳತನ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ಬಳಿ ಡಸ್ಟರ್ ವಾಹನದಲ್ಲಿ ಕೂತಿದ್ದ ಖಾಜಪ್ಪನನ್ನು ಪೊಲೀಸ್ ತಂಡ ಹಿಡಿಯಲು ಹೋಗಿದ್ದರು. ಈ ವೇಳೆ ಪಿಎಸ್ಐ ತನ್ನ ಸರ್ವಿಸ್ ಪಿಸ್ತೂಲ್ ನಿಂದ ಕಾರಿನ ಗ್ಲಾಸ್ ಒಡೆಯಲು ಮುಂದಾಗಿದ್ದರು. ಈ ಸಮಯದಲ್ಲಿ ಖಾಜಪ್ಪ ಪಿಸ್ತೂಲ್ ಕಸಿದುಕೊಂಡು ಪರಾರಿಯಾಗಿದ್ದಾನೆ.

ಬಳಿಕ ಕಳೆದ ರಾತ್ರಿ ಇಡೀ ಪೊಲೀಸರ ತಂಡ ಕಾರ್ಯಚರಣೆ ನಡೆಸಿದರೂ ಖಾಜಪ್ಪ ಸಿಕ್ಕಿಲ್ಲ. ಪುಲ್ ಲೋಡೆಡ್ ಸರ್ವಿಸ್ ಪಿಸ್ತೂಲ್ ಸಮೇತ ಪರಾರಿಯಾಗಿದ್ದರಿಂದ ಆತಂಕಕ್ಕೆ ಕಾರಣವಾಗಿದೆ. ಇನ್ನು ಇನ್ನು ಅಫಜಲಪುರ ಠಾಣೆಗೆ ಕಲಬುರಗಿ ‌ಎಸ್ಪಿ ಇಶಾ ಪಂತ್ ಭೇಟಿ ಮಾಹಿತಿ ಪಡೆದುಕೊಂಡಿದ್ದಾರೆ.

ಇನ್ನಷ್ಟು ಕಲಬುರಗಿ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ