AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalaburagi News: ಬಂಧಿಸಲು ಹೋದಾಗ PSI ಪಿಸ್ತೂಲ್​ ಕಸಿದುಕೊಂಡು ಪರಾರಿಯಾದ ಕುಖ್ಯಾತ ಕಳ್ಳ

ಕಳ್ಳನೋರ್ವ ಪಿಎಸ್​ಐ ಸರ್ವಿಸ್ ರಿವಾಲ್ವರ್ ಕಸಿದುಕೊಂಡು ಪರಾರಿಯಾದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ನಡೆದಿದೆ.

Kalaburagi News: ಬಂಧಿಸಲು ಹೋದಾಗ PSI ಪಿಸ್ತೂಲ್​ ಕಸಿದುಕೊಂಡು ಪರಾರಿಯಾದ ಕುಖ್ಯಾತ ಕಳ್ಳ
ಅಫಜಲಪುರ ಪೊಲೀಸ್ ಠಾಣೆ
ಸಂಜಯ್ಯಾ ಚಿಕ್ಕಮಠ
| Edited By: |

Updated on: Jul 17, 2023 | 11:05 AM

Share

ಕಲಬುರಗಿ: ಕುಖ್ಯಾತ ಕಳ್ಳನೋರ್ವ ಪಿಎಸ್​ಐ ಸರ್ವಿಸ್ ರಿವಾಲ್ವರ್  (revolver) ಕಸಿದುಕೊಂಡು ಪರಾರಿಯಾದ ಘಟನೆ ನಿನ್ನೆ ರಾತ್ರಿ (ಜುಲೈ 16) ಕಲಬುರಗಿ(Kalaburagi) ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ನಡೆದಿದೆ. ಅಫಜಲಪುರ ತಾಲೂಕಿನ ಬಳ್ಳೂರಗಿ ಮೂಲದ ಖಾಜಪ್ಪ ಎನ್ನುವ ಕುಖ್ಯಾತ ಕಳ್ಳ ಅಫಜಲಪುರ PSI ಭೀಮರಾಯ್ ಬಂಕಲಿ ಅವರ ರಿವಾಲ್ವರ್ ಕಸಿದುಕೊಂಡು ಪರಾರಿಯಾಗಿದ್ದಾನೆ. ಸಿಸಿಬಿ ಪೊಲೀಸರು ಖಾಜಪ್ಪ ಎಂಬಾತನನ್ನ ಬಂಧಿಸಲು ಬೆಂಗಳೂರಿನಿಂದ ಅಫಜಲಪುರಕ್ಕೆ ಬಂದಿದ್ದರು. ಈ ವೇಳೆ ಪಿಎಸ್‌ಐ ಭೀಮರಾಯ್ ಅವರ ಸರ್ವಿಸ್ ರಿವಾಲ್ವರ್ ತಗೆದುಕೊಂಡ ಎಸ್ಕೇಪ್ ಆಗಿದ್ದಾನೆ.

ಇದನ್ನೂ ಓದಿ: Kalaburagi News: ಮೇಲಧಿಕಾರಿಗಳು ಹಫ್ತಾ ವಸೂಲಿಗೆ ಒತ್ತಡ ಹೇರುತ್ತಾರೆಂದು ಆರೋಪಿಸಿದ ಕಾನ್​ಸ್ಟೇಬಲ್​​ಗಳು, ಆತ್ಮಹತ್ಯೆಗೆ ಯತ್ನ

ಖಾಜಪ್ಪ ವಿರುದ್ಧ ಬೆಂಗಳೂರು, ಅಫಜಲಪುರ, ಕಲಬುರಗಿ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ 20 ಅಧಿಕ ಕಳ್ಳತನ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ಬಳಿ ಡಸ್ಟರ್ ವಾಹನದಲ್ಲಿ ಕೂತಿದ್ದ ಖಾಜಪ್ಪನನ್ನು ಪೊಲೀಸ್ ತಂಡ ಹಿಡಿಯಲು ಹೋಗಿದ್ದರು. ಈ ವೇಳೆ ಪಿಎಸ್ಐ ತನ್ನ ಸರ್ವಿಸ್ ಪಿಸ್ತೂಲ್ ನಿಂದ ಕಾರಿನ ಗ್ಲಾಸ್ ಒಡೆಯಲು ಮುಂದಾಗಿದ್ದರು. ಈ ಸಮಯದಲ್ಲಿ ಖಾಜಪ್ಪ ಪಿಸ್ತೂಲ್ ಕಸಿದುಕೊಂಡು ಪರಾರಿಯಾಗಿದ್ದಾನೆ.

ಬಳಿಕ ಕಳೆದ ರಾತ್ರಿ ಇಡೀ ಪೊಲೀಸರ ತಂಡ ಕಾರ್ಯಚರಣೆ ನಡೆಸಿದರೂ ಖಾಜಪ್ಪ ಸಿಕ್ಕಿಲ್ಲ. ಪುಲ್ ಲೋಡೆಡ್ ಸರ್ವಿಸ್ ಪಿಸ್ತೂಲ್ ಸಮೇತ ಪರಾರಿಯಾಗಿದ್ದರಿಂದ ಆತಂಕಕ್ಕೆ ಕಾರಣವಾಗಿದೆ. ಇನ್ನು ಇನ್ನು ಅಫಜಲಪುರ ಠಾಣೆಗೆ ಕಲಬುರಗಿ ‌ಎಸ್ಪಿ ಇಶಾ ಪಂತ್ ಭೇಟಿ ಮಾಹಿತಿ ಪಡೆದುಕೊಂಡಿದ್ದಾರೆ.

ಇನ್ನಷ್ಟು ಕಲಬುರಗಿ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್