AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಮನೆಯ ಮೇಲ್ಛಾವಣಿ ಕುಸಿದು ವೃದ್ಧೆ ಸಾವು

ಮನೆಯ ಗೋಡೆ  ಮತ್ತು ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ವೃದ್ದೆ ಸಾವನ್ನಪ್ಪಿರುವ ಘಟನೆ  ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ನಡೆದಿದೆ.

ಕಲಬುರಗಿ: ಮನೆಯ ಮೇಲ್ಛಾವಣಿ ಕುಸಿದು ವೃದ್ಧೆ ಸಾವು
ಕಲಬುರಗಿ ಮನೆ ಕುಸಿತ
TV9 Web
| Edited By: |

Updated on:Jul 09, 2022 | 4:30 PM

Share

ಕಲಬುರಗಿ: ಮನೆಯ (House) ಗೋಡೆ  ಮತ್ತು ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ವೃದ್ಧೆ (old Woman) ಸಾವನ್ನಪ್ಪಿರುವ ಘಟನೆ  ಕಲಬುರಗಿ (Klaburagi) ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ನಡೆದಿದೆ. ಆರೀಫಾ ಬೇಗಂ(65) ಮೃತ ದುರ್ದೈವಿ. ರಾತ್ರಿ ಮನೆಯಲ್ಲಿ ಮಲಗಿದ್ದಾಗ ಮೇಲ್ಚಾವಣಿ ಕುಸಿದ ಪರಿಣಾಮ ವೃದ್ದೆ ಗಾಯಗೊಂಡಿದ್ದಳು. ಕೂಡಲೆ ವೃದ್ದೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ವೃದ್ದೆ ಸಾವನ್ನಪ್ಪಿದ್ದಾಳೆ. ಚಿತ್ತಾಪುರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಜಿಲ್ಲೆಯಾದ್ಯಂತ ಎರಡು ದಿನ ‌ವರುಣನ ಆರ್ಭಟ ಜೋರಾದ  ಹಿನ್ನೆಲೆ ಗ್ರಾಮಸ್ಥರು 2 ದಿನಗಳ ಕಾಲ ಮಳೆ ಇದೆ ಯಾರು ಹೊರಗಡೆ ಬರಬೇಡಿ ಎಂದು ಕಮಲಾಪೂರ ತಾಲೂಕಿನ ಅಂಬಲಗಾ ಗ್ರಾಮದಲ್ಲಿ ಡಂಗುರ ಸಾರಿದ್ದಾರೆ. ಮಕ್ಕಳನ್ನು ಹೊರಗಡೆ ಬಿಡಬೇಡಿ, ರೈತರು ಕೂಡಾ ಜಮೀನಿಗೆ ಹೋಗಬೇಡಿ ಅಂತ ಜಿಲ್ಲಾಡಳಿತ ಸೂಚನೆ ಮೇರೆಗೆ ಡಂಗುರದ ಮೂಲಕ ಗ್ರಾಮಸ್ಥರಿಗೆ ಸೂಚನೆ ನೀಡಿದ್ದಾರೆ.

ಭಾರಿ ಮಳೆಯಿಂದ ಕಾಲು ಜಾರಿ ಬಾವಿಗೆಬಿದ್ದು ರೈತ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಕೃಷಿ ಕೆಲಸಕ್ಕೆ ಹೋಗಿದ್ದಾಗ ಮಳೆಯಿಂದ  ರೈತ ಕಾಲುಜಾರಿ ತೋಟದ ಬಾವಿಗೆಬಿದ್ದು ಸಾವನ್ನಪ್ಪಿರುವ ಘಟನೆ ಹೊಸನಗರ ತಾಲೂಕಿನ ದೊಡ್ಡಬಿಳಗೋಡು ಗ್ರಾಮದಲ್ಲಿ  ನಡೆದಿದೆ. ಜಿ.ಕೆ.ಗಣಪತಿ(75) ಮೃತ ರೈತ. ರಿಪ್ಪನ್​ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಸನಗರ ತಾಲೂಕಿನಲ್ಲಿ ಕಳೆದ ಐದಾರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಕುಮುಧ್ವತಿ, ಶರ್ಮೀಣ್ಯಾವತಿ ನದಿಗಳು ತುಂಬಿ ಹರಿಯುತ್ತಿವೆ.

ಉಕ್ಕಿ ಹರಿಯುವ ಕಾವೇರಿ ನದಿಯಲ್ಲಿ ಸಿಲುಕಿದ ಬೋಟ್

ಕೊಡಗು: ಉಕ್ಕಿ ಹರಿಯುವ ಕಾವೇರಿ ನದಿಯಲ್ಲಿ ಬೋಟ್ ಸಿಲುಕಿದ್ದು, ಬೋಟ್​​ನಲ್ಲಿದ್ದವರನ್ನು ರ್ಯಾಫ್ಟಿಂಗ್  ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ದುಬಾರೆಯಲ್ಲಿ ನಡೆದಿದೆ. ಬೋಟ್​​ನಲ್ಲಿ ದುಬಾರೆ ಆನೆ ಕ್ಯಾಂಪ್​ನಿಂದ 10ಕ್ಕೂ ಹೆಚ್ಚು ಹಾಡಿ ಜನರು ತುಂಬಿ ಹರಿಯುತ್ತಿದ್ದ ಕಾವೇರಿ ನದಿಯಲ್ಲಿ ತೆರಳುತ್ತಿದ್ದರು. ನದಿಯ ಮಧ್ಯದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಬೋಟ್​​ ಕೆಟ್ಟು ನಿಂತಿದೆ. ಈ ವೆಳೆ ಬೋಟ್​​ನಲ್ಲಿದ್ದವರು ಮರದ ಕೊಂಬೆ ಹಿಡಿದು ಪರದಾಡಿದ್ದಾರೆ.

Published On - 2:25 pm, Sat, 9 July 22

ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ