AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ನಗರದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನ ಬರ್ಬರ ಕೊಲೆ ಮಾಡಲಾಗಿದೆ.

ಕಲಬುರಗಿ ನಗರದ ಬೌಲಿಗಲ್ಲಿ ಬಳಿ ತಡರಾತ್ರಿ ಬೈಕ್​ನಲ್ಲಿ ಬಂದಿದ್ದ 3-4 ದುಷ್ಕರ್ಮಿಗಳ ತಂಡದಿಂದ ಕೃತ್ಯ ಎಸಗಲಾಗಿದೆ. ರೋಜಾ ಬಡಾವಣೆ ನಿವಾಸಿ ಮುದಾಸೀರ್​ (19) ಕೊಲೆಯಾಗಿದ್ದಾನೆ.

ಕಲಬುರಗಿ ನಗರದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನ ಬರ್ಬರ ಕೊಲೆ ಮಾಡಲಾಗಿದೆ.
ಕಲಬುರಗಿ ಮಾರಕಾಸ್ತ್ರಗಳಿಂದ ಕೊಲೆ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on: Nov 16, 2022 | 2:58 PM

Share

ಕಲಬುರಗಿ: ನಗರದ ಬೌಲಿಗಲ್ಲಿ ಪ್ರದೇಶದಲ್ಲಿ ತಡರಾತ್ರಿ ಬೈಕ್​ನಲ್ಲಿ ಬಂದಿದ್ದ 3-4 ದುಷ್ಕರ್ಮಿಗಳು ಮುದಾಸೀರ್ (19) ಎಂಬಾತನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಮೇಲ್ನೋಟಕ್ಕೆ ಪ್ರೀತಿ ವಿಚಾರಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಕಲಬುರಗಿ (kalburgi) ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ (ನ.15) ರಾತ್ರಿ ಬೈಕ್​ನಲ್ಲಿ ಬಂದಿದ್ದ 3 ರಿಂದ 4 ಜನ ಅಪರಿಚಿತ ವ್ಯಕ್ತಿಗಳು ಏಕಾಏಕಿ ಮಾರಕಾಸ್ತ್ರಗಳಿಂದ ಮುದಾಸೀರ್​ ಎಂಬಾತನ ಮೇಲೆ ಎರಗಿ ಆತನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಪ್ರೀತಿ ವಿಚಾರಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿರಬಹುದು ಎಂದು ಹೇಳಲಾಗುತ್ತಿದೆ.

ಕುಖ್ಯಾತ ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿದ ಹೆಣ್ಣೂರು ಪೊಲೀಸರು

ಹೆಣ್ಣೂರು ಠಾಣಾ ಪೊಲೀಸರ ಕಾರ್ಯಾಚರಣೆಯಿಂದ ಕುಖ್ಯಾತ ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಅಬೂಬಕರ್ ಸಿದ್ದಿಕಿ (19) ಎಂಬಾತನು ಹೆಣ್ಣೂರು, ಪುಲಿಕೇಶಿ ನಗರ, ಭಾರತಿನಗರ ವ್ಯಾಪ್ತಿಯಲ್ಲಿ ವಾಹನವನ್ನು ಕಳ್ಳತನ ಮಾಡಿದ್ದಾನೆ ಎನ್ನುವ ಆರೋಪದ ಮೇಲೆ ಬಂಧಿಸಲಾಗಿದೆ. ಬಂಧಿತ ಆರೋಪಿಯಿಂದ 6.7 ಲಕ್ಷ ರೂಪಾಯಿ ಮೌಲ್ಯದ 9 ವಿವಿಧ ದ್ವಿಚಕ್ರ ವಾಹನಗಳನ್ನು ಹೆಣ್ಣೂರು ಠಾಣಾ ಪೊಲೀಸರು ವಶಕ್ಕೆ ಪಡೆದುಕೊಡಿದ್ದಾರೆ.

ಸಿಲಿಕಾನ್ ಸಿಟಿಯಲ್ಲೊಬ್ಬ ವಿಕೃತ ವೈದ್ಯ: ಚಿಕಿತ್ಸೆ ಹೆಸರಲ್ಲಿ ಅಸ್ಪತ್ರೆಗೆ ಬರುವ ಮಹಿಳೆಯರ ವಿಡಿಯೋವನ್ನು ಚಿತ್ರೀಕರಿಸಿದ್ದಾನೆ

ಆಸ್ಪತ್ರೆಗೆ ಬರುವ ಮಹಿಳೆಯರ ವಿಡಿಯೋ ಚಿತ್ರೀಕರಣ ಆರೋಪದಲ್ಲಿ ವೈದ್ಯ ವೆಂಕಟರಮಣ ಎಂಬಾತನನ್ನ ಯಶವಂತಪುರದ ಮತ್ತಿಕೆರೆಯಲ್ಲಿ ಬಂಧಿಸಿದ ಸಿಸಿಬಿ ಪೊಲೀಸರು. ಯಶವಂತಪುರದ ಮತ್ತಿಕೆರೆಯಲ್ಲಿ ಕ್ಲಿನಿಕ್ ನಡೆಸುತ್ತಿದ್ದ ವೈದ್ಯ ವೆಂಕಟರಮಣ ನ್ಯಾಚುರೋಪತಿ ಮತ್ತು ಅಕ್ಯೂಪಂಕ್ಚರ್ ಚಿಕಿತ್ಸೆ ನೀಡುತ್ತಿದ್ದನು, ಕಾಲು ನೋವಿಗೆಂದು ಚಿಕಿತ್ಸೆಗೆ ಬಂದಿದ್ದ ಮಹಿಳೆ ಜೊತೆ ದುರ್ವರ್ತನೆ ತೋರಿದ್ದಾನೆ. ಖಾಸಗಿ ಅಂಗಗಳಿಗೆ ಇಂಜೆಕ್ಷನ್ ನೀಡಲು ಮುಂದಾಗಿದ್ದಾನೆ. ಇದನ್ನ ಪ್ರಶ್ನೆ ಮಾಡಿ ಮೊಬೈಲ್ ಪರಿಶೀಲಿಸಿದಾಗ ವಿಡಿಯೋಗಳು ಪತ್ತೆಯಾಗಿವೆ. ಈ ಬಗ್ಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಐಪಿಸಿ 354c ಅಡಿಯಲ್ಲಿ ಎಫ್ಐಆರ್ ದಾಖಲು ಮಾಡಿದ ಯಶವಂತಪುರ ಪೊಲೀಸರು ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಿದ್ದಾರೆ. ಸಿಸಿಬಿ ಪೊಲೀಸರು ಆತನ ಮೊಬೈಲ್​ನ್ನು ಪರಿಶೀಲಿಸಿದಾಗ ಈತ ಹಲವು ತಿಂಗಳುಗಳಿಂದ ಈ ಕೃತ್ಯವನ್ನು ಎಸೆಗುತ್ತಿರುವುದು ಬೆಳಕಿಗೆ ಬಂದಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​