AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕರಾ ಮಾಡಿ ಜೈಲು ಪಾಲಾದ ‘ಪೈಪ್​ ನೋಟ್‘ ಶಾಂತಗೌಡ; ನನ್ನದು ಪಿತ್ರಾರ್ಜಿತ ಆಸ್ತಿ ಅಂತಿರುವ ಗ್ರೂಪ್​ ಸಿ ಮಾಯಣ್ಣ!

ಎಸಿಬಿ ದಾಳಿ ಪ್ರಕರಣದಲ್ಲಿ ಸಾಮಾನ್ಯವಾಗಿ ಬಂಧನ ಕಡಿಮೆ. ಆದ್ರೆ ಕಳೆದ ರಾತ್ರಿ ಎಸಿಬಿ ತಂಡ ಶಾಂತಗೌಡ ಬಿರಾದರ್ನನ್ನು ಬಂಧಿಸಿದೆ. ಅಲ್ಲದೆ ರಾತ್ರಿಯೇ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದೆ. ಸದ್ಯ ಶಾಂತಗೌಡ ಬಿರಾದರ್ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕಂಬಿ ಹಿಂದೆ ಕುಳಿತಿದ್ದಾನೆ.

ನಕರಾ ಮಾಡಿ ಜೈಲು ಪಾಲಾದ ‘ಪೈಪ್​ ನೋಟ್‘ ಶಾಂತಗೌಡ; ನನ್ನದು ಪಿತ್ರಾರ್ಜಿತ ಆಸ್ತಿ ಅಂತಿರುವ ಗ್ರೂಪ್​ ಸಿ ಮಾಯಣ್ಣ!
ಕಲಬುರಗಿ ಕೇಂದ್ರ ಕಾರಾಗೃಹ
TV9 Web
| Updated By: ಸಾಧು ಶ್ರೀನಾಥ್​|

Updated on:Nov 25, 2021 | 9:08 AM

Share

ಕಲಬುರಗಿ: ಆತ PWDಯಲ್ಲಿ ಜೆಇ ಅಷ್ಟೇ. ಆದ್ರೆ, ಆತನ ರಂಗೀನ್ ಲೋಕ ನೋಡಿದ್ರೆ ಎಂಥಹವರನ್ನೂ ಬೆಚ್ಚಿಬೀಳಿಸುತ್ತೆ. ಆತ ಮನೆಯಲ್ಲಿ ಯಾವ ಮೂಲೆಯಲ್ಲಿ ಎಷ್ಟು ಹಣ ಇಟ್ಟಿದ್ದಾನೆ ಅನ್ನೋದು ಆತನಿಗೇ ಗೊತ್ತಿರಲಿಲ್ಲ. ಇಡೀ ಮನೆ ಪೂರ್ತಿ ಬಂಗಾರ ಮತ್ತು ಕಾಂಚಾಣವೇ ತುಂಬಿಕೊಂಡಿತ್ತು. ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಆತ ಬಚ್ಚಿಟ್ಟಿದ್ದ ಸಂಪತ್ತನ್ನು ಬಯಲು ಮಾಡಿದ್ದಾರೆ. ಸದ್ಯ ಈಗ ಜೆಇ ಶಾಂತಗೌಡ ಬಿರಾದರ್ ನಕರಾ ಮಾಡಿ ಜೈಲು ಪಾಲಾಗಿದ್ದಾನೆ.

ಎಸಿಬಿ ದಾಳಿ ಪ್ರಕರಣದಲ್ಲಿ ಸಾಮಾನ್ಯವಾಗಿ ಬಂಧನ ಕಡಿಮೆ. ಆದ್ರೆ ಕಳೆದ ರಾತ್ರಿ ಎಸಿಬಿ ತಂಡ ಶಾಂತಗೌಡ ಬಿರಾದರ್ನನ್ನು ಬಂಧಿಸಿದೆ. ಅಲ್ಲದೆ ರಾತ್ರಿಯೇ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದೆ. ಸದ್ಯ ಶಾಂತಗೌಡ ಬಿರಾದರ್ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕಂಬಿ ಹಿಂದೆ ಕುಳಿತಿದ್ದಾನೆ. ನಿನ್ನೆ ಎಸಿಬಿ ಅಧಿಕಾರಿಗಳು ಮನೆಗೆ ಬಂದಾಗ ಬಾಗಿಲು ತಗೆಯದೇ ಶಾಂತಗೌಡ ಸತಾಯಿಸಿದ್ದ. ಮತ್ತೊಂದಡೆ ದಾಳಿ ವೇಳೆ ಸಿಬ್ಬಂದಿಗೆ ಸಹಕರಿಸಿರಲಿಲ್ಲ. ಸಿಬ್ಬಂದಿಗೆ ಯಾಮಾರಿಸಿ ಹಣ ಬಚ್ಚಿಡೋ ತಂತ್ರ ಮಾಡಿದ್ದ. ಇದೇ ಕಾರಣಕ್ಕೆ ಎಸಿಬಿ ಹಿರಿಯ ಅಧಿಕಾರಿಗಳು ಶಾಂತಗೌಡ ಬಿರಾದರ್ ಬಂಧನಕ್ಕೆ ಸೂಚನೆ ನೀಡಿದ್ರು. ಅದರಂತೆಯೇ ಕಳೆದ ರಾತ್ರಿ ಬಂಧಿಸಿ ಜೈಲಿಗಟ್ಟಿದ್ದಾರೆ.

ಫಾರ್ಮ್‌ಹೌಸ್‌ಗೆ ಸಿಸಿ ರಸ್ತೆ ಮಾಡಿಸಿಕೊಂಡಿರುವ ಶಾಂತಗೌಡ ಶಾಂತಗೌಡ ಬಿರಾದರ್, ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಹಂಗರಗಾ ಬಿ ಗ್ರಾಮದಿಂದ ತನ್ನ ಫಾರ್ಮ್‌ಹೌಸ್‌ಗೆ ಸಿಸಿ ರಸ್ತೆ ಮಾಡಿಸಿಕೊಂಡಿದ್ದಾರೆ. ಸ್ವಂತ ಹಣದಿಂದ ಸಿಮೆಂಟ್ ರಸ್ತೆ ನಿರ್ಮಾಣ ಮಾಡಿಕೊಂಡ್ರಾ? ಅಥವಾ ಸರ್ಕಾರಿ ಯೋಜನೆಯಲ್ಲಿ ರಸ್ತೆ ಮಾಡಿಸಿಕೊಂಡ್ರಾ ಎಂಬ ಪ್ರಶ್ನೆ ಎದ್ದಿದೆ.

ಪಿತ್ರಾರ್ಜಿತ ಆಸ್ತಿಯನ್ನು ನನ್ನದು ಎನ್ನುತ್ತಿದ್ದಾರೆ ಇನ್ನು ಮತ್ತೊಂದೆಡೆ ನಾನು ಎಸಿಬಿ ದಾಳಿಗೆ ಹೆದರುವ ವ್ಯಕ್ತಿಯಲ್ಲ ಎಂದು ಟಿವಿ9ಗೆ ಬಿಬಿಎಂಪಿ ಎಫ್‌ಡಿಎ ಎಂ.ಮಾಯಣ್ಣ ಹೇಳಿಕೆ ನೀಡಿದ್ದಾರೆ. ಎಸಿಬಿ ಅಧಿಕಾರಿಗಳು ಹೇಳಿದ ಮನೆಗಳು, ನಿವೇಶನಗಳು ನಮ್ಮ ತಂದೆ, ತಾಯಿ ಮಾಡಿಟ್ಟಿರುವುದು. ಪಿತ್ರಾರ್ಜಿತ ಆಸ್ತಿಯನ್ನು ನನ್ನದು ಎನ್ನುತ್ತಿದ್ದಾರೆ. ನನ್ನ ತಂದೆ, ತಾಯಿ ಬಿಬಿಎಂಪಿಯಲ್ಲಿ ಕೆಲಸ ಮಾಡುತ್ತಿದ್ರು. ಬಿಬಿಎಂಪಿ ಅಧಿಕಾರಿಗಳನ್ನ ಹೆದರಿಸಿ, ಬೆದರಿಸಿ ಹಣ ಮಾಡುತ್ತಿರುವ ವ್ಯಕ್ತಿಗಳು ಹೀಗೆ ಮಾಡಿಸಿದ್ದಾರೆ. ಸೋಮವಾರ ವಿಚಾರಣೆಗೆ ಬರಲು ಸೂಚನೆ ನೀಡಿದ್ದಾರೆ. ಮಾಯಣ್ಣ ಮೇಲೆ ದಾಳಿ ಮಾಡಿಸಿದಂತೆ ನಿಮ್ಮ ಮೇಲೂ ಎಸಿಬಿ ದಾಳಿ ಮಾಡಿಸ್ತೇವೆ ಎಂದು ಬೇರೆ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ. ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದಾರೆ ಎಂದು ಎಂ.ಮಾಯಣ್ಣ ತಿಳಿಸಿದ್ದಾರೆ.

ಇನ್ನು ರಾಜ್ಯದ 15 ಭ್ರಷ್ಟ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ಕೇಸ್ಗೆ ಸಂಬಂಧಿಸಿ ಭ್ರಷ್ಟ ಅಧಿಕಾರಿಗಳಿಗೆ ನೋಟಿಸ್ ನೀಡಿ ಸದ್ಯದಲ್ಲೇ ಗ್ರಿಲ್ ಮಾಡಲಾಗುತ್ತೆ. ಆದಾಯ ಮೀರಿ ಕೋಟ್ಯಂತರ ರೂ. ಆಸ್ತಿ ಗಳಿಕೆ ಆರೋಪದಡಿ 15 ಅಧಿಕಾರಿಗಳಿಗೆ ಸೇರಿದ 68 ಕಡೆ ಎಸಿಬಿ ದಾಳಿ ನಡೆಸಿತ್ತು. ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ, ನಗದು, ಚರ, ಸ್ಥಿರ ಆಸ್ತಿಗಳ ಬಗ್ಗೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಆದಷ್ಟು ಬೇಗ ಅಧಿಕಾರಿಗಳ ಮನೆಯಲ್ಲಿ ಲಭ್ಯವಾದ ದಾಖಲೆಗಳ ಪರಿಶೀಲನೆ ನಡೆಸಿ ಪರಿಶೀಲನೆ ಬಳಿಕ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುತ್ತೆ.

ಇದನ್ನೂ ಓದಿ: ಎಸಿಬಿ ದಾಳಿ ವೇಳೆ ಸೀರೆಯಲ್ಲಿ ಬಚ್ಚಿಟ್ಟ ಹಣ ಪತ್ತೆ; ನೋಟು ಎಣಿಸಲು ಮಷೀನ್ ತಂದ ಅಧಿಕಾರಿಗಳು

Published On - 8:48 am, Thu, 25 November 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!