AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ, ಕಲಬುರಗಿ ಜಿಲ್ಲೆಯ 6 ಜನರು ಸಾವು

ಕ್ರೂಸರ್ ವಾಹನ ಮತ್ತು ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಕಲಬುರಗಿ ಜಿಲ್ಲೆಯ ಐವರು ಮಹಿಳೆಯರು, ಒಂದು ಮಗು ದುರ್ಮರಣ ಹೊಂದಿರುವಂತಹ ಘಟನೆ ಮಹಾರಾಷ್ಟ್ರದ ಅಕ್ಕಲಕೋಟೆ ತಾಲೂಕಿನ ಶಿರವಾಡಿ ಬಳಿ ನಡೆದಿದೆ.

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ, ಕಲಬುರಗಿ ಜಿಲ್ಲೆಯ 6 ಜನರು ಸಾವು
ಅಪಘಾತಕ್ಕೀಡಾದ ಕ್ರೂಸರ್ ವಾಹನ, ಟ್ಯಾಂಕರ್
ಸಂಜಯ್ಯಾ ಚಿಕ್ಕಮಠ
| Edited By: |

Updated on:Jun 30, 2023 | 7:56 PM

Share

ಕಲಬುರಗಿ: ಕ್ರೂಸರ್ ವಾಹನ ಮತ್ತು ಟ್ಯಾಂಕರ್ ಡಿಕ್ಕಿ (Accident) ಹೊಡೆದ ಪರಿಣಾಮ ಕಲಬುರಗಿ ಜಿಲ್ಲೆಯ 6 ಜನರು ಸಾವನ್ನಪ್ಪಿರುವಂತಹ ಘಟನೆ ಮಹಾರಾಷ್ಟ್ರದ ಅಕ್ಕಲಕೋಟೆ ತಾಲೂಕಿನ ಶಿರವಾಡಿ ಬಳಿ ನಡೆದಿದೆ. ಕ್ರೂಸರ್‌ನಲ್ಲಿದ್ದ ಐವರು ಮಹಿಳೆಯರು, ಒಂದು ಮಗು ದುರ್ಮರಣ ಹೊಂದಿದೆ. ಮೃತರನ್ನು ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಅಣೂರ ನಿವಾಸಿಗಳು ಎಂದು ಗುರುತಿಸಲಾಗಿದೆ. ಕ್ರೂಸರ್ ವಾಹನದಲ್ಲಿ ಮಹಾರಾಷ್ಟ್ರದ ತೀರ್ಥ ಕ್ಷೇತ್ರಗಳಿಗೆ ಪ್ರವಾಸಕ್ಕೆ ತೆರಳಿದ್ದರು. ವಾಪಸಾಗುತ್ತಿದ್ದಾಗ ಟ್ಯಾಂಕರ್ ಡಿಕ್ಕಿಯಾಗಿ ದುರಂತ ಸಂಭವಿಸಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಸರಣಿ ಅಪಘಾತದಲ್ಲಿ ಐವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಸರಣಿ ಅಪಘಾತವಾಗಿದ್ದು, ಐವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರವಾಗಿದೆ. ಮಂಡ್ಯ ತಾಲೂಕಿನ ತೂಬಿನಕೆರೆ ಬಳಿ ಸರಣಿ ಅಪಘಾತ ಸಂಭವಿದೆ.  ಹೈವೇನಲ್ಲಿ ರಸ್ತೆ ಮಧ್ಯದ ಗಿಡಗಳಿಗೆ ಟ್ಯಾಂಕರ್‌ನಿಂದ ನೀರು ಹರಿಸುತ್ತಿದ್ದರು. ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ  ಸಿಬ್ಬಂದಿ ಗಿಡಗಳಿಗೆ ನೀರು ಹರಿಸುತ್ತಿದ್ದರು.

ಇದನ್ನೂ ಓದಿ: ಬಳ್ಳಾರಿ: ಜಾತಿ ನೆಪವೊಡ್ಡಿ ಮದುವೆಗೆ ನಿರಾಕರಿಸಿದ ಪ್ರಿಯಕರ, ಆತ್ಮಹತ್ಯೆಗೆ ಯತ್ನಿಸಿದ ಯುವತಿ

ಈ ವೇಳೆ ನೀರಿನ ಟ್ಯಾಂಕರ್ ಕಾಣದೇ ಕಾರು ಡಿಕ್ಕಿ ಹೊಡೆದಿದೆ. ನಂತರ ಹಿಂಬದಿಯಿಂದ ಮತ್ತೆರಡು ಕಾರುಗಳು ಡಿಕ್ಕಿ ಹೊಡೆದಿವೆ. ನೀರಿನ ಟ್ಯಾಂಕರ್‌ಗೆ ಡಿಕ್ಕಿಯಿಂದ ಕಾರಿನಲ್ಲಿದ್ದ ಐವರಿಗೆ ಗಾಯಗಳಾಗಿದ್ದು, ಓರ್ವನ ಸ್ಥಿತಿ ಗಂಭೀರ, ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಎನ್‌ಹೆಚ್‌ಎಐ ಅಧಿಕಾರಿಗಳ ಬೇಜವಾಬ್ದಾರಿಯಿಂದ ಅಪಘಾತ ಕಾರಣ ಎನ್ನಲಾಗುತ್ತಿದೆ.

ಟ್ರಕ್ಕಿಂಗ್ ಹೋಗಿದ್ದ ಪ್ರವಾಸಿಗ ಹೃದಯಘಾತದಿಂದ ಸಾವು‌

ಚಿಕ್ಕಮಗಳೂರು: ಟ್ರಕ್ಕಿಂಗ್ ಹೋಗಿದ್ದ ಪ್ರವಾಸಿಗ ಹೃದಯಘಾತದಿಂದ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆ ಕಳಸ ತಾಲೂಕಿನ ಕುದುರೆಮುಖ ಅರಣ್ಯ ಪ್ರದೇಶದಲ್ಲಿ ನಡೆದಿದೆ. ರಕ್ಷಿತ್ (27) ಹೃದಯಘಾತದಿಂದ ಮೃತಪಟ್ಟ ಯುವಕ.

ಇದನ್ನೂ ಓದಿ: Chikkamagaluru News: ಎಸ್ಟೇಟ್​ನಲ್ಲಿ ಮಹಿಳೆಯ ಬರ್ಬರ ಹತ್ಯೆ, ಕಾಫಿ ತೋಟದಲ್ಲಿ ಸುಟ್ಟು ಹಾಕಿದ್ದ ವ್ಯಕ್ತಿಯ ಬಂಧನ

ಮೈಸೂರು ಮೂಲದ ಏಳು ಯುವಕರ ತಂಡ ಟ್ರಕ್ಕಿಂಗ್ ಆಗಮಿಸಿದ್ದರು. ಕುದುರೆಮುಖದಿಂದ-ನೇತ್ರಾವತಿ ಪೀಕ್ ಸ್ಪಾಟ್​ಗೆ ತೆರಳಿದ್ದರು. ನೇತ್ರಾವತಿ ಪೀಕ್​ಗೆ ಹೋಗುವ ಮಾರ್ಗದಲ್ಲಿ ಯುವಕ ಮೃತಪಟ್ಟಿದ್ದಾನೆ. ನೇತ್ರಾವತಿ ಪೀಕ್​ನಿಂದ ಮೃತದೇಹವನ್ನ ಪೊಲೀಸರು ಕಳಸಕ್ಕೆ ತಂದಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:39 pm, Fri, 30 June 23

Follow Us
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​
ಅಂಕೋಲಾದಲ್ಲಿ ಭಾರಿ ಮಳೆ: ಗೋಕರ್ಣ ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ
ಅಂಕೋಲಾದಲ್ಲಿ ಭಾರಿ ಮಳೆ: ಗೋಕರ್ಣ ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ
ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ
ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ
ಹರಿಯಾಣದಲ್ಲಿ ದೇಶದ ಮೊದಲ 'ಹೈಡ್ರೋಜನ್ ರೈಲಿ'ಗೆ ಪಿಎಂ ಮೋದಿ ಇಂದು ಚಾಲನೆ
ಹರಿಯಾಣದಲ್ಲಿ ದೇಶದ ಮೊದಲ 'ಹೈಡ್ರೋಜನ್ ರೈಲಿ'ಗೆ ಪಿಎಂ ಮೋದಿ ಇಂದು ಚಾಲನೆ