AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತವೋ, ಕೊಲೆಯೋ!? ನಾಪತ್ತೆಯಾಗಿದ್ದ ವ್ಯಕ್ತಿ 11 ದಿನ ಬಳಿಕ ರಸ್ತೆ ಬದಿ ನೀರಿನ ಹೊಂಡದಲ್ಲಿ ಕಾರು ಸಮೇತ ಶವವಾಗಿ ಪತ್ತೆ

ಅದೆನೇ ಇರಲಿ ಹೊಂಡದಲ್ಲಿ ಕಾರಿನ ಸಮೇತ ಅಮೃತ್ ಮೃತದೇಹ ಪತ್ತೆಯಾಗಿರೋ ಪ್ರಕರಣದ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗುತ್ತಿದ್ದು, ಅಪಘಾತವಾಗಿ ಕಾರು ಹೊಂಡದಲ್ಲಿ ಬಿದ್ದಿದೆಯಾ ಅಥವಾ ಯಾರಾದರೂ ಕೊಲೆ ಮಾಡಿ ಕಾರಿನ ಸಮೇತ ಮೃತದೇಹವನ್ನ ಹೊಂಡದಲ್ಲಿ ಬಿಸಾಕಿದ್ದಾರಾ ಅನ್ನೊದು ತನಿಖೆಯಿಂದ ತಿಳಿಯಲಿದೆ.

ಅಪಘಾತವೋ, ಕೊಲೆಯೋ!? ನಾಪತ್ತೆಯಾಗಿದ್ದ ವ್ಯಕ್ತಿ 11 ದಿನ ಬಳಿಕ ರಸ್ತೆ ಬದಿ ನೀರಿನ ಹೊಂಡದಲ್ಲಿ ಕಾರು ಸಮೇತ ಶವವಾಗಿ ಪತ್ತೆ
ನಾಪತ್ತೆಯಾಗಿದ್ದ ವ್ಯಕ್ತಿ ರಸ್ತೆ ಬದಿ ನೀರಿನ ಹೊಂಡದಲ್ಲಿ ಕಾರು ಸಮೇತ ಶವವಾಗಿ ಪತ್ತೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ಸಾಧು ಶ್ರೀನಾಥ್​|

Updated on:Jan 24, 2024 | 12:37 PM

Share

ಆ ವ್ಯಕ್ತಿ ತಾನಾಯಿತು ತನ್ನ ಕೆಲಸವಾಯಿತು ಅಂತಾ ಜೀವನ ಸಾಗಿಸುತ್ತಿದ್ದನು.. ಆದರೆ ಅದೇನಾಯ್ತೋ ಗೊತ್ತಿಲ್ಲ, ಜನವರಿ 11 ರಂದು ಕಾರಿನ ಸಮೇತ ನಾಪತ್ತೆಯಾಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆಯಾಗಿದ್ದು ಹಲವು ಅನುಮಾನಕ್ಕೆ ಕಾರಣವಾಗಿದೆ. ರಸ್ತೆ  ಬದಿಯ ನೀರಿನ ಹೊಂಡದಲ್ಲಿ ಬಿದ್ದ ಕಾರಿನಲ್ಲಿ ಮೃತದೇಹ ಪತ್ತೆಯಾಗಿದೆ. ಸದ್ಯ ಮೃತದೇಹ ಹೊರಗಡೆ ತೆಗೆಯಲಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಕಾರಿನಲ್ಲಿ ಮುಳುಗಡೆಯಾಗಿರೋ ಕಾರು….. ಕಾರಿನಿಂದ ಹೊರ ತೆಗೆಯುತ್ತಿರೋ ಮೃತದೇಹ.. ಮತ್ತೊಂದೆಡೆ ಮುಗಿಲುಮುಟ್ಟಿದ ಕುಟುಂಬಸ್ಥರ ಆಕ್ರಂದನ.. ಅಷ್ಟಕ್ಕೂ ಈ ದೃಶ್ಯಗಳು ಕಂಡು ಬಂದಿದ್ದು ಕಲಬುರಗಿ ತಾಲೂಕಿನ ಫಿರೋಜಬಾದ್ ಬಳಿ..

ಈ ಫೋಟೊದಲ್ಲಿ ಕಾಣ್ತಾಯಿರೋ 40 ವರ್ಷದ ವ್ಯಕ್ತಿಯ ಹೆಸರು ಅಮೃತ್.. ಕಲಬುರಗಿ ‌ನಗರದ ಸುಂದರ ನಗರ ಬಡಾವಣೆಯ ನಿವಾಸಿಯಾದ ಅಮೃತ್, ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದನು. ಆದರೆ ಜನವರಿ 11 ರಂದು ಕಾರಿನ ಸಮೇತ ನಾಪತ್ತೆಯಾಗಿದ್ದ. ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ನಗರದ ಬ್ರಹ್ಮಪುರ ಠಾಣೆಯಲ್ಲಿ ಅಮೃತ್ ನಾಪತ್ತೆಯಾಗಿರೋ ಬಗ್ಗೆ ದೂರು ದಾಖಲಿಸಿದ್ದರು.

ದೂರು ದಾಖಲಿಸಿಕೊಂಡಿದ್ದ ಪೊಲೀಸರು ಅಮೃತ್‌ಗಾಗಿ ಸಾಕಷ್ಟು ಹುಡುಕಾಟ ನಡೆಸಿದ್ದಾರೆ. ಆದರೆ ನಿನ್ನೆ ಜ. 23 ಫಿರೋಜಬಾದ್ ಗ್ರಾಮದ ಬಳಿಯ ಹೊಂಡದಲ್ಲಿ ಕಾರು ಸಮೇತ ಮೃತದೇಹ ಪತ್ತೆಯಾಗಿದೆ. ಹೀಗಾಗೇ ಅಮೃತ್ ಸಾವಿನ ಸುತ್ತ ನೂರೆಂಟು ಅನುಮಾನದ ಹುತ್ತ ಬೆಳೆದಿದ್ದು, ನಾಪತ್ತೆಯಾಗಿದ್ದ ಅಮೃತ್ ಕೊಲೆಯಾದ್ರಾ.. ಅಥವಾ ಅಪಘಾತದಿಂದ ಮೃತಪಟ್ಟನಾ ಎನ್ನೋ ಬಗ್ಗೆ ಪೊಲೀಸರು ತನಿಖೆ ಮಾಡ್ತಿದ್ದಾರೆ.

ಜನವರಿ 11 ರಂದು ಅಮೃತ್ ನಾಪತ್ತೆಯಾದ ನಂತರ ಆತ ಕಾರಿನಲ್ಲಿ ಎಲ್ಲಿಗೆ ಹೊರಟಿದ್ದರು. ಆತನ ಜೊತೆಗೆ ಇನ್ನೂ ಯಾರು ಯಾರು ಇದ್ದರು ಅನ್ನೊದೆಲ್ಲ ಸದ್ಯಕ್ಕೆ ತಿಳಿದುಬಂದಿಲ್ಲ. ಆದರೆ ಅಮೃತ್‌ ನಿಗೂಢವಾಗಿ ಸಾವನ್ನಪ್ಪಿದ್ದರ ಹಿಂದೆ ಅನುಮಾನಗಳು ಕಾಡಲಾಂಭಿಸಿವೆ.

Also Read: ರಾಜಸ್ಥಾನದ ಯುವತಿ- ಬಾಗಲಕೋಟೆ ಯುವಕನ ಮೂಕ ಪ್ರೀತಿ, ಯುವತಿಯ ಎಳೆದೊಯ್ದ ಸಹೋದರರು: ಪ್ರೇಮಪಕ್ಷಿಗಳ ಮೂಕರೋದನೆ

ಅಷ್ಟಕ್ಕೂ ಅಮೃತ್‌ನ್ನ ಯಾರಾದರೂ ಕೊಲೆ ಮಾಡಿ ಸಾಕ್ಷ್ಯ ನಾಶಪಡಿಸಲು ಮೃತದೇಹ ಸಮೇತ ಕಾರನ್ನ ಹೊಂಡದಲ್ಲಿ ಬಿಸಾಕಿದ್ದಾರಾ ಅನ್ನುವ ಶಂಕೆ ಕೂಡ ವ್ಯಕ್ತವಾಗಿದೆ. ಇಂದು ಬೆಳಗ್ಗೆ ಹೊಂಡದಲ್ಲಿ ಕಾರು ಬಿದ್ದಿದ್ದನ್ನ ಕುರಿಗಾಹಿಯೋರ್ವ ನೋಡಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾನೆ.

ತಕ್ಷಣ ಟ್ರಾಫಿಕ್ 1 ಪೊಲೀಸರು ಹಾಗೂ ಫರಹತ್ತಬಾದ್ ಪೊಲೀಸರು ಅಗ್ನಿಶಾಮಕ ದಳ ಸಿಬ್ಬಂದಿಗಳ ಜೊತೆ ಸ್ಥಳಕ್ಕೆ ಭೇಟಿ ನೀಡಿ ಹೊಂಡದಲ್ಲಿ ಬಿದ್ದಿದ್ದ ಕಾರನ್ನ ಮೇಲಕ್ಕೆ ಎತ್ತಿ ಮೃತದೇಹವನ್ನ ಜಿಲ್ಲಾಸ್ಪತ್ರೆ ಶವಗಾರಕ್ಕೆ ರವಾನಿಸಿದ್ದಾರೆ. ಫರಹತ್ತಬಾದ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:37 pm, Wed, 24 January 24

Follow Us
ದತ್ತಾತ್ರೇಯ ಪಾಟೀಲ, ಕಲಬುರಗಿ
ದತ್ತಾತ್ರೇಯ ಪಾಟೀಲ, ಕಲಬುರಗಿ

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!