AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫಜಲಪುರ ಶಾಸಕ ಎಮ್ ವೈ ಪಾಟೀಲ್ ಪುತ್ರನಿಂದ ಪ್ರಬಾರಿ ಮುಖ್ಯೋಪಾಧ್ಯಾಯರಿಗೆ ಬೆದರಿಕೆ ಆರೋಪ; ಠಾಣೆಗೆ ದೂರು

ಜಿಲ್ಲೆಯ ಅಫಜಲಪುರ ಶಾಸಕ ಎಮ್ ವೈ ಪಾಟೀಲ್ ಪುತ್ರ ಅರುಣ್ ಎಂಬುವವರು ಪ್ರಬಾರಿ ಮುಖ್ಯೋಪಾಧ್ಯಾಯರ ಜೊತೆ ಮಾತನಾಡಿದ್ದಾರೆ ಅನ್ನಲಾಗುತ್ತಿರುವ ಆಡಿಯೋ ಇದೀಗ ವೈರಲ್ ಆಗಿದ್ದು, ಇದರಲ್ಲಿ ನೀನು ಶಾಲೆಯಿಂದ ಜಾಗ ಖಾಲಿ ಮಾಡಬೇಕು. ಇಲ್ಲದಿದ್ದರೆ ನಾನು ನಿಮ್ಮನ್ನು ನೋಡಿಕೊಳ್ಳುತ್ತೇನೆಂದು ಬೆದರಿಕೆ ಹಾಕಲಾಗಿದೆ.

ಅಫಜಲಪುರ ಶಾಸಕ ಎಮ್ ವೈ ಪಾಟೀಲ್ ಪುತ್ರನಿಂದ ಪ್ರಬಾರಿ ಮುಖ್ಯೋಪಾಧ್ಯಾಯರಿಗೆ ಬೆದರಿಕೆ ಆರೋಪ; ಠಾಣೆಗೆ ದೂರು
ಎಮ್​ ವೈ ಪಾಟೀಲ್ ಮಗ ಅರುಣ್​ ಪಾಟೀಲ್​​
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jun 13, 2023 | 8:28 AM

Share

ಕಲಬುರಗಿ: ಜಿಲ್ಲೆಯ ಅಫಜಲಪುರ(Afzalpur) ಶಾಸಕ ಎಮ್ ವೈ ಪಾಟೀಲ್(MY Patil) ಪುತ್ರ ಅರುಣ್ ಎಂಬುವವರು ಪ್ರಬಾರಿ ಮುಖ್ಯೋಪಾಧ್ಯಾಯರ ಜೊತೆ ಮಾತನಾಡಿದ್ದಾರೆ ಅನ್ನಲಾಗುತ್ತಿರುವ ಆಡಿಯೋ ಇದೀಗ ವೈರಲ್ ಆಗಿದ್ದು, ಇದರಲ್ಲಿ ಎಮ್ ವೈ ಪಾಟೀಲ್ ಪುತ್ರ ಅರುಣ್ ಪಾಟೀಲ್ ಅವರು ಪ್ರಬಾರಿ ಮುಖ್ಯೋಪಾಧ್ಯಾಯರಿಗೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಕುರಿತು ಅಫಜಲಪುರ ಠಾಣೆಗೆ ಸರ್ಕಾರಿ ಶಾಲೆ ಪ್ರಭಾರಿ ಮುಖ್ಯೋಪಾಧ್ಯಾಯ ಶಿವಕುಮಾರ್ ಬಿರಾದರ್ ಎನ್ನುವವರು ದೂರು ನೀಡಿದ್ದಾರೆ.

ಆಡಿಯೋದಲ್ಲಿ ಏನಿದೆ?

ಹೌದು ಅಫಜಲಪುರ ತಾಲೂಕಿನ ಮಾಶಾಳ ಸರ್ಕಾರಿ ಮಾದರಿ ಶಾಲೆ ಪ್ರಭಾರಿ ಮುಖ್ಯೋಪಾಧ್ಯಾಯರಾಗಿರುವ ಶಿವಕುಮಾರ್ ಅವರು ತಮ್ಮ ಜೊತೆ ಶಾಸಕರ ಪುತ್ರ ಅರುಣ್ ಮಾತನಾಡಿರೋ ಆಡಿಯೋವನ್ನ ಪೊಲೀಸ್​ ಠಾಣೆಗೆ ನೀಡಿದ್ದಾರೆ. ಅದರಲ್ಲಿ ‘ ಶಿವಕುಮಾರ್ ಅವರಿಗೆ ನೀನು ಶಾಲೆಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಬೇಡ. ಮಾಡಿದ್ರು, ಅದನ್ನು ರದ್ದು ಮಾಡಬೇಕು. ನೀನು ಶಾಲೆಯಿಂದ ಜಾಗ ಖಾಲಿ ಮಾಡಬೇಕು. ಇಲ್ಲದಿದ್ದರೆ ನಾನು ನಿಮ್ಮನ್ನು ನೋಡಿಕೊಳ್ಳುತ್ತೇನೆಂದು ಬೆದರಿಕೆ ಹಾಕಲಾಗಿದೆ. ಈ ಕುರಿತು ಶಾಸಕರ ಪುತ್ರ ಬೆದರಿಕೆ ಹಾಕಿದ್ದಾರೆ ಎಂದು ಶಿವಕುಮಾರ್ ಬಿರಾದರ್ ಆರೋಪಿಸಿ ದೂರು ನೀಡಿದ್ದಾರೆ.

ಇದನ್ನೂ ಓದಿ:Sharad Pawar: ಶರದ್​ ಪವಾರ್​ಗೆ ಕೊಲೆ ಬೆದರಿಕೆ, ಪೊಲೀಸ್ ಆಯುಕ್ತರನ್ನು ಭೇಟಿಯಾದ ಸುಪ್ರಿಯಾ ಸುಲೆ

ವಿದ್ಯುತ್ ದರ ಏರಿಕೆಯಿಂದ ಸಣ್ಣ ಮತ್ತು ಮಧ್ಯಮ ವರ್ಗದ ಕೈಗಾರಿಕೆಗಳಿಗೆ ಸಂಕಷ್ಟ; ಕೈಗಾರಿಕೋದ್ಯಮಿಗಳಿಂದ ಮೌನ ಪ್ರತಿಭಟನೆ

ಬೆಳಗಾವಿ: ಆರ್ಥಿಕವಾಗಿ ತತ್ತರಿಸಿದ ಕೈಗಾರಿಕೆಗಳಿಗೆ ವಿದ್ಯುತ್ ದರ ಏರಿಕೆಯಿಂದ ಡಬಲ್ ಶಾಕ್ ಆಗಿದ್ದು, ಇದರಿಂದ ಸಣ್ಣ ಮತ್ತು ಮಧ್ಯಮ ವರ್ಗ ಕೈಗಾರಿಕೆಗಳಿಗೆ ಸಂಕಷ್ಟ ಬಂದೊದಗಿದೆ. ಈ ಕಾರಣ ಬೆಳಗಾವಿಯಲ್ಲಿಂದು ಕೈಗಾರಿಕಾ & ವಾಣಿಜ್ಯೋದ್ಯಮ ಸಂಸ್ಥೆ, ಸಣ್ಣ ಕೈಗಾರಿಕೆಗಳ ಸಂಘದಿಂದ ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದು. ಬೆಳಗ್ಗೆ 10.30ಕ್ಕೆ ಬೆಳಗಾವಿಯ ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ರ್ಯಾಲಿ ನಡೆಯಲಿದೆ. ಇದರಲ್ಲಿ ಬೆಳಗಾವಿ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಹೇಮಂತ್ ಪೋರವಾಲ್, ಬೆಳಗಾವಿ ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ರೋಹನ್ ಜವಳಿ ಸೇರಿ, ಹಲವು ಉದ್ಯಮಿಗಳು ಭಾಗಿಯಾಗಲಿದ್ದಾರೆ. ವಿದ್ಯುತ್ ದರ ತಗ್ಗಿಸದಿದ್ದರೆ ಕೈಗಾರಿಕೆಗಳು ಮಹಾರಾಷ್ಟ್ರಕ್ಕೆ ವಲಸೆ ಹೋಗುವ ಎಚ್ಚರಿಕೆಯನ್ನ ಕೂಡ ನೀಡಿದ್ದಾರೆ. ಇನ್ನು ಬೆಳಗಾವಿ ಡಿಸಿ ಮುಖೇನ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಿರುವ ಕೈಗಾರಿಕೋದ್ಯಮಿಗಳು, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿ ಮನವಿ ಸಲ್ಲಿಕೆಗೆ ನಿರ್ಧಾರ ಮಾಡಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ