AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫ್ರಿಕನ್ ಹಂದಿ ಜ್ವರ ಪತ್ತೆ ಹಿನ್ನೆಲೆ ಕಲಬುರಗಿಯಲ್ಲಿ ಹಂದಿ ಹಾಗೂ ಹಂದಿಗಳ ಉತ್ಪನ್ನ ಸಾಗಾಣಿಕೆಗೆ ನಿರ್ಬಂಧ

ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಹಂದಿ ಹಾಗೂ ಹಂದಿಗಳ ಉತ್ಪನ್ನ ಸಾಗಾಣಿಕೆಗೆ ನಿರ್ಬಂಧ ಹೇರಿದೆ.

ಆಫ್ರಿಕನ್ ಹಂದಿ ಜ್ವರ ಪತ್ತೆ ಹಿನ್ನೆಲೆ ಕಲಬುರಗಿಯಲ್ಲಿ ಹಂದಿ ಹಾಗೂ ಹಂದಿಗಳ ಉತ್ಪನ್ನ ಸಾಗಾಣಿಕೆಗೆ ನಿರ್ಬಂಧ
ಹಂದಿImage Credit source: News18
TV9 Web
| Edited By: |

Updated on:Aug 23, 2022 | 8:51 PM

Share

ಕಲಬುರಗಿ: ಬೆಂಗಳೂರು ಗ್ರಾಮಾಂತರ‌ ಜಿಲ್ಲೆಯ ಹೊಸಕೋಟೆ ತಾಲೂಕಿನ‌ ಬೆಳಮಂಗಲಾ ಗ್ರಾಮದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಹಂದಿ ಹಾಗೂ ಹಂದಿಗಳ ಉತ್ಪನ್ನ ಸಾಗಾಣಿಕೆಗೆ ನಿರ್ಬಂಧ ಹೇರಿದೆ.

ಕಲಬುರಗಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ರೋಗ ನಿಯಂತ್ರಣ ಕೈಗೊಳ್ಳಲು ಪ್ರಾಣಿಗಳಲ್ಲಿ ಸೋಂಕುಕಾರಕ ಮತ್ತು ಸಾಂಕ್ರಾಮಿಕ ರೋಗಗಳ ಪ್ರತಿಬಂಧಕ ಮತ್ತು ನಿಯಂತ್ರಣ ಅಧಿನಿಯಮದಡಿ ಹಾಗೂ ಭಾರತ ಸರ್ಕಾರದಿಂದ ಪ್ರಕಟಿಸಲಾದ ಜೂನ್ 2020ರ ರಾಷ್ಟ್ರೀಯ ಕ್ರಿಯಾ ಯೋಜನೆ ಅಧ್ಯಾಯ-4.4 ರ ಮಾರ್ಗಸೂಚಿ ಪ್ರಕಾರ ನೆರೆ ರಾಜ್ಯಗಳಿಂದ ಜಿಲ್ಲೆಯ ಒಳಗೆ, ಹೊರಗೆ ಹಂದಿಗಳು ಮತ್ತು ಹಂದಿಗಳ ಉತ್ಪನ್ನಗಳ ಸಾಗಾಣಿಕೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಅದೇಶ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

African Swine Fever: ಕೇರಳದ ಕಣ್ಣೂರು ಮತ್ತು ವಯನಾಡು ಜಿಲ್ಲೆಗಳಲ್ಲಿ ಮತ್ತೆ ಹಂದಿ ಜ್ವರ ಪತ್ತೆ

ಕೇರಳ: ಕೇರಳದಲ್ಲಿ ಇತ್ತೀಚೆಗೆ ಆಫ್ರಿಕನ್ ಹಂದಿ ಜ್ವರ ಹರಡುವುದನ್ನು ತಡೆಗಟ್ಟಲು ವಯನಾಡ್ ಜಿಲ್ಲೆಯಲ್ಲಿ 300 ಕ್ಕೂ ಹೆಚ್ಚು ಹಂದಿಗಳನ್ನು ಕೊಂದ ಕೇವಲ ಒಂದು ವಾರದ ನಂತರ ಮತ್ತೆ ರಾಜ್ಯದ ಕಣ್ಣೂರು ಜಿಲ್ಲೆಯಲ್ಲಿ ಹಂದಿ ಜ್ವರದ ಹೊಸ ಪ್ರಕರಣಗಳು ವರದಿಯಾಗಿವೆ. ವಯನಾಡು ಮತ್ತು ಕಣ್ಣೂರಿನಲ್ಲಿ ತಲಾ ಒಂದೊಂದು ಪ್ರಕರಣ ವರದಿಯಾಗಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ರೋಗದ ವರದಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆಯನ್ನು ನಿಗದಿಪಡಿಸಲಾಗಿದೆ ಎಂದು ಕಣ್ಣೂರಿನ ಜಿಲ್ಲಾಧಿಕಾರಿ ಕಚೇರಿ ಪಿಟಿಐಗೆ ತಿಳಿಸಿದೆ.

ವಯನಾಡಿನ ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ.ರಾಜೇಶ್ ಅವರು, ಸುಲ್ತಾನ್ ಬತ್ತೇರಿಯ ನೆನ್ಮೆನಿ ಫಾರ್ಮ್ ಮತ್ತು ಅದರ ಸುತ್ತಮುತ್ತಲಿನ 193 ಹಂದಿಗಳನ್ನು ಈ ವಾರದಲ್ಲಿ ರೋಗ ಹರಡುವುದನ್ನು ತಡೆಯಲು ಕೊಲ್ಲಲಾಗುವುದು ಎಂದು ಪಿಟಿಐಗೆ ತಿಳಿಸಿದರು.

Published On - 8:46 pm, Tue, 23 August 22

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ