AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫ್ರಿಕನ್ ಹಂದಿ ಜ್ವರ ಪತ್ತೆ ಹಿನ್ನೆಲೆ ಕಲಬುರಗಿಯಲ್ಲಿ ಹಂದಿ ಹಾಗೂ ಹಂದಿಗಳ ಉತ್ಪನ್ನ ಸಾಗಾಣಿಕೆಗೆ ನಿರ್ಬಂಧ

ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಹಂದಿ ಹಾಗೂ ಹಂದಿಗಳ ಉತ್ಪನ್ನ ಸಾಗಾಣಿಕೆಗೆ ನಿರ್ಬಂಧ ಹೇರಿದೆ.

ಆಫ್ರಿಕನ್ ಹಂದಿ ಜ್ವರ ಪತ್ತೆ ಹಿನ್ನೆಲೆ ಕಲಬುರಗಿಯಲ್ಲಿ ಹಂದಿ ಹಾಗೂ ಹಂದಿಗಳ ಉತ್ಪನ್ನ ಸಾಗಾಣಿಕೆಗೆ ನಿರ್ಬಂಧ
ಹಂದಿImage Credit source: News18
TV9 Web
| Updated By: ಆಯೇಷಾ ಬಾನು|

Updated on:Aug 23, 2022 | 8:51 PM

Share

ಕಲಬುರಗಿ: ಬೆಂಗಳೂರು ಗ್ರಾಮಾಂತರ‌ ಜಿಲ್ಲೆಯ ಹೊಸಕೋಟೆ ತಾಲೂಕಿನ‌ ಬೆಳಮಂಗಲಾ ಗ್ರಾಮದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಹಂದಿ ಹಾಗೂ ಹಂದಿಗಳ ಉತ್ಪನ್ನ ಸಾಗಾಣಿಕೆಗೆ ನಿರ್ಬಂಧ ಹೇರಿದೆ.

ಕಲಬುರಗಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ರೋಗ ನಿಯಂತ್ರಣ ಕೈಗೊಳ್ಳಲು ಪ್ರಾಣಿಗಳಲ್ಲಿ ಸೋಂಕುಕಾರಕ ಮತ್ತು ಸಾಂಕ್ರಾಮಿಕ ರೋಗಗಳ ಪ್ರತಿಬಂಧಕ ಮತ್ತು ನಿಯಂತ್ರಣ ಅಧಿನಿಯಮದಡಿ ಹಾಗೂ ಭಾರತ ಸರ್ಕಾರದಿಂದ ಪ್ರಕಟಿಸಲಾದ ಜೂನ್ 2020ರ ರಾಷ್ಟ್ರೀಯ ಕ್ರಿಯಾ ಯೋಜನೆ ಅಧ್ಯಾಯ-4.4 ರ ಮಾರ್ಗಸೂಚಿ ಪ್ರಕಾರ ನೆರೆ ರಾಜ್ಯಗಳಿಂದ ಜಿಲ್ಲೆಯ ಒಳಗೆ, ಹೊರಗೆ ಹಂದಿಗಳು ಮತ್ತು ಹಂದಿಗಳ ಉತ್ಪನ್ನಗಳ ಸಾಗಾಣಿಕೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಅದೇಶ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

African Swine Fever: ಕೇರಳದ ಕಣ್ಣೂರು ಮತ್ತು ವಯನಾಡು ಜಿಲ್ಲೆಗಳಲ್ಲಿ ಮತ್ತೆ ಹಂದಿ ಜ್ವರ ಪತ್ತೆ

ಕೇರಳ: ಕೇರಳದಲ್ಲಿ ಇತ್ತೀಚೆಗೆ ಆಫ್ರಿಕನ್ ಹಂದಿ ಜ್ವರ ಹರಡುವುದನ್ನು ತಡೆಗಟ್ಟಲು ವಯನಾಡ್ ಜಿಲ್ಲೆಯಲ್ಲಿ 300 ಕ್ಕೂ ಹೆಚ್ಚು ಹಂದಿಗಳನ್ನು ಕೊಂದ ಕೇವಲ ಒಂದು ವಾರದ ನಂತರ ಮತ್ತೆ ರಾಜ್ಯದ ಕಣ್ಣೂರು ಜಿಲ್ಲೆಯಲ್ಲಿ ಹಂದಿ ಜ್ವರದ ಹೊಸ ಪ್ರಕರಣಗಳು ವರದಿಯಾಗಿವೆ. ವಯನಾಡು ಮತ್ತು ಕಣ್ಣೂರಿನಲ್ಲಿ ತಲಾ ಒಂದೊಂದು ಪ್ರಕರಣ ವರದಿಯಾಗಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ರೋಗದ ವರದಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆಯನ್ನು ನಿಗದಿಪಡಿಸಲಾಗಿದೆ ಎಂದು ಕಣ್ಣೂರಿನ ಜಿಲ್ಲಾಧಿಕಾರಿ ಕಚೇರಿ ಪಿಟಿಐಗೆ ತಿಳಿಸಿದೆ.

ವಯನಾಡಿನ ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ.ರಾಜೇಶ್ ಅವರು, ಸುಲ್ತಾನ್ ಬತ್ತೇರಿಯ ನೆನ್ಮೆನಿ ಫಾರ್ಮ್ ಮತ್ತು ಅದರ ಸುತ್ತಮುತ್ತಲಿನ 193 ಹಂದಿಗಳನ್ನು ಈ ವಾರದಲ್ಲಿ ರೋಗ ಹರಡುವುದನ್ನು ತಡೆಯಲು ಕೊಲ್ಲಲಾಗುವುದು ಎಂದು ಪಿಟಿಐಗೆ ತಿಳಿಸಿದರು.

Published On - 8:46 pm, Tue, 23 August 22

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?