AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫ್ರಿಕನ್ ಹಂದಿ ಜ್ವರ ಪತ್ತೆ ಹಿನ್ನೆಲೆ ಕಲಬುರಗಿಯಲ್ಲಿ ಹಂದಿ ಹಾಗೂ ಹಂದಿಗಳ ಉತ್ಪನ್ನ ಸಾಗಾಣಿಕೆಗೆ ನಿರ್ಬಂಧ

ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಹಂದಿ ಹಾಗೂ ಹಂದಿಗಳ ಉತ್ಪನ್ನ ಸಾಗಾಣಿಕೆಗೆ ನಿರ್ಬಂಧ ಹೇರಿದೆ.

ಆಫ್ರಿಕನ್ ಹಂದಿ ಜ್ವರ ಪತ್ತೆ ಹಿನ್ನೆಲೆ ಕಲಬುರಗಿಯಲ್ಲಿ ಹಂದಿ ಹಾಗೂ ಹಂದಿಗಳ ಉತ್ಪನ್ನ ಸಾಗಾಣಿಕೆಗೆ ನಿರ್ಬಂಧ
ಹಂದಿImage Credit source: News18
TV9 Web
| Edited By: ಆಯೇಷಾ ಬಾನು|

Updated on:Aug 23, 2022 | 8:51 PM

Share

ಕಲಬುರಗಿ: ಬೆಂಗಳೂರು ಗ್ರಾಮಾಂತರ‌ ಜಿಲ್ಲೆಯ ಹೊಸಕೋಟೆ ತಾಲೂಕಿನ‌ ಬೆಳಮಂಗಲಾ ಗ್ರಾಮದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಹಂದಿ ಹಾಗೂ ಹಂದಿಗಳ ಉತ್ಪನ್ನ ಸಾಗಾಣಿಕೆಗೆ ನಿರ್ಬಂಧ ಹೇರಿದೆ.

ಕಲಬುರಗಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ರೋಗ ನಿಯಂತ್ರಣ ಕೈಗೊಳ್ಳಲು ಪ್ರಾಣಿಗಳಲ್ಲಿ ಸೋಂಕುಕಾರಕ ಮತ್ತು ಸಾಂಕ್ರಾಮಿಕ ರೋಗಗಳ ಪ್ರತಿಬಂಧಕ ಮತ್ತು ನಿಯಂತ್ರಣ ಅಧಿನಿಯಮದಡಿ ಹಾಗೂ ಭಾರತ ಸರ್ಕಾರದಿಂದ ಪ್ರಕಟಿಸಲಾದ ಜೂನ್ 2020ರ ರಾಷ್ಟ್ರೀಯ ಕ್ರಿಯಾ ಯೋಜನೆ ಅಧ್ಯಾಯ-4.4 ರ ಮಾರ್ಗಸೂಚಿ ಪ್ರಕಾರ ನೆರೆ ರಾಜ್ಯಗಳಿಂದ ಜಿಲ್ಲೆಯ ಒಳಗೆ, ಹೊರಗೆ ಹಂದಿಗಳು ಮತ್ತು ಹಂದಿಗಳ ಉತ್ಪನ್ನಗಳ ಸಾಗಾಣಿಕೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಅದೇಶ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

African Swine Fever: ಕೇರಳದ ಕಣ್ಣೂರು ಮತ್ತು ವಯನಾಡು ಜಿಲ್ಲೆಗಳಲ್ಲಿ ಮತ್ತೆ ಹಂದಿ ಜ್ವರ ಪತ್ತೆ

ಕೇರಳ: ಕೇರಳದಲ್ಲಿ ಇತ್ತೀಚೆಗೆ ಆಫ್ರಿಕನ್ ಹಂದಿ ಜ್ವರ ಹರಡುವುದನ್ನು ತಡೆಗಟ್ಟಲು ವಯನಾಡ್ ಜಿಲ್ಲೆಯಲ್ಲಿ 300 ಕ್ಕೂ ಹೆಚ್ಚು ಹಂದಿಗಳನ್ನು ಕೊಂದ ಕೇವಲ ಒಂದು ವಾರದ ನಂತರ ಮತ್ತೆ ರಾಜ್ಯದ ಕಣ್ಣೂರು ಜಿಲ್ಲೆಯಲ್ಲಿ ಹಂದಿ ಜ್ವರದ ಹೊಸ ಪ್ರಕರಣಗಳು ವರದಿಯಾಗಿವೆ. ವಯನಾಡು ಮತ್ತು ಕಣ್ಣೂರಿನಲ್ಲಿ ತಲಾ ಒಂದೊಂದು ಪ್ರಕರಣ ವರದಿಯಾಗಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ರೋಗದ ವರದಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆಯನ್ನು ನಿಗದಿಪಡಿಸಲಾಗಿದೆ ಎಂದು ಕಣ್ಣೂರಿನ ಜಿಲ್ಲಾಧಿಕಾರಿ ಕಚೇರಿ ಪಿಟಿಐಗೆ ತಿಳಿಸಿದೆ.

ವಯನಾಡಿನ ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ.ರಾಜೇಶ್ ಅವರು, ಸುಲ್ತಾನ್ ಬತ್ತೇರಿಯ ನೆನ್ಮೆನಿ ಫಾರ್ಮ್ ಮತ್ತು ಅದರ ಸುತ್ತಮುತ್ತಲಿನ 193 ಹಂದಿಗಳನ್ನು ಈ ವಾರದಲ್ಲಿ ರೋಗ ಹರಡುವುದನ್ನು ತಡೆಯಲು ಕೊಲ್ಲಲಾಗುವುದು ಎಂದು ಪಿಟಿಐಗೆ ತಿಳಿಸಿದರು.

Published On - 8:46 pm, Tue, 23 August 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ