AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫಜಲಪುರ ಘತ್ತರಗಾ ಭಾಗ್ಯವಂತಿ ದೇವಸ್ಥಾನದಲ್ಲಿ ಮತ್ತೆ ಕಳ್ಳತನ, ಹತ್ತಾರು ಅನುಮಾನಗಳ ಹುತ್ತ, ಹೆಚ್ಚಿಸಬೇಕಿದೆ ಇನ್ನಷ್ಟು ಭದ್ರತೆ

Temple Theft: ದೇವಸ್ಥಾನದಲ್ಲಿ ಓರ್ವ ಹೋಮ್​ ಗಾರ್ಡ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಆದ್ರು ಕೂಡಾ ಖತರ್ನಾಕ್ ಕಳ್ಳರು ರಾತ್ರಿ ಸಮಯದಲ್ಲಿ ದೇವಸ್ಥಾನಕ್ಕೆ ಕಳ್ಳ ಬೆಕ್ಕುಗಳಂತೆ ಬಂದು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ.

ಅಫಜಲಪುರ ಘತ್ತರಗಾ ಭಾಗ್ಯವಂತಿ ದೇವಸ್ಥಾನದಲ್ಲಿ ಮತ್ತೆ ಕಳ್ಳತನ, ಹತ್ತಾರು ಅನುಮಾನಗಳ ಹುತ್ತ, ಹೆಚ್ಚಿಸಬೇಕಿದೆ ಇನ್ನಷ್ಟು ಭದ್ರತೆ
ಅಫಜಲಪುರ ಘತ್ತರಗಾ ಭಾಗ್ಯವಂತಿ ದೇವಸ್ಥಾನ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Dec 30, 2022 | 2:46 PM

ಅದು ಲಕ್ಷಾಂತರ ಭಕ್ತರ ಆರಾಧ್ಯ ಸ್ಥಾನ. ಪ್ರತಿನಿತ್ಯ ಆ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಬರ್ತಾರೆ. ದೇವಿಯ ದರ್ಶನ ಪಡೆಯುತ್ತಾರೆ. ಆದ್ರೆ ಇದೇ ದೇವಸ್ಥಾನಕ್ಕೆ ಎಂಟ್ರಿ ಕೊಟ್ಟಿದ್ದ ಕಳ್ಳರು, ದೇವಿಯ ಬಂಗಾರದ ಆಭರಣಗಳು, ಹುಂಡಿಯಲ್ಲಿದ್ದ ಹಣವನ್ನು ಕದ್ದೊಯ್ದಿದ್ದಾರೆ. ಕೆಲ ವರ್ಷಗಳ ಹಿಂದೆ ದೇವಸ್ಥಾನದ ಪೂಜಾರಿಗಳು ಮತ್ತು ಸಿಬ್ಬಂದಿಯೇ ಇದೇ ದೇವಸ್ಥಾನದ ಹುಂಡಿಗೆ ಕನ್ನ ಹಾಕಿದ್ದರು (Temple Theft) ಎಂಬುದು ಗಮನಾರ್ಹ. ಆದ್ರೆ ಇದೀಗ ಮತ್ತೆ ಅದೇ ದೇವಸ್ಥಾನದಲ್ಲಿ ಕಳ್ಳತನವಾಗಿದ್ದು, ಹತ್ತಾರು ಅನುಮಾನಗಳಿಗೆ ಕಾರಣವಾಗಿದೆ. ದೇವಸ್ಥಾನದಲ್ಲಿ ಒಂದಡೆ ಪೊಲೀಸರಿಂದ ಪರಿಶೀಲನೆ. ಮತ್ತೊಂದಡೆ ಚಿಲ್ಲರೆ ದುಡ್ಡನ್ನು ಖಾಲಿ ಜಾಗದಲ್ಲಿ ಬಿಸಾಕಿ ಹೋಗಿರುವ ದುಷ್ಕರ್ಮಿಗಳು. ಇಂತಹದೊಂದು ದೃಶ್ಯ ಕಂಡುಬಂದಿದ್ದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸುಕ್ಷೇತ್ರ ಘತ್ತರಗಾ ಭಾಗ್ಯವಂತಿ ದೇವಸ್ಥಾನದಲ್ಲಿ (Afzalpur Ghattaragi Bhagyavanti Temple).

ದೇವಿಯ ಒಡವೆಯನ್ನೂ ಬಿಡದೆ ಕದ್ದೊಯ್ದ ಕಳ್ಳರು:

ಹೌದು ಘತ್ತರಗಾ ಭಾಗ್ಯವಂತಿ ದೇವಸ್ಥಾನ, ಈ ಭಾಗದಲ್ಲಿ ಸುಪ್ರಸಿದ್ದ ದೇವಸ್ಥಾನ. ಪ್ರತಿನಿತ್ಯ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಬರ್ತಾರೆ. ಈ ಭಾಗದ ಶ್ರದ್ದಾ ಕೇಂದ್ರವಾಗಿರುವ ದೇವಸ್ಥಾನಕ್ಕೆ ರಾಜ್ಯದ ಅನೇಕ ಕಡೆ ಭಕ್ತರು ಇದ್ದಾರೆ. ಆದ್ರೆ ರಾತ್ರಿ ಕಳೆದು ಬೆಳಗಾಗೋದರಲ್ಲಿ ದೇವಸ್ಥಾನದ ಸಿಬ್ಬಂದಿ ಮತ್ತು ಭಕ್ತರು ಶಾಕ್ ಆಗಿದ್ದಾರೆ. ಯಾಕಂದ್ರೆ ಬುಧವಾರ ರಾತ್ರಿ ಒಂದು ಗಂಟೆ ಸಮಯದಲ್ಲಿ ದೇವಸ್ಥಾನದ ಹಿಂದಿನ ಬಾಗಿಲು ಮುರಿದು ಒಳ ನುಗ್ಗಿರೋ ಮೂವರು ಕಳ್ಳರು, ದೇವಿಯ ಚಿನ್ನದ ಒಡವೆ, ದೇವಿಯ ಬಟ್ಟೆಗಳು ಸೇರಿದಂತೆ ಹುಂಡಿಯಲ್ಲಿದ್ದ ಹಣವನ್ನು ಕದ್ದೊಯ್ದಿದ್ದಾರೆ.

Afzalpur Ghattaragi Bhagyavanti Temple theft

ದೇವಸ್ಥಾನದಿಂದ ಹುಂಡಿಯಲ್ಲಿನ ಎಲ್ಲಾ ಹಣವನ್ನು ಬಟ್ಟೆಯಲ್ಲಿ ಹಾಕಿಕೊಂಡು ಹೋಗಿದ್ದ ದುಷ್ಕರ್ಮಿಗಳು, ದೇವಸ್ಥಾನದ ಸಮೀಪ ಹೋಗಿ, ಚಿಲ್ಲರೆ ಹಣವನ್ನು ತಗೆದುಕೊಂಡು ಹೋಗುವದು ಕಷ್ಟವಾದಾಗ, ಚಿಲ್ಲರೆ ಹಣವನ್ನು ರಸ್ತೆ ಸಮೀಪವೇ ಬಿಸಾಡಿ, ನೋಟುಗಳನ್ನು ಮಾತ್ರ ತಗೆದುಕೊಂಡು ಹೋಗಿದ್ದಾರೆ. ದೇವಿಯ ಮೂರ್ತಿಗೆ ಇರಿಸಲಾಗಿದ್ದು 35 ಗ್ರಾಂ ಚಿನ್ನಾಭರಣವನ್ನು ಕದ್ದೊಯ್ದಿದ್ದಾರೆ. ಮುಖಕ್ಕೆ ಮಂಕಿ ಕ್ಯಾಪ್, ಹ್ಯಾಂಡ್ ಗ್ಲೌಸ್ ಹಾಕಿಕೊಂಡು ಎಂಟ್ರಿ ನೀಡಿದ್ದ ಕಳ್ಳರು ಹಣ ಮತ್ತು ಚಿನ್ನಾಭರಣ ಕದ್ದೊಯ್ದಿದ್ದಾರೆ ಎಂದು ಖುದ್ದು ಕಲಬುರಗಿ ಎಸ್ಪಿ ಇಶಾ ಪಂತ್ ತಿಳಿಸಿದ್ದಾರೆ.

ಇನ್ನು ಘತ್ತರಗಾ ಭಾಗ್ಯವಂತಿ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವುದು ಇದೇ ಮೊದಲೇನಲ್ಲ. ಮೇಲಿಂದ ಮೇಲೆ ದೇವಸ್ಥಾನದಲ್ಲಿ ಕಳ್ಳತನ ಘಟನೆಗಳು ನಡೆಯುತ್ತಲೇ ಇವೆ. ಈ ಹಿಂದೆ ಕೂಡಾ ಕಳ್ಳರು ಕಳ್ಳತನ ಮಾಡಿದ್ರು. ಇನ್ನು ಕೆಲ ವರ್ಷಗಳ ಹಿಂದೆ ದೇವಸ್ಥಾನದ ಸಿಬ್ಬಂದಿಯೇ, ದೇವಸ್ಥಾನದ ಹುಂಡಿಗೆ ಕನ್ನ ಹಾಕಿದ್ದರು. ಅದು ಸಿಸಿಟಿವಿಯಲ್ಲಿ ಸೆರೆಯಾದ ನಂತರ, ಅನೇಕ ಸಿಬ್ಬಂದಿ ಮತ್ತು ಪೂಜಾರಿಗಳನ್ನು ಕೆಲಸದಿಂದ ತಗೆದು ಹಾಕಲಾಗಿತ್ತು.

Afzalpur Ghattaragi Bhagyavanti Temple theft

ಇನ್ನು ದೇವಸ್ಥಾನದಲ್ಲಿ ಓರ್ವ ಹೋಮ್​ ಗಾರ್ಡ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಆದ್ರು ಕೂಡಾ ಖತರ್ನಾಕ್ ಕಳ್ಳರು ರಾತ್ರಿ ಸಮಯದಲ್ಲಿ ದೇವಸ್ಥಾನಕ್ಕೆ ಕಳ್ಳ ಬೆಕ್ಕುಗಳಂತೆ ಬಂದು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ.

ಸದ್ಯ ಘತ್ತರಗಾ ಭಾಗ್ಯವಂತಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಹುಡುಕಾಟ ನಡೆಸುತ್ತಿದ್ದಾರೆ. ಆದ್ರೆ ಲಕ್ಷಾಂತರ ಭಕ್ತರ ಆರಾಧ್ಯ ದೈವವಾಗಿರುವ ಭಾಗ್ಯವಂತಿ ದೇವಸ್ಥಾನದಲ್ಲಿ ಮೇಲಿಂದ ಮೇಲೆ ಕಳ್ಳತನವಾಗುತ್ತಿರುವದು ಭಕ್ತರ ನೋವಿಗೆ ಕಾರಣವಾಗಿದೆ. ಹೀಗಾಗಿ ಪೊಲೀಸರು ಮತ್ತು ಮುಜರಾಯಿ ಇಲಾಖೆ, ದೇವಸ್ಥಾನದಲ್ಲಿ ಇನ್ನಷ್ಟು ಭದ್ರತೆಯನ್ನು ಹೆಚ್ಚಿಸುವ ಕೆಲಸಕ್ಕೆ ಮುಂದಾಗಬೇಕಿದೆ.

ವರದಿ: ಸಂಜಯ್, ಟಿವಿ 9, ಕಲಬುರಗಿ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ಮಾಡಿ

ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ