AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವರಾಗಲು ಪಾಟೀಲ್ ಈ ಪ್ಲ್ಯಾನ್: ಮತಗಳ್ಳತನ ಬಗ್ಗೆ ಬಿಜೆಪಿ ಮಾಜಿ ಶಾಸಕ ಸ್ಫೋಟಕ ಹೇಳಿಕೆ

ಆಳಂದ ಕ್ಷೇತ್ರದಲ್ಲಿ ಮತಕಳ್ಳತನದ ಆರೋಪ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದೆ. ನಿನ್ನೆ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್​​ ಮನೆ ಮೇಲೆ SIT ದಾಳಿ ಮಾಡಿತ್ತು. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಸುಭಾಷ್ ಗುತ್ತೇದಾರ್, ನನ್ನ ವಿರುದ್ಧ ಆರೋಪಮಾಡಿ ಬಿ.ಆರ್.ಪಾಟೀಲ್ ಸಚಿವರಾಗಲು ಪ್ಲ್ಯಾನ್​ ಮಾಡಿದ್ದಾರೆ ಎಂದು ಬಾಂಬ್​ ಸಿಡಿಸಿದ್ದಾರೆ.

ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 18, 2025 | 2:54 PM

Share

ಕಲಬುರಗಿ, ಅಕ್ಟೋಬರ್​ 18: ಕಲಬುರಗಿಯ ಆಳಂದ ಕ್ಷೇತ್ರದಲ್ಲಿ ಮತಕಳ್ಳತನದ (Aland Vote Theft Case)  ಆರೋಪ ದೇಶಾದ್ಯಂತ ಸದ್ದು ಜೋರಾಗಿದೆ. ನಿನ್ನೆ ಎಸ್ಐಟಿ ಅಧಿಕಾರಿಗಳು, ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್‌ಗೆ (subhash guttedar) ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಸುಭಾಷ್ ಮನೆ ಬಳಿಯೇ ಕೆಲ ದಾಖಲೆಗಳನ್ನ ಸುಟ್ಟಿರುವುದು ಬಯಲಾಗಿತ್ತು. ಸದ್ಯ ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಸುಭಾಷ್, ನಾವು ಯಾವುದೇ ಮತಗಳವು ಮಾಡಿಲ್ಲ, ಮತಗಳನ್ನು ಡಿಲೀಟ್ ಮಾಡಿಲ್ಲ. ನನ್ನ ವಿರುದ್ಧ ಕಾಂಗ್ರೆಸ್​ನವರ ಆರೋಪ ಸುಳ್ಳು ಎಂದು ಹೇಳಿದ್ದಾರೆ.

ಮಂತ್ರಿಯಾಗಲು ಪ್ರಯತ್ನ ಎಂದ ಸುಭಾಷ್ ಗುತ್ತೇದಾರ್

ನಗರದಲ್ಲಿ ಟಿವಿ9ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಬಿ.ಆರ್.ಪಾಟೀಲ್ ಸಚಿವರಾಗಲು ರಾಹುಲ್ ಗಾಂಧಿ ಗಮನ ಸೆಳೆದಿದ್ದಾರೆ. ನನ್ನ ವಿರುದ್ಧ ಆರೋಪಮಾಡಿ ಬಿ.ಆರ್.ಪಾಟೀಲ್ ಸಚಿವರಾಗಲು ಪ್ಲ್ಯಾನ್ ಮಾಡಿದ್ದಾರೆ. ಮತಗಳ್ಳತನವಾಗಿದೆ ಎಂದು ತಮ್ಮೂರಿನವರನ್ನು ದೆಹಲಿಗೆ ಕರೆದೊಯ್ದು ರಾಹುಲ್ ಗಾಂಧಿ ಜೊತೆ ನಿಲ್ಲಿಸಿ ಹೇಳಿದ್ದಾರೆ. ಆ ಮೂಲಕ ರಾಹುಲ್ ಗಾಂಧಿಗೆ ಹತ್ತಿರವಾಗಿ ಮಂತ್ರಿಯಾಗಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ಆರೋಪ: ಬಿಜೆಪಿ ಮಾಜಿ ಶಾಸಕರ ಮನೆ ಮೇಲೆ SIT ದಾಳಿ

ನನಗೆ ಈವರೆಗೆ ಯಾವುದೇ ನೋಟಿಸ್ ಕೊಟ್ಟಿಲ್ಲ, ನೋಟಿಸ್ ನೀಡಿದರೆ ಎಸ್ಐಟಿ ವಿಚಾರಣೆಗೆ ಹಾಜರಾಗುವೆ. ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲಿ ಯಾವುದೇ ಮತಗಳ್ಳತನವಾಗಿಲ್ಲ. ನಾನು ಚುನಾವಣೆಗೆ ಸ್ಪರ್ಧಿಸಿದ್ದರಿಂದ ವೋಟರ್ ಲಿಸ್ಟ್ ನೀಡಿರುತ್ತಾರೆ. ಎಸ್​​​ಐಟಿ ಸೇರಿದಂತೆ ನಾನು ಯಾವುದೇ ತನಿಖೆ ಎದುರಿಸಲು ಸಿದ್ಧನಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ವೋಟ್ ಚೋರಿ ಕೇಸ್​​: ಕಲಬುರಗಿಯ 5 ಮನೆಗಳ ಮೇಲೆ ಎಸ್​ಐಟಿ ದಾಳಿ, ಸಾವಿರಾರು ವೋಟರ್ ಐಡಿ ಪತ್ತೆ

ಸರ್ಕಾರದ ಬೊಕ್ಕಸದಲ್ಲಿ ಹಣವಿಲ್ಲದೆ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ. ಇದೇ ಕಾರಣಕ್ಕೆ ಜನರ ಗಮನ ಬೇರೆಡೆ ಸೆಳೆಯಲು ಹೀಗೆ ಮಾಡುತ್ತಿದ್ದಾರೆ. ನಮ್ಮ ಮನೆ ಬಳಿ ಯಾವುದೇ ಮತದಾರರನ್ನು ಪಟ್ಟಿಯಿಂದ ತೆಗೆದಿಲ್ಲ. ದೀಪಾವಳಿ ಹಿನ್ನೆಲೆಯಲ್ಲಿ ಕೆಲಸದವರು ಮನೆ ಕ್ಲೀನ್ ಮಾಡಿದ್ದಾರೆ. ಅದು ಮತದಾರರು ಪಟ್ಟಿ ಎಂದು ಮನೆಗೆಲಸದವರಿಗೆ ಗೊತ್ತೇ ಇಲ್ಲ. ಮನೆಗೆಲಸದವರಿಗೆ ಮತದಾರರ ಪಟ್ಟಿ ಸುಡಬೇಕೆಂಬ ಉದ್ದೇಶವಿರಲಿಲ್ಲ, ಹಾಗೇನಾದರೂ ಮಾಡಬೇಕು ಅಂತಿದ್ದರೆ ದೂರದ ಸ್ಥಳದಲ್ಲಿ ಸುಡುತ್ತಿದ್ದರು ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!