AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಲಘು ಭೂಕಂಪ, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 3.4ರಷ್ಟು ದಾಖಲು

ಜಿಲ್ಲೆಯಲ್ಲಿ ಮತ್ತೆ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಬೆಳಗ್ಗೆ 6 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 3.4ರಷ್ಟು ದಾಖಲಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಲಘು ಭೂಕಂಪ, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 3.4ರಷ್ಟು ದಾಖಲು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 10, 2021 | 7:49 AM

Share

ಕಲಬುರಗಿ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ. ಏಕೆಂದರೆ ಜಿಲ್ಲೆಯಲ್ಲಿ ಮತ್ತೆ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಬೆಳಗ್ಗೆ 6 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 3.4ರಷ್ಟು ದಾಖಲಾಗಿದೆ.

ಚಿಂಚೋಳಿ, ಕಾಳಗಿ‌ ತಾಲೂಕಿನ ಹಲಚೇರಾ, ಗಡಿಕೇಶ್ವರ್, ರಾಜಾಪುರ ಸೇರಿ ಹಲವಡೆ ಭೂಮಿ ಕಂಪಿಸಿದಂತೆ ಭಾಸವಾಗಿದೆ. ಕಳೆದ 2 ದಿನದಿಂದ ಇದೇ ರೀತಿ ಭೂಮಿ ಕಂಪಿಸಿದ ಅನುಭವ ಜನರಿಗೆ ಆಗುತ್ತಿದೆ. ಹೀಗಾಗಿ ಗ್ರಾಮಸ್ಥರು ಭಯದಲ್ಲೇ ಜೀವನ ಸಾಗಿಸುವಂತಾಗಿದೆ.

ಇನ್ನು ಮತ್ತೊಂದೆಡೆ ವಿಜಯಪುರ ಜಿಲ್ಲೆಯಲ್ಲೂ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಮುಂಜಾನೆ 5.15, ಬೆಳಗ್ಗೆ 7.15ಕ್ಕೆ ಭೂಮಿ ಕಂಪಿಸಿದೆ. ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಮಸೂತಿ, ಮಲಘಾಣ, ಸುತ್ತಮುತ್ತ ಗ್ರಾಮಗಳಲ್ಲಿ ಕಂಪನದ ಅನುಭವವಾಗಿದೆ. ಜಿಲ್ಲೆಯಲ್ಲಿ ಸರಣಿ ಭೂಕಂಪನದಿಂದ ಜನರಲ್ಲಿ ಭಯ ಆವರಿಸಿದೆ. ಆತಂಕದಲ್ಲೇ ಜನ ಕಾಲ‌ ಕಳೆಯುತ್ತಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಭಾರಿ ಮಳೆ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಭಾರಿ ಮಳೆಯಾಗಿದ್ದು ಜಿಲ್ಲೆಯ ಗೌರಿಬಿದನೂರು, ಗುಡಿಬಂಡೆ, ಬಾಗೇಪಲ್ಲಿ, ಶಿಡ್ಲಘಟ್ಟ, ಚಿಂತಾಮಣಿ ಸೇರಿದಂತೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಧಾರಾಕರ ಮಳೆಯಾಗುತ್ತಿದೆ. ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಸೂಕ್ತ ಮೋರಿ ವ್ಯವಸ್ಥೆಯಿಲ್ಲದೆ ರಸ್ತೆಗಳಲ್ಲೆ ನೀರು ನಿಂತಿದೆ. ರಸ್ತೆಗಳಲ್ಲಿ ನೀರು ನಿಂತ ಹಿನ್ನೆಲೆ ವಾಹನ ಸವಾರರು ಪರದಾಡುವಂತಾಗಿದೆ. ಮಳೆಯಿಂದ ಜಿಲ್ಲೆಯ ಕೆರೆ ಕುಂಟೆ ಜಲಾಶಯಗಳು ನದಿಗಳು ಉಕ್ಕಿ ಹರಿಯುತ್ತಿವೆ. ಮಳೆ ನೀರಿನಿಂದ ಜಕ್ಕಲಮಡಗು, ಶ್ರೀನಿವಾಸಸಾಗರ, ಮಂಚೇನಹಳ್ಳಿ ಕೆರೆ, ಗುಡಿಬಂಡೆ ಕೆರೆಗಳು ಕೋಡಿ ಹರಿಯುತ್ತಿವೆ.

ಇದನ್ನೂ ಓದಿ: ಕಲಬುರಗಿ: ಮತ್ತೆ ಲಘು ಭೂಕಂಪನ; ಆತಂಕದಲ್ಲಿ ಮನೆಯಿಂದ ಹೊರ ಬಂದು ಮಳೆಯಲ್ಲಿಯೇ ಕಾಲ ಕಳೆದ ಗ್ರಾಮಸ್ಥರು

Published On - 7:34 am, Sun, 10 October 21

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್