AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಸತಿ ಯೋಜನೆಯಲ್ಲಿ ಮತ್ತೊಂದು ಭ್ರಷ್ಟಾಚಾರ ಆರೋಪ: ಹಣ ಪಡೆದು ಮನೆ ಇದ್ದವರಿಗೇ ಮನೆ ಹಂಚಿಕೆ!

ವಸತಿ ಯೋಜನೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಬಗ್ಗೆ ಶಾಸಕ ಬಿಆರ್ ಪಾಟೀಲ್ ಆಡಿಯೋ ವೈರಲ್‌ ಬೆನ್ನಲ್ಲೇ ಇಲಾಖೆಯ ಒಂದೊಂದೇ ಹಗರಣಗಳು ಹೊರಬರುತ್ತಿವೆ. ಕಲಬುರಗಿಯಲ್ಲಿ ಸೂರು ಇಲ್ಲದವರಿಗೆ ವಸತಿ ಯೋಜನೆಯಡಿ ನೀಡಬೇಕಿದ್ದ ಮನೆಗಳನ್ನು ಹಣ ಪಡೆದು ಮನೆ ಇರುವವರಿಗೇ ಮಾರಾಟ ಮಾಡಿರುವ ಗಂಭೀರ ಆರೋಪ ಕೇಳಿ ಬಂದಿದೆ.

ವಸತಿ ಯೋಜನೆಯಲ್ಲಿ ಮತ್ತೊಂದು ಭ್ರಷ್ಟಾಚಾರ ಆರೋಪ: ಹಣ ಪಡೆದು ಮನೆ ಇದ್ದವರಿಗೇ ಮನೆ ಹಂಚಿಕೆ!
ಕೊಳಗೇರಿ ಅಭಿವೃದ್ಧಿಮಂಡಳಿ ಕಚೇರಿ
ದತ್ತಾತ್ರೇಯ ಪಾಟೀಲ್​
| Edited By: |

Updated on: Jul 03, 2025 | 9:49 AM

Share

ಕಲಬುರಗಿ, ಜುಲೈ 3: ಕಲಬುರಗಿ (Kalaburagi) ತಾಲೂಕಿನ ಕೆಸರಟಗಿ ಗ್ರಾಮದಲ್ಲಿ ಬಡ ಜನರಿಗೆ ಸೂರಿಲ್ಲದ ಕಾರಣ ಸ್ಲಂ (Slum Board) ಬೋರ್ಡ್‌ 52 ಮನೆಗಳನ್ನು ಮಂಜೂರು ಮಾಡಿತ್ತು. ಆದರೆ ಸ್ಲಂ ಬೋರ್ಡ್ ಅಧಿಕಾರಿಗಳು ನೈಜ ಫಲಾನುಭವಿಗಳಿಗೆ ಮನೆಗಳನ್ನು ನೀಡುವುದರ ಬದಲು ಹಣ ಪಡೆದು ಉಳ್ಳವರಿಗೆ ಮನೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಫಲಾನುಭವಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಸ್ಲಂ ಬೋರ್ಡ್ ಕಚೇರಿ ಮುಂದೆ ಬುಧವಾರ ಫಲಾನುಭವಿಗಳು ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.

ಅಂದಹಾಗೆ, ಫಲಾನುಭವಿಗಳಿಗೆ ಮನೆಗಳು ಸಿಗದೇ ಇರುವುದರಿಂದ ಮತ್ತು ಹಕ್ಕು ಪತ್ರ ನೀಡದಿರುವುದರಿಂದ 15 ವರ್ಷಗಳಿಂದ ಕೆಸರಟಗಿ ಬಳಿಯಿರುವ ಸ್ಲಂ ಬೋರ್ಡ್ ಮನೆಗಳಲ್ಲಿ ಅಕ್ರಮವಾಗಿ ವಾಸ ಮಾಡುತ್ತಿದ್ದಾರೆ. ಕಾರಣ ಇಷ್ಟೇ, ಸದ್ಯ ಇರುವ 52 ಮನೆಗಳನ್ನ ಉಳ್ಳವರಿಗೆ ಮಾರಾಟ ಮಾಡಿರುವುದು. ಮನೆ ಹಕ್ಕು ಪತ್ರ ನೀಡದೇ ಅಧಿಕಾರಿಗಳು ಸತಾಯಿಸುತ್ತಿದ್ದಾರೆಂದು ನೈಜ ಫಲಾನುಭವಿಗಳು ಆಕ್ರೋಶ ಹೊರಹಾಕಿದ್ದಾರೆ.

ಕಲಬುರಗಿ ನಗರದ ಹೊರವಲಯದ ಕೆಸರಟಗಿ ಬಳಿಯಿರುವ 52 ಸ್ಲಂ ಬೋರ್ಡ್ ಮನೆಗಳನ್ನು 15-20 ವರ್ಷಗಳ ಹಿಂದೆಯೇ ಕಟ್ಟಲಾಗಿದೆ. ಸದ್ಯ ಆ ಮನೆಗಳು ಸಂಪೂರ್ಣ ಶಿಥಿಲವಸ್ಥೆಗೆ ತಲುಪಿದ್ದು, ಕುಸಿದುಬೀಳುವ ಹಂತದಲ್ಲಿವೆ. ಕೆಸರಟಗಿ ಬಳಿಯಿರುವ 52 ಮನೆಗಳ ಹಕ್ಕು ಪತ್ರ ನೀಡಬೇಕೆಂದು ಆಗ್ರಹಿಸಿ ಕಳೆದ ಅನೇಕ ವರ್ಷಗಳಿಂದ ನಿವಾಸಿಗಳು ಸ್ಲಂ ಬೋರ್ಡ್ ಕಚೇರಿ, ಜಿಲ್ಲಾಧಿಕಾರಿ ಕಚೇರಿ, ಶಾಸಕರು ಸೇರಿದಂತೆ ಸಾಕಷ್ಟು ಕಡೆ ಅಲೆದಾಡಿದ್ದಾರೆ. ಆದರೂ ಇದುವರೆಗೆ ಈ ಬಡ ಜನರಿಗೆ ಹಕ್ಕು ಪತ್ರ ಮಾತ್ರ ಸಿಕ್ಕಿಲ್ಲ.

ಇದನ್ನೂ ಓದಿ
Image
ಮೆಟ್ರೋ ದರ ಏರಿಕೆ ಪರಿಣಾಮ, ಬಿಎಂಟಿಸಿಗೆ ಹೆಚ್ಚುವರಿ 25 ಲಕ್ಷ ರೂ. ಆದಾಯ!
Image
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಖಾಲಿ ಇದೆ ಎಂದಿದ್ಯಾರು: ವಿಜಯೇಂದ್ರ ಪ್ರಶ್ನೆ
Image
ಮುಂದುವರಿದ ಮಳೆಯ ಅಬ್ಬರ: ಇಂದು ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ
Image
357 ಬ್ಯಾಂಕ್ ಖಾತೆ ಸೈಬರ್ ವಂಚಕರಿಗೆ ಮಾರಾಟ ಮಾಡಿದ್ದ ಗ್ಯಾಂಗ್ ಪತ್ತೆ

ಇದನ್ನೂ ಓದಿ: ಕಲಬುರಗಿಯಲ್ಲಿ ಅಸ್ಪಶ್ಯತೆ ಇನ್ನೂ ಜೀವಂತ? ದಲಿತರು ಎನ್ನುವ ಕಾರಣಕ್ಕೆ ಕಟಿಂಗ್ ನಿರಾಕರಣೆ

ದುಡ್ಡು ಕೊಟ್ಟರೆ ಮಾತ್ರ ವಸತಿ ಇಲಾಖೆ ಮನೆ ಕೊಡುತ್ತದೆಯೆಂಬ ಆಳಂದ ಶಾಸಕ ಬಿಆರ್ ಪಾಟೀಲ್ ಆರೋಪಕ್ಕೆ ಜಿಲ್ಲೆಯಲ್ಲಿ ಸಾಕಷ್ಟು ಉದಾಹರಣೆಗಳು ಸಿಗುತ್ತಿವೆ. ಇದು ವಸತಿ ಇಲಾಖೆಯಲ್ಲಿ ಲೆಕ್ಕವಿಲ್ಲದಷ್ಟು ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿರುವುದನ್ನು ಪುಷ್ಟೀಕರಿಸಿದೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ನೈಜ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡಿ, ಶಿಥಿಲಗೊಂಡ ಮನೆಗಳ ದುರಸ್ತಿ ಕಾರ್ಯಕ್ಕೆ ಮುಂದಾಗುತ್ತದೆಯಾ ಎಂಬುದನ್ನು ಕಾದು ನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ