ವಸತಿ ಯೋಜನೆಯಲ್ಲಿ ಮತ್ತೊಂದು ಭ್ರಷ್ಟಾಚಾರ ಆರೋಪ: ಹಣ ಪಡೆದು ಮನೆ ಇದ್ದವರಿಗೇ ಮನೆ ಹಂಚಿಕೆ!

ವಸತಿ ಯೋಜನೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಬಗ್ಗೆ ಶಾಸಕ ಬಿಆರ್ ಪಾಟೀಲ್ ಆಡಿಯೋ ವೈರಲ್‌ ಬೆನ್ನಲ್ಲೇ ಇಲಾಖೆಯ ಒಂದೊಂದೇ ಹಗರಣಗಳು ಹೊರಬರುತ್ತಿವೆ. ಕಲಬುರಗಿಯಲ್ಲಿ ಸೂರು ಇಲ್ಲದವರಿಗೆ ವಸತಿ ಯೋಜನೆಯಡಿ ನೀಡಬೇಕಿದ್ದ ಮನೆಗಳನ್ನು ಹಣ ಪಡೆದು ಮನೆ ಇರುವವರಿಗೇ ಮಾರಾಟ ಮಾಡಿರುವ ಗಂಭೀರ ಆರೋಪ ಕೇಳಿ ಬಂದಿದೆ.

ವಸತಿ ಯೋಜನೆಯಲ್ಲಿ ಮತ್ತೊಂದು ಭ್ರಷ್ಟಾಚಾರ ಆರೋಪ: ಹಣ ಪಡೆದು ಮನೆ ಇದ್ದವರಿಗೇ ಮನೆ ಹಂಚಿಕೆ!
ಕೊಳಗೇರಿ ಅಭಿವೃದ್ಧಿಮಂಡಳಿ ಕಚೇರಿ
Edited By:

Updated on: Jul 03, 2025 | 9:49 AM

ಕಲಬುರಗಿ, ಜುಲೈ 3: ಕಲಬುರಗಿ (Kalaburagi) ತಾಲೂಕಿನ ಕೆಸರಟಗಿ ಗ್ರಾಮದಲ್ಲಿ ಬಡ ಜನರಿಗೆ ಸೂರಿಲ್ಲದ ಕಾರಣ ಸ್ಲಂ (Slum Board) ಬೋರ್ಡ್‌ 52 ಮನೆಗಳನ್ನು ಮಂಜೂರು ಮಾಡಿತ್ತು. ಆದರೆ ಸ್ಲಂ ಬೋರ್ಡ್ ಅಧಿಕಾರಿಗಳು ನೈಜ ಫಲಾನುಭವಿಗಳಿಗೆ ಮನೆಗಳನ್ನು ನೀಡುವುದರ ಬದಲು ಹಣ ಪಡೆದು ಉಳ್ಳವರಿಗೆ ಮನೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಫಲಾನುಭವಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಸ್ಲಂ ಬೋರ್ಡ್ ಕಚೇರಿ ಮುಂದೆ ಬುಧವಾರ ಫಲಾನುಭವಿಗಳು ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.

ಅಂದಹಾಗೆ, ಫಲಾನುಭವಿಗಳಿಗೆ ಮನೆಗಳು ಸಿಗದೇ ಇರುವುದರಿಂದ ಮತ್ತು ಹಕ್ಕು ಪತ್ರ ನೀಡದಿರುವುದರಿಂದ 15 ವರ್ಷಗಳಿಂದ ಕೆಸರಟಗಿ ಬಳಿಯಿರುವ ಸ್ಲಂ ಬೋರ್ಡ್ ಮನೆಗಳಲ್ಲಿ ಅಕ್ರಮವಾಗಿ ವಾಸ ಮಾಡುತ್ತಿದ್ದಾರೆ. ಕಾರಣ ಇಷ್ಟೇ, ಸದ್ಯ ಇರುವ 52 ಮನೆಗಳನ್ನ ಉಳ್ಳವರಿಗೆ ಮಾರಾಟ ಮಾಡಿರುವುದು. ಮನೆ ಹಕ್ಕು ಪತ್ರ ನೀಡದೇ ಅಧಿಕಾರಿಗಳು ಸತಾಯಿಸುತ್ತಿದ್ದಾರೆಂದು ನೈಜ ಫಲಾನುಭವಿಗಳು ಆಕ್ರೋಶ ಹೊರಹಾಕಿದ್ದಾರೆ.

ಕಲಬುರಗಿ ನಗರದ ಹೊರವಲಯದ ಕೆಸರಟಗಿ ಬಳಿಯಿರುವ 52 ಸ್ಲಂ ಬೋರ್ಡ್ ಮನೆಗಳನ್ನು 15-20 ವರ್ಷಗಳ ಹಿಂದೆಯೇ ಕಟ್ಟಲಾಗಿದೆ. ಸದ್ಯ ಆ ಮನೆಗಳು ಸಂಪೂರ್ಣ ಶಿಥಿಲವಸ್ಥೆಗೆ ತಲುಪಿದ್ದು, ಕುಸಿದುಬೀಳುವ ಹಂತದಲ್ಲಿವೆ. ಕೆಸರಟಗಿ ಬಳಿಯಿರುವ 52 ಮನೆಗಳ ಹಕ್ಕು ಪತ್ರ ನೀಡಬೇಕೆಂದು ಆಗ್ರಹಿಸಿ ಕಳೆದ ಅನೇಕ ವರ್ಷಗಳಿಂದ ನಿವಾಸಿಗಳು ಸ್ಲಂ ಬೋರ್ಡ್ ಕಚೇರಿ, ಜಿಲ್ಲಾಧಿಕಾರಿ ಕಚೇರಿ, ಶಾಸಕರು ಸೇರಿದಂತೆ ಸಾಕಷ್ಟು ಕಡೆ ಅಲೆದಾಡಿದ್ದಾರೆ. ಆದರೂ ಇದುವರೆಗೆ ಈ ಬಡ ಜನರಿಗೆ ಹಕ್ಕು ಪತ್ರ ಮಾತ್ರ ಸಿಕ್ಕಿಲ್ಲ.

ಇದನ್ನೂ ಓದಿ
ಮೆಟ್ರೋ ದರ ಏರಿಕೆ ಪರಿಣಾಮ, ಬಿಎಂಟಿಸಿಗೆ ಹೆಚ್ಚುವರಿ 25 ಲಕ್ಷ ರೂ. ಆದಾಯ!
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಖಾಲಿ ಇದೆ ಎಂದಿದ್ಯಾರು: ವಿಜಯೇಂದ್ರ ಪ್ರಶ್ನೆ
ಮುಂದುವರಿದ ಮಳೆಯ ಅಬ್ಬರ: ಇಂದು ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ
357 ಬ್ಯಾಂಕ್ ಖಾತೆ ಸೈಬರ್ ವಂಚಕರಿಗೆ ಮಾರಾಟ ಮಾಡಿದ್ದ ಗ್ಯಾಂಗ್ ಪತ್ತೆ

ಇದನ್ನೂ ಓದಿ: ಕಲಬುರಗಿಯಲ್ಲಿ ಅಸ್ಪಶ್ಯತೆ ಇನ್ನೂ ಜೀವಂತ? ದಲಿತರು ಎನ್ನುವ ಕಾರಣಕ್ಕೆ ಕಟಿಂಗ್ ನಿರಾಕರಣೆ

ದುಡ್ಡು ಕೊಟ್ಟರೆ ಮಾತ್ರ ವಸತಿ ಇಲಾಖೆ ಮನೆ ಕೊಡುತ್ತದೆಯೆಂಬ ಆಳಂದ ಶಾಸಕ ಬಿಆರ್ ಪಾಟೀಲ್ ಆರೋಪಕ್ಕೆ ಜಿಲ್ಲೆಯಲ್ಲಿ ಸಾಕಷ್ಟು ಉದಾಹರಣೆಗಳು ಸಿಗುತ್ತಿವೆ. ಇದು ವಸತಿ ಇಲಾಖೆಯಲ್ಲಿ ಲೆಕ್ಕವಿಲ್ಲದಷ್ಟು ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿರುವುದನ್ನು ಪುಷ್ಟೀಕರಿಸಿದೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ನೈಜ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡಿ, ಶಿಥಿಲಗೊಂಡ ಮನೆಗಳ ದುರಸ್ತಿ ಕಾರ್ಯಕ್ಕೆ ಮುಂದಾಗುತ್ತದೆಯಾ ಎಂಬುದನ್ನು ಕಾದು ನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us