ಕಲಬುರಗಿಯ ಶ್ರೀ ಸಿಮೆಂಟ್ ಫ್ಯಾಕ್ಟರಿಯಲ್ಲಿ ಮತ್ತೋರ್ವ ಕಾರ್ಮಿಕ ಮೃತ; ಎರಡು ತಿಂಗಳಲ್ಲಿ ನಾಲ್ಕು ಸಾವು

ಸೇಡಂ(Sedam) ಪಟ್ಟಣದಲ್ಲಿರುವ ಶ್ರೀ ಸಿಮೆಂಟ್ ಫ್ಯಾಕ್ಟರಿ (Shree Cement Factory) ಯಲ್ಲಿ ಇಂದು (ಭಾನುವಾರ) ಮತ್ತೊರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಕಳೆದ ಎರಡೂ ತಿಂಗಳಲ್ಲಿ ನಾಲ್ಕು ಸಾವುಗಳಾಗಿದ್ದು, ಆ ಪೈಕಿ ಇಬ್ಬರು ಸೇಡಂನವರೇ ಆಗಿದ್ದಾರೆ. ಹೀಗಿದ್ದರೂ ಸಚಿವರು ಕಾರ್ಖಾನೆಗೂ ಭೇಟಿ ನೀಡಿಲ್ಲ.

ಕಲಬುರಗಿಯ ಶ್ರೀ ಸಿಮೆಂಟ್ ಫ್ಯಾಕ್ಟರಿಯಲ್ಲಿ ಮತ್ತೋರ್ವ ಕಾರ್ಮಿಕ ಮೃತ; ಎರಡು ತಿಂಗಳಲ್ಲಿ ನಾಲ್ಕು ಸಾವು
ಮೃತ ಕಾರ್ಮಿಕ
Edited By: ಕಿರಣ್ ಹನುಮಂತ್​ ಮಾದಾರ್

Updated on: Jul 21, 2024 | 3:15 PM

ಕಲಬುರಗಿ, ಜು.21: ಕಲಬುರಗಿ ಜಿಲ್ಲೆಯ ಸೇಡಂ(Sedam) ಪಟ್ಟಣದಲ್ಲಿರುವ ಶ್ರೀ ಸಿಮೆಂಟ್ ಫ್ಯಾಕ್ಟರಿ (Shree Cement Factory) ಯಲ್ಲಿ ಇಂದು (ಭಾನುವಾರ) ಮತ್ತೊರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಸರಿಯಾದ ಸುರಕ್ಷತಾ ಕ್ರಮ ಕೈಗೊಳ್ಳದ ಪರಿಣಾಮ ಜಾರ್ಖಂಡ್ ಮೂಲದ ಯುವಕ ರಾಜಕುಮಾರ(26) ಬಲಿಯಾಗಿದ್ದಾನೆ. ಇನ್ನು ಇದೇ ಫ್ಯಾಕ್ಟರಿಯಲ್ಲಿ ಕೆಲ‌ ದಿನಗಳ ಹಿಂದಷ್ಟೆ ಬೆನಕನಹಳ್ಳಿ ನಿವಾಸಿ ಇಂದ್ರಕುಮಾರ ಮೃತಪಟ್ಟಿದ್ದ. ಈಗ ಮತ್ತೋರ್ವನ ಬಲಿಯಾಗಿದ್ದಾನೆ.

ಎರಡೂ ತಿಂಗಳಲ್ಲಿ ನಾಲ್ಕು ಸಾವು; ಇಣುಕಿಯೂ ನೋಡದ ಜನ ಪ್ರತಿನಿಧಿಗಳು

ಈ ಸಿಮೆಂಟ್​ ಫ್ಯಾಕ್ಟರಿಯಲ್ಲಿ ಸರಣಿ ಸಾವುಗಳಾಗುತ್ತಿದ್ದರೂ ಜನ ಪ್ರತಿನಿಧಿಗಳು ಇಣುಕಿಯೂ ನೋಡಿಲ್ಲ. ಕಳೆದ ಎರಡೂ ತಿಂಗಳಲ್ಲಿ ನಾಲ್ಕು ಸಾವುಗಳಾಗಿದ್ದು, ಆ ಪೈಕಿ ಇಬ್ಬರು ಸೇಡಂನವರೇ ಆಗಿದ್ದಾರೆ. ಹೀಗಿದ್ದರೂ ಸಚಿವರು ಕಾರ್ಖಾನೆಗೂ ಭೇಟಿ ನೀಡಿಲ್ಲ. ಇತ್ತ ಅಧಿಕಾರಿಗಳು ಕೂಡ ಪ್ರಕರಣ ಕುರಿತು ಬೇಜವಾಬ್ದಾರಿ ಮತ್ತು ಸುರಕ್ಷತಾ ಕ್ರಮ ಕೈಗೊಂಡಿಲ್ಲ. ಈ ಕುರಿತು ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ:ಮಳೆಗೆ ಮನೆಗೋಡೆ ಕುಸಿದು ಬಾಣಂತಿ ಸಾವು, ಬದುಕುಳಿದ ಮಗು ತಾಯಿ ಇಲ್ಲದೇ ತಬ್ಬಲಿ ಆಯ್ತು

ಟೈರ್ ಬ್ಲಾಸ್ಟ್ ಆಗಿ ಬೈಕ್ ಸವಾರ ಸಾವು

ಹುಬ್ಬಳ್ಳಿ: ಚಲಿಸುತ್ತಿದ್ದ ಬೈಕ್​ನ ಟೈರ್ ಬ್ಲಾಸ್ಟ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲಿ ಕೊನೆಯುಸಿರೆಳೆದಿರುವ ಘಟನೆ ಗದಗ- ಹುಬ್ಬಳ್ಳಿಯ ಬಂಡಿವಾಡ ಬ್ರಿಡ್ಜ್ ಬಳಿ ನಡೆದಿದೆ. ಕೋಳಿವಾಡ ಗ್ರಾಮದ 30 ವರ್ಷದ ಪ್ರವೀಣ್ ಜಂತ್ಲಿ ಮೃತ ವ್ಯಕ್ತಿ. ಇತ ಹುಬ್ಬಳ್ಳಿಯ ರಾಜ ನಗರದ ಎಟಿಎಮ್​​ನಲ್ಲಿ ಕೆಲಸ ಮಾಡುತ್ತಿದ್ದ. ನಿನ್ನೆ(ಜು.21) ಮನೆಯಿಂದ ಕೆಲಸಕ್ಕೆ ಹೊಗುವಾಗ ಬೈಕ್ ಟೈರ್ ಬ್ಲಾಸ್ಟ್ ಆಗಿ ದುರ್ಘಟನೆ ನಡೆದಿದೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:09 pm, Sun, 21 July 24

Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us