AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಟ್ರಾಸಿಟಿ ಕೇಸ್​ ಬೆನ್ನಲ್ಲೇ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಡಿಸಿದ ಬಿಜೆಪಿ MLC ರವಿಕುಮಾರ್

ಕಲಬುರಗಿಯಲ್ಲಿ ಬಿಜೆಪಿ ಆಯೋಜಿಸಿದ್ದ “ಕಲಬುರಗಿ ಚಲೋ” ಪ್ರತಿಭಟನೆಯಲ್ಲಿ ಎಂಎಲ್‌ಸಿ ಎನ್‌. ರವಿಕುಮಾರ್‌ ಮಾತಿನ ಭರದಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ಅವರನ್ನು “ಪಾಕಿಸ್ತಾನಿ” ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.ಇನ್ನು ಇದು ಭಾರೀ ವಿವಾದಕ್ಕೆ ಕಾರಣವಾಗಿದ್ದು, ವಿಧಾನಪರಿಷತ್​ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್ ಹೇಳಿಕೆಗೆ ಕರ್ನಾಟಕ ಐಎಎಸ್ ಅಧಿಕಾರಿಗಳ ಸಂಘ ಖಂಡಿಸಿದೆ. ಅಲ್ಲದೇ ರವಿ ಕುಮಾರ್ ವಿರುದ್ಧ ದೂರು ದಾಖಲಾಗಿದೆ.

ಅಟ್ರಾಸಿಟಿ ಕೇಸ್​ ಬೆನ್ನಲ್ಲೇ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಡಿಸಿದ ಬಿಜೆಪಿ MLC ರವಿಕುಮಾರ್
N Ravikumar
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ರಮೇಶ್ ಬಿ. ಜವಳಗೇರಾ|

Updated on:May 26, 2025 | 7:32 PM

Share

ಕಲಬುರಗಿ, (ಮೇ 26): “ಕಲಬುರಗಿ ಜಿಲ್ಲಾಧಿಕಾರಿ ಪಾಕಿಸ್ತಾನದಿಂದ (Pakistan) ಬಂದಿರುವಂತೆ ಕಾಣಿಸುತ್ತಿದೆ” ಎಂದು ಬಿಜೆಪಿ ‌ನಾಯಕ ಎನ್.ರವಿಕುಮಾರ್ (BJP MLC N Ravikumar) ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದೀಗ ಈ ಹೇಳಿಕೆಯನ್ನು ಕರ್ನಾಟಕ ಐಎಎಸ್ ಅಧಿಕಾರಿಗಳ ಸಂಘ ಖಂಡಿಸಿದೆ. ಮೇ 24 ರಂದು ಬಿಜೆಪಿಯ ”ಕಲಬುರಗಿ ಚಲೋ” (BJP Kalaburagi Chalo) ಪ್ರತಿಭಟನೆ ವೇಳೆ ಆಯೋಜಿಸಲಾದ ಪ್ರತಿಭಟನಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರವಿಕುಮಾರ್, ಜಿಲ್ಲಾಡಳಿತವು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಪ್ರಭಾವದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದ್ದರು.ಈ ವೇಳೆ “ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದಿದ್ದಾರೆಯೆ” ಎಂದು ಹೇಳಿದ್ದರು. ಈ ಸಂಬಂಧ ರವಿಕುಮಾರ್ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಾಗಿದೆ. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ರವಿಕುಮಾರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ತಮ್ಮ ಅಜಾಗರೂಕ ಟೀಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ರವಿಕುಮಾರ್ ಹೇಳಿಕೆ ಖಂಡಿಸಿದ ರಾಜ್ಯ IAS ಸಂಘ

ಬಿಜೆಪಿ MLC ರವಿಕುಮಾರ್ ಮೇ 24ರಂದು ಪ್ರಿಯಾಂಕ್ ಖರ್ಗೆ ವಿರುದ್ಧದ ಪ್ರತಿಭಟನೆ ವೇಳೆ ಕಲಬುರಗಿ ಡಿಸಿ ಫೌಜಿಯಾ ತರನ್ನುಮ್ ಪಾಕಿಸ್ತಾನದಿಂದ ಬಂದಿದ್ದಾರೆಯೇ ಎಂದಿದ್ದರು. ಇದಕ್ಕೆ ಇದೀಗ ಕರ್ನಾಟಕ ಐಎಎಸ್ ಅಧಿಕಾರಿಗಳ ಸಂಘ ಖಂಡಿಸಿದೆ. ಮಾಧ್ಯಮ ಪ್ರಕಟಣೆ ಬಿಡುಗಡೆ ಮೂಲಕ ರವಿಕುಮಾರ್ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಪ್ರಿಯಾಂಕ್​ ಖರ್ಗೆ ವಿರುದ್ಧ ಬಿಜೆಪಿ ಕಲಬುರಗಿ ದಂಡಯಾತ್ರೆ: ಕೇಸರಿ ಪಡೆ ಏಟಿಗೆ ಸಚಿವ ತಿರುಗೇಟು

ರವಿಕುಮಾರ್ ವಿರುದ್ಧ ಅಟ್ರಾಸಿಟಿ ಕೇಸ್

ಮೇ 24ರಂದು ಬಿಜೆಪಿ ಪ್ರತಿಭಟನಾಯಲ್ಲಿ ಬಿಜೆಪಿ ಎಂಎಲ್​ಸಿ ಎನ್​ ರವಿಕುಮಾರ್ ಅವರು ಅಬ್ಬರದ ಭಾಷಣ ಮಾಡಿದ್ದರು. ಈ ಸಂಬಂಧ ಖಾಸಗಿ ವ್ಯಕ್ತಿ ನೀಡಿದ ದೂರಿನ ಅನ್ವಯ ನ್.ರವಿಕುಮಾರ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಸರ್ಕಾರಿ ಅಧಿಕಾರಿಗಳ ನಿಂದನೆ, ಎಸ್​ಸಿ ಸಮುದಾಯ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕಲಬುರಗಿ ಡಿಸಿ ಫೌಜಿಯಾ ತರನ್ನುಮ್ ಪಾಕಿಸ್ತಾನದಿಂದ ಬಂದಿರಬೇಕೆಂದಿದ್ದರು. ಅಲ್ಲದೇ ಎಎಸ್​ಪಿ ಮಹೇಶ್ ಮೇಘಣ್ಣವರ್, ಡಿವೈಎಸ್​ಪಿ ಶಂಕರಗೌಡ ಪಾಟೀಲ್, ಸಿಪಿಐ ಚಂದ್ರಶೇಖರ್​ ಅವರಿಗೆ ನಿಂದನೆ ಮಾಡಿದ್ದಾರೆಂದು ದೂರು ನೀಡಿದ್ದರು. ಈ ದೂರಿನ ಅನ್ವಯ ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ
Image
ಪ್ರಿಯಾಂಕ್​ ವಿರುದ್ಧ BJP ಕಲಬುರಗಿ ದಂಡಯಾತ್ರೆ: ಸಚಿವ ತಿರುಗೇಟು
Image
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
Image
ಸಚಿವ ಸ್ಥಾನದಿಂದ ಪ್ರಿಯಾಂಕ್ ಖರ್ಗೆ ವಜಾಕ್ಕೆ ಬಿಜೆಪಿ ಮನವಿ
Image
ಪ್ರಿಯಾಂಕ್ ವಿರುದ್ಧ ಛಲವಾದಿ ಅವಹೇಳನಾಕಾರಿ ಮಾತು: ವಿವಾದದ ಬೆನ್ನಲ್ಲೇ ವಿಷಾದ

ವಿಷಾದ ವ್ಯಕ್ತಪಡಿಸಿದ ರವಿಕುಮಾರ್

ಕರ್ನಾಟಕ ಐಎಎಸ್ ಸಂಘ ಖಂಡನೆ, ಅಟ್ರಾಸಿಟಿ ಕೇಸ್ ದಾಖಲಾದ ಬೆನ್ನಲ್ಲೇ ರವಿ ಕುಮಾರ್ ಅವರು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ರವಿಕುಮಾರ್, ನನ್ನ ಅಜಾಗರೂಕ ಟೀಕೆಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ನಾನು ಆ ಹೇಳಿಕೆಯನ್ನು ಕೂಡಲೇ ಹಿಂದಕ್ಕೆ ಪಡೆದಿದ್ದೇನೆ.ಜಿಲ್ಲಾಧಿಕಾರಿ ಅತ್ಯಂತ ಗೌರವಪಾತ್ರರು. ಅದು ನಾನು ಉದ್ದೇಶಪೂರ್ವಕವಾಗಿ ನೀಡಿದ ಹೇಳಿಕೆ ಅಲ್ಲ. ಅದು ಬಾಯಿ ತಪ್ಪಿನಿಂದ ಬಂದ ಹೇಳಿಕೆ. ಅಂದು ನಾನು ಆಡಿದ ಹೇಳಿಕೆಗೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:32 pm, Mon, 26 May 25

‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು