AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: 44 ಸಲ ಸಂಚಾರಿ ನಿಯಮ ಉಲ್ಲಂಘನೆ; 23,500 ರೂ ದಂಡ ತೆತ್ತ ಆಟೋ ಚಾಲಕ

ಕಲಬುರಗಿಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ಆಟೋ ಚಾಲಕನಿಗೆ ಕಲಬುರಗಿ ಸಂಚಾರ ಠಾಣೆ-2 ಪೊಲೀಸರು ಸಾವಿರಾರು ರೂ ದಂಡ ವಿಧಿಸಿದ್ದಾರೆ. ಅಷ್ಟೇ ಅಲ್ಲದೆ ಆಟೋ ಕೂಡ ಜಪ್ತಿ ಮಾಡಿದ್ದಾರೆ. ಸಿಗ್ನಲ್ ಜಂಪ್, ನೋ ಪಾರ್ಕಿಂಗ್, ಮೊಬೈಲ್ ಬಳಕೆ ಸೇರಿದಂತೆ ಹಲವು ನಿಯಮಗಳನ್ನು ಉಲ್ಲಂಘಿಸಿದ್ದ.

ಕಲಬುರಗಿ: 44 ಸಲ ಸಂಚಾರಿ ನಿಯಮ ಉಲ್ಲಂಘನೆ; 23,500 ರೂ ದಂಡ ತೆತ್ತ ಆಟೋ ಚಾಲಕ
ಆಟೋ ಚಾಲಕನಿಗೆ ದಂಡImage Credit source: tv9 kannada
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:May 08, 2026 | 3:51 PM

Share

ಕಲಬುರಗಿ, ಮೇ 08: ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ಆಟೋ ಚಾಲಕನಿಗೆ (Auto driver) ಸಂಚಾರಿ ಪೋಲಿಸರು ಬರೋಬ್ಬರಿ 23,500 ರೂ. ದಂಡ (fine) ವಿಧಿಸಿರುವಂತಹ ಘಟನೆ ನಡೆದಿದೆ. ಶಹಬಾದ್ ಪಟ್ಟಣದ ನಿವಾಸಿ ಆಗಿರುವ ಆಟೋ ಚಾಲಕ, ಸಿಗ್ನಲ್ ಜಂಪ್, ನೋ ಪಾರ್ಕಿಂಗ್ ಮತ್ತು ಮೊಬೈಲ್ ಬಳಕೆ ಸೇರಿದಂತೆ 44 ಸಲ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ ಸಾವಿರಾರು ರೂ. ದಂಡ ವಿಧಿಸಿರುವ ಕಲಬುರಗಿ ಸಂಚಾರಿ ಠಾಣೆ-2 ಪೊಲೀಸರು, ಸದ್ಯ ಆಟೋ ಕೂಡ ಜಪ್ತಿ ಮಾಡಿಕೊಂಡಿದ್ದಾರೆ.

ಮುಖ್ಯಾಂಶಗಳು

  • 44 ಸಲ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದ ಆಟೋ ಚಾಲಕ
  • ಕಲಬುರಗಿ ಸಂಚಾರಿ ಠಾಣೆ-2 ಪೊಲೀಸರಿಂದ ಚಾಲಕನಿಗೆ 23,500 ರೂ. ದಂಡ
  • ದಂಡ ವಿಧಿಸಿ ಆಟೋ ಜಪ್ತಿ ಮಾಡಿರುವ ಸಂಚಾರಿ ಪೋಲಿಸರು

ರೀಲ್ಸ್ ಮಾಡುವ ಭರದಲ್ಲಿ  ಸಂಚಾರ ನಿಯಮ ಗಾಳಿಗೆ ತೂರಿದ ರೀಲ್ಸ್ ರಾಜಗೆ ಬಿತ್ತು ದಂಡ

ಇನ್ನು ಇತ್ತೀಚೆಗೆ ದೊಡ್ಡಬಳ್ಳಾಪುರದಲ್ಲಿ ಟ್ರಾಫಿಕ್ ರೂಲ್ಸ್ ಗಾಳಿಗೆ ತೂರಿ ರೀಲ್ಸ್ ಮಾಡಿದ್ದ ‘ರೀಲ್ಸ್ ರಾಜ’ನಿಗೆ ದಂಡ ವಿಧಿಸುವ ಮೂಲಕ ಪೊಲೀಸರು ಸರಿಯಾಗಿ ಬಿಸಿ ಮುಟ್ಟಿಸಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರಕ್ಕೆ ಬಂದಿದ್ದ ರೀಲ್ಸ್ ರಾಣಿಯರಾದ ಗಂಗಾರಂಗ ಹಾಗೂ ಸವಿತಾರನ್ನ ದೊಡ್ಡಬಳ್ಳಾಪುರ ಮಂಜ ಬರಮಾಡಿಕೊಂಡಿದ್ದ.

ಇದನ್ನೂ ಓದಿ: ತಪ್ಪು ಮಾಡಿದ್ರೆ ದಂಡ ಹಾಕಿ, ಕೈ ಮಾಡುವ ಹಕ್ಕಿಲ್ಲ: ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ ಟ್ರಾಫಿಕ್ ಪೊಲೀಸರ ದೌರ್ಜನ್ಯ

ಬಸ್ ನಿಲ್ದಾಣದಿಂದ ಪಿಕಪ್ ಮಾಡಿಕೊಂಡು ತ್ರಿಬಲ್ ರೈಡ್​​ನಲ್ಲಿ ಮನೆ ಕಡೆಗೆ ಹೊರಟ್ಟಿದ್ದರು. ಜೊತೆಗೆ ಹೆಲ್ಮೆಟ್ ಹಾಕಿಕೊಳ್ಳದೆ, ಹಿಂಬದಿ ಕುಳಿತಿದ್ದ ಸವಿತಾ, ಬೈಕ್ ಓಡುಸುತ್ತಿದ್ದ ಮಂಜನನ್ನ ತೋರಿಸುತ್ತಾ ಹುಲಿ ಹುಲಿ ದೊಡ್ಡಬಳ್ಳಾಪುರದ ಹುಲಿ ಅಂತ ರೀಲ್ಸ್​ ಮಾಡಿದ್ದರು. ಇದು ವೈರಲ್​ ಕೂಡ ಆಗಿತ್ತು. ಇನ್ನು ರೀಲ್ಸ್​ ನೋಡಿದ ನೆಟ್ಟಿಗರು ಹೆಲ್ಮೆಟ್ ಹಾಕದೆ ತ್ರಿಬಲ್ ರೈಡ್ ಮಾಡಿರುವ ಬಗ್ಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದರು. ದೂರು ಬೆನ್ನಲ್ಲೇ ಮಂಜನನ್ನ ಬೈಕ್ ಸಮೇತ ಠಾಣೆಗೆ ಕರೆದುಕೊಂಡು ಬಂದು ಬುದ್ಧವಾದ ಹೇಳಿ ಕಾನೂನು ಪಾಠ ಮಾಡಿದ್ದಾರೆ. ಜೊತೆಗೆ ಸಂಚಾರಿ ನಿಯಮ ಉಲ್ಲಂಘನೆ ಮಾಡಿದಕ್ಕೆ ಒಂದು ಸಾವಿರ ರೂ ದಂಡ ವಿಧಿಸಿ ಮತ್ತೊಮ್ಮೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:50 pm, Fri, 8 May 26

Follow Us
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ