ಕರ್ನಾಟಕಕ್ಕೆ ಮತ್ತೊಂದು ಹೆಮ್ಮೆ: ರಾಮಲಲ್ಲಾ ಮೂರ್ತಿ ಮೈಸೂರಿನದ್ದು, ಆಹ್ವಾನ ಪತ್ರಿಕೆ ಮೇಲಿನ ಲೋಗೋ ಕಲಬುರಗಿಯದ್ದು!

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿದೆ. ಈಗಾಗಲೆ ರಾಮಲ್ಲಾ (ಬಾಲ ರಾಮ)ನ ಮೂರ್ತಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ. ಈ ರಾಮಲಲ್ಲಾನ ಮೂರ್ತಿಯನ್ನು ಮೈಸೂರಿನ ಅರುಣ ಯೋಗಿರಾಜ್​ ಅವರು ಕೆತ್ತಿದ್ದಾರೆ. ಇನ್ನು ಕಾರ್ಯಕ್ರಮದ ಆಹ್ವಾನ ಪತ್ರಿಕೆ ಮೇಲಿನ ಲೋಗೋವನ್ನು ಕಲಬುರಗಿಯ ಕಲಾವಿದ ಡಿಸೈನ್​​ ಮಾಡಿದ್ದಾರೆ.

ಕರ್ನಾಟಕಕ್ಕೆ ಮತ್ತೊಂದು ಹೆಮ್ಮೆ: ರಾಮಲಲ್ಲಾ ಮೂರ್ತಿ ಮೈಸೂರಿನದ್ದು, ಆಹ್ವಾನ ಪತ್ರಿಕೆ ಮೇಲಿನ ಲೋಗೋ ಕಲಬುರಗಿಯದ್ದು!
ಆಹ್ವಾನ ಪತ್ರಿಕೆ ಮೇಲಿನ ಲೋಗೋ
Follow us
| Updated By: ವಿವೇಕ ಬಿರಾದಾರ

Updated on:Jan 19, 2024 | 9:24 AM

ಕಲಬುರಗಿ, ಜನವರಿ 19: ಅಯೋಧ್ಯೆಯಲ್ಲಿ (Ayodhya) ಭವ್ಯ ರಾಮಮಂದಿರ (Ram Mandir) ನಿರ್ಮಾಣವಾಗಿದೆ. ಈಗಾಗಲೆ ರಾಮಲ್ಲಾ (ಬಾಲ ರಾಮ)ನ ಮೂರ್ತಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ. ಜನವರಿ 22 ರಂದು ಪ್ರಾಣ ಪ್ರತಿಷ್ಠೆ ನೆರವೇರಲಿದೆ. ಜಗತ್ತೇ ಬಾಲ ರಾಮನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮವನ್ನು ವೀಕ್ಷಿಸಲು ತುದಿಗಾಲಿನ ಮೇಲೆ ನಿಂತಿದೆ. ಇನ್ನು ಈ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಗಣ್ಯಾತಿ ಗಣ್ಯರನ್ನು ಆಹ್ವಾನಿಸಲಾಗಿದೆ. ಈ ಆಹ್ವಾನ ಪತ್ರಿಕೆ ಮೇಲಿರುವ ಶ್ರೀರಾಮನ ಲೋಗೋ ಕಲಬುರಗಿಯಲ್ಲಿ (Kalaburagi) ತಯಾರಾಗಿದೆ.

ಆಹ್ವಾನ ಪತ್ರಿಕೆಯ ಮೇಲೆ ಪ್ರಕಾಶಿಸುವ ಸೂರ್ಯನ ಮಧ್ಯೆ ಕಂಗೊಳಿಸುವ ಶ್ರೀರಾಮನ ಭಾವಚಿತ್ರವಿದೆ. ಕೆಳಭಾಗದಲ್ಲಿ ಕುಳಿತಿರುವ ಹನುಮಂತನ ಚಿತ್ರವಿದೆ. ಈ ರೀತಿಯಾದ ಲೋಗೋವನ್ನು ಕಲಬುರಗಿಯ ಕಲಾವಿದ ರಮೇಶ್ ತಿಪ್ಪನೂರ್ ಅವರು ಡಿಸೈನ್​ ಮಾಡಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಲೋಗೋ ತಯಾರಿಸಲು ಕರೆ ಕೊಟ್ಟಿತ್ತು. ​ದೇಶದ ವಿವಿಧ ಕಲಾವಿದರು ಲೋಗೋ ತಾಯಾರಿಸಿ ಟ್ರಸ್ಟ್​​ಗೆ ಕಳುಹುಸಿದ್ದರು.

ಇದನ್ನೂ ಓದಿ: ಶ್ರೀರಾಮ ಮಂದಿರದ ಚಿತ್ರ ಬಿಡಿಸಿ ಗಮನ ಸೆಳೆದ ಪಿಎಸ್ಐ

ಇನ್ನು ಕಲಾವಿದ ರಮೇಶ್ ತಿಪ್ಪನೂರ್ ಅವರು ತಾವು ತಯಾರಿಸಿದ ಲೋಗೋವನ್ನು ವಿಹೆಚ್​ಪಿ ಮುಖಂಡ ಗೋಪಾಲ್ ಜಿ ಅವರ ಮೂಲಕ ಟ್ರಸ್ಟ್​​ಗೆ ಕಳುಹಿಸಿದ್ದಾರೆ. ಟ್ರಸ್ಟ್​​ ದೇಶದ ವಿವಿಧಡೆಯಿಂದ ಬಂದ ಲೋಗೋ ಪರಿಶೀಲಿಸಿ, ಕೊನೆಗೆ ಕಲಬುರಗಿಯಲ್ಲಿ ತಯಾರಾದ ಲೋಗೋವನ್ನು ಅಂತಿಮಗೊಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:17 am, Fri, 19 January 24

ರಾಹುಲ್ ಗಾಂಧಿ ಕಾರಿನ ಪಕ್ಕ ಬೈಕ್​ನಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ
ರಾಹುಲ್ ಗಾಂಧಿ ಕಾರಿನ ಪಕ್ಕ ಬೈಕ್​ನಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ
ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸ್​ ಮಾಡಿದ್ದೇನು?
ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸ್​ ಮಾಡಿದ್ದೇನು?
ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ
ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ
‘ದೇವರು ಬಂದ್ರು, ಹುಲಿ ಬಂತು’: ದರ್ಶನ್ ಕಂಡು ಜೈಕಾರ ಹಾಕಿದ ಫ್ಯಾನ್ಸ್
‘ದೇವರು ಬಂದ್ರು, ಹುಲಿ ಬಂತು’: ದರ್ಶನ್ ಕಂಡು ಜೈಕಾರ ಹಾಕಿದ ಫ್ಯಾನ್ಸ್
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆ ಬಂಧನ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು​
ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆ ಬಂಧನ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು​
ಡಿಸಿಎಂ ಡಿ.ಕೆ ಶಿವಕುಮಾರ್ ಸುದ್ದಿಗೋಷ್ಠಿ ಲೈವ್ ​
ಡಿಸಿಎಂ ಡಿ.ಕೆ ಶಿವಕುಮಾರ್ ಸುದ್ದಿಗೋಷ್ಠಿ ಲೈವ್ ​
ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಸಿರಾಜ್
ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಸಿರಾಜ್
ಪರಮೇಶ್ವರ್ ಭೇಟಿಯ ರಹಸ್ಯ ಬಿಚ್ಚಿಟ್ಟ ಡಿಕೆ ಶಿವಕುಮಾರ್: ಏನದು?
ಪರಮೇಶ್ವರ್ ಭೇಟಿಯ ರಹಸ್ಯ ಬಿಚ್ಚಿಟ್ಟ ಡಿಕೆ ಶಿವಕುಮಾರ್: ಏನದು?
KSRTC ಬಸ್​ ಅಪಘಾತ, ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಬೈಕ್​ ಸವಾರ
KSRTC ಬಸ್​ ಅಪಘಾತ, ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಬೈಕ್​ ಸವಾರ