AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ರಸ್ತೆ ಮೇಲೆ ಪಾಕ್​ ಧ್ವಜ ಅಂಟಿಸಿ ಪ್ರತಿಭಟನೆ, 6 ಜನ ವಶಕ್ಕೆ

Pahalgam Terrorist Attack: ಕಲಬುರಗಿಯ ರಸ್ತೆಗಳ ಮೇಲೆ ಪಾಕಿಸ್ತಾನ ಧ್ವಜದ ಸ್ಟೀಕರ್ ಅಂಟಿಸಿದ್ದು, ಜನ ಸಾಮಾನ್ಯರಲ್ಲಿ ಅಚ್ಚರಿ ಮೂಡಿಸಿದ್ದು, ಪೊಲೀಸರ ನಿದ್ದೆಗೆಡಿಸಿತ್ತು. ಪಾಕಿಸ್ತಾನದ ಮೇಲಿನ ದ್ವೇಷಕ್ಕೆ ರಸ್ತೆಗಳ ಮೇಲೆ ಧ್ವಜದ ಸ್ಟೀಕರ್ ಅಂಟಿಸಿರುವದಾಗಿ ಬಜರಂಗದಳದ ಕಾರ್ಯಕರ್ತರು ಒಪ್ಪಿಕೊಂಡ ಬಳಿಕ ಪ್ರಕರಣ ಸುಖಾಂತ್ಯ ಕಂಡಿದೆ. ಆದರೆ ಅನುಮತಿ ಪಡೆಯದೆ ಪಾಕಿಸ್ತಾನದ ಧ್ವಜದ ಸ್ಟೀಕರ್ ಅಂಟಿಸಿ ಜನರ ಗೊಂದಲಕ್ಕೆ ಕಾರಣವಾದ ಹಿನ್ನೆಲೆಯಲ್ಲಿ 6 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಲಬುರಗಿ: ರಸ್ತೆ ಮೇಲೆ ಪಾಕ್​ ಧ್ವಜ ಅಂಟಿಸಿ ಪ್ರತಿಭಟನೆ, 6 ಜನ ವಶಕ್ಕೆ
ರಸ್ತೆ ಮೇಲೆ ಪಾಕ್​ ಧ್ವಜ ಅಂಟಿಸಿ ಪ್ರತಿಭಟನೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Apr 26, 2025 | 3:17 PM

Share

ಕಲಬುರಗಿ, ಏಪ್ರಿಲ್​ 26: ಜಮ್ಮು-ಕಾಶ್ಮೀರದ (Jammu-Kashmir) ಪಹಲ್ಗಾಮ್​ನಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ಗುಂಡಿನ ದಾಳಿಗೆ (Pahalgam Terrorist Attack) ಸಂಬಂಧಿಸಿದಂತೆ ಪಾಕಿಸ್ತಾನ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಇಂತಹ ಸಮಯದಲ್ಲಿ ಕಲಬುರಗಿಯ ಜಗತ್ ವೃತ ಹಾಗೂ ನ್ಯಾಷನಲ್ ಚೌಕ್​ನ ರಸ್ತೆಗಳ ಮೇಲೆ ಪಾಕಿಸ್ತಾನ ಧ್ವಜದ ಸ್ಟೀಕರ್​ಗಳನ್ನು ಸಾಲಾಗಿ ಅಂಟಿಸಲಾಗಿತ್ತು. ಇದು ಸಹಜವಾಗಿಯೇ ಜನಸಮಾನ್ಯರ ಅಚ್ಚರಿಗೆ ಕಾರಣವಾಗಿತ್ತು. ಇನ್ನು, ಈ ರೀತಿ ರಸ್ತೆಗಳ ಮೇಲೆ ಪಾಕಿಸ್ತಾನ ಧ್ವಜದ ಸ್ಟೀಕರ್ ಕಂಡು ಪೊಲೀಸರು ಸಹ ಅಲರ್ಟ್​ ಆಗಿ ಪಾಕಿಸ್ತಾನ ಧ್ವಜದ ಸ್ಟೀಕರ್ ಅಂಟಿಸಿದವರು ಯಾರು? ಎಂಬುದನ್ನು ಪತ್ತೆ ಮಾಡಲು ಮುಂದಾದರು. ಈ ಸಮಯದಲ್ಲಿ ಬಜರಂಗದಳದ ಕೆಲ ಕಾರ್ಯಕರ್ತರು ಸ್ಥಳಕ್ಕೆ ಬಂದು ಪಾಕಿಸ್ತಾನದ ಮೇಲಿನ ದ್ವೇಷಕ್ಕಾಗಿ ರಸ್ತೆಗಳ ಮೇಲೆ ಸ್ಟೀಕರ್ ಅಂಟಿಸಿರುವುದಾಗಿ ಪೊಲೀಸರ ಮುಂದೆ ಹೇಳಿದರು. ಇದಾದ ಬಳಿಕ ಪೊಲೀಸರು‌ ಕೊಂಚ‌ ನಿರಾಳರಾಗಿ ನಿಟ್ಟುಸಿರು ಬಿಟ್ಟರು.

ಕಲಬುರಗಿ ನಗರದ ನ್ಯಾಷನಲ್ ಚೌಕ್ ರಸ್ತೆಗಳ ಮೇಲೆ ಪಾಕಿಸ್ತಾನ ಸ್ಟಿಕರ್ ಅಂಟಿಸಿರುವುದು ಕೆಲ‌ ಕಾಲ ಗೊಂದಲಕ್ಕೆ ಕಾರಣವಾಗಿತ್ತು. ಬಳಿಕ ಸ್ಥಳೀಯ ಕೆಲ ಮುಸ್ಲಿಂ ಮಹಿಳೆಯರು ರಸ್ತೆಗಳ ಮೇಲಿನ ಪಾಕಿಸ್ತಾನ ಧ್ವಜದ ಸ್ಟೀಕರ್​ಗಳನ್ನು ತೆರವು ಮಾಡಿ, “ಇಲ್ಲಿ ಯಾರು ಪಾಕಿಸ್ತಾನ ಪ್ರೇಮಿಗಳಿಲ್ಲ, ನಮ್ಮ ದೇಶದಲ್ಲಿನ ಕೋಮುಸೌಹಾರ್ದ ಹಾಳು ಮಾಡಲು ಪಾಕಿಸ್ತಾನ ಧ್ವಜದ ಸ್ಟೀಕರ್ ಅಂಟಿಸಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಘಟನೆಯ ಬಳಿಕ ಕಲಬುರಗಿ ನಗರ ಪೊಲೀಸ್ ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅನುಮತಿ ಪಡೆಯದೆ ರಸ್ತೆಗಳ ಮೇಲೆ ಪಾಕಿಸ್ತಾನ ಧ್ವಜದ ಸ್ಟೀಕರ್ ಅಂಟಿಸಿದಕ್ಕಾಗಿ ಆರು ಮಂದಿಯನ್ನು ವಶಕ್ಕೆ ಪಡೆದಿದ್ದೇವೆ. ಇನ್ಮುಂದೆ ಯಾವುದೆ ರೀತಿಯಾದ ಹೋರಾಟ ಮಾಡುವ ಮುನ್ನ ಪೊಲೀಸರಿಗೆ ಮಾಹಿತಿ ನೀಡಿ ಪ್ರತಿಭಟನೆ ಮಾಡುವಂತೆ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಮನವಿ ಮಾಡಿದ್ದಾರೆ.

ಇದನ್ನೂ ಓದಿ
Image
ಪಹಲ್ಗಾಮ್ ದಾಳಿಕೋರ ಆಸಿಫ್ ಶೇಖ್ ಮನೆಯಲ್ಲಿ ಸ್ಫೋಟ, ಬೆಂಕಿ, ನೆಲಸಮ
Image
ಮಂಗಳೂರು: ಪಹಲ್ಗಾಮ್​ ಉಗ್ರರ ದಾಳಿ ಸಮರ್ಥಿಸಿಕೊಂಡು ಫೇಸ್​ಬುಕ್​ನಲ್ಲಿ ಪೋಸ್
Image
ಪೀರ್ ಪಂಜಾಲ್ ಪರ್ವತದಲ್ಲಿ ಅಡಗಿ ಕುಳಿತಿದ್ದಾರಂತೆ ಪಹಲ್ಗಾಮ್ ದಾಳಿಕೋರರು
Image
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಎನ್​ಕೌಂಟರ್

ಇದನ್ನೂ ಓದಿ: ಭಾರತ, ಸೌತ್ ಕೊರಿಯಾಗಿಂತಲೂ ಶ್ರೀಮಂತವಾಗಿದ್ದ ಪಾಕಿಸ್ತಾನ ಎಡವಿದ್ದು ಎಲ್ಲಿ? ಇಲ್ಲಿವೆ ರೋಚಕ ಅಂಶಗಳು

ಪಾಕಿಸ್ತಾನ ಧ್ವಜಕ್ಕೆ ಮುಸ್ಲಿಂ ಮಹಿಳೆಯರು ಗೌರವ ನೀಡಿದ ವಿಚಾರವಾಗಿ ವಿಪಕ್ಷ ನಾಯಕ ಆರ್​ ಅಶೋಕ್​ ಮಾತನಾಡಿ, ರಸ್ತೆಯಲ್ಲಿ ಪಾಕಿಸ್ತಾನ ಧ್ವಜ ಕಂಡು ಮಹಿಳೆಯರು ಗೌರವ ನೀಡಿದ್ದಾರೆ. ದೇಶದೊಳಗೆ ಇರುವ ದ್ರೋಹಿಗಳನ್ನು ಮಟ್ಟ ಹಾಕಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:58 pm, Sat, 26 April 25

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?