AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ; ಸಕ್ಕರೆ ಕಾರ್ಖಾನೆ ನೋಟಿಸ್​ಗೆ ಸರ್ಕಾರದ ವಿರುದ್ಧ ಯತ್ನಾಳ್ ಕಿಡಿ

ಕಾಂಗ್ರೆಸ್ ಸರ್ಕಾರ ರಾಜಕೀಯವಾಗಿ ಎದುರಿಸಲಾಗದೆ ನಮ್ಮ ಎಥನಾಲ್ ಕಾರ್ಖಾನೆಗೆ ನೋಟಿಸ್ ಕೊಡಿಸಿದೆ. ರೈತರಿಗೆ ನೆರವಾಗಲು ಹಾಗೂ ಹಿಂದುಳಿದ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿ ಮಾಡಲು ಕಾರ್ಖಾನೆ ಸ್ಥಾಪಿಸಲಾಗಿದೆ ಎಂದು ಟ್ವೀಟ್ ಮಾಡುವ ಮೂಲಕ ಶಾಸನ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೈಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ; ಸಕ್ಕರೆ ಕಾರ್ಖಾನೆ ನೋಟಿಸ್​ಗೆ ಸರ್ಕಾರದ ವಿರುದ್ಧ ಯತ್ನಾಳ್ ಕಿಡಿ
ಬಸನಗೌಡ ಪಾಟೀಲ್ ಯತ್ನಾಳ್
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ಆಯೇಷಾ ಬಾನು|

Updated on:Jan 27, 2024 | 12:11 PM

Share

ಕಲಬುರಗಿ, ಜ.27: ಪರಿಸರ ನಿಯಮ‌ ಉಲ್ಲಂಘನೆ ಆರೋಪ ಹಿನ್ನೆಲೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅಧ್ಯಕ್ಷತೆಯ ಸಿದ್ದಶ್ರೀ ಸೌಹಾರ್ಧ ಸಹಕಾರಿ ಸಕ್ಕರೆ ಕಾರ್ಖಾನೆ ಮುಚ್ಚಲು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿದೆ. ಈ ಸಂಬಂಧ ಎಕ್ಸ್ (ಟ್ವಿಟರ್)ನಲ್ಲಿ ಟ್ವೀಟ್ ಮಾಡುವ ಮೂಲಕ ಯತ್ನಾಳ್ ಸರ್ಕಾರದ (Karnataka Government) ನಡೆಯನ್ನು ವಿರೋಧಿಸಿ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಸರ್ಕಾರ ರಾಜಕೀಯವಾಗಿ ಎದುರಿಸಲಾಗದೆ ನಮ್ಮ ಎಥನಾಲ್ ಕಾರ್ಖಾನೆಗೆ ನೋಟಿಸ್ ಕೊಡಿಸಿದೆ. ರೈತರಿಗೆ ನೆರವಾಗಲು ಹಾಗೂ ಹಿಂದುಳಿದ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿ ಮಾಡಲು ಕಾರ್ಖಾನೆ ಸ್ಥಾಪಿಸಲಾಗಿದೆ. ಕಾನೂನು ರೀತ್ಯಾ ನ್ಯಾಯಾಲಯದಲ್ಲಿ ಇದನ್ನು ಪ್ರಶ್ನಿಸಲಾಗುತ್ತದೆ. ಈ ನೋಟಿಸ್, ಆದೇಶಗಳಿಗೆ ಹೆದರುವ ಜಾಯಮಾನ ನನ್ನದಲ್ಲ ಕಾಂಗ್ರೆಸ್ ಆಡಳಿತದ ವಿರುದ್ಧ ಹೋರಾಟ ಮಾಡಲು ಶಕ್ತಿ ಇಮ್ಮಡಿಯಾಗಿದೆ. ‘ಕೈ’ಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ ಎಂಬುದು ಗೊತ್ತಿರುವ ವಿಷಯವೇ. ಬಡವರಿಗೆ, ದೀನ-ದಲಿತರಿಗೆ, ಪಕ್ಷದ ಕಾರ್ಯಕರ್ತರಿಗೆ ಸಹಾನೂಭೂತಿಯಿಂದ ಕಾಣುತ್ತ ಬಂದಿರುವ ನಾನು, ನನ್ನ ಮಿತಿಯಲ್ಲಿ ನನ್ನದೇ ಕಾರ್ಖಾನೆಗಳಲ್ಲಿ ನೂರಾರು ಜನರಿಗೆ ಉದ್ಯೋಗ ಸೃಷ್ಟಿಸಿದ್ದೇನೆ. ಜಿಲ್ಲೆಯ ಆರ್ಥಿಕತೆಯನ್ನು ಸುಧಾರಿಸಲು ನನ್ನ ಅಳಿಲು ಸೇವೆಯೂ ಇದೆ. ರಾಜಕೀಯ ಒತ್ತಡಕ್ಕೆ ಮಣಿದು ನನ್ನ ಕಾರ್ಖಾನೆಯನ್ನು ಮುಚ್ಚಿಸುವುದರಿಂದ ಇವರು ಏನನ್ನೂ ಕೂಡ ಸಾಧಿಸಲು ಸಾಧ್ಯವಿಲ್ಲ. ಕಾರ್ಖಾನೆ ಮತ್ತೆ ತೆರೆಯುವುದು ನಿಶ್ಚಿತ, ಈ ನಿಟ್ಟಿನಲ್ಲಿ ಕಾನೂನು ಹೋರಾಟವನ್ನು ನಾನು ಮಾಡುತ್ತೇನೆ ಎಂದು ಯತ್ನಾಳ್ ಟ್ವೀಟ್ ಮಾಡುವ ಮೂಲಕ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಪರಿಸರ ನಿಯಮಾವಳಿ ಉಲ್ಲಂಘನೆ ಆರೋಪ: ಯತ್ನಾಳ್ ಸಕ್ಕರೆ ಕಾರ್ಖಾನೆ ಮುಚ್ಚಲು ಕೆಎಸ್‌ಪಿಸಿಬಿ ಆದೇಶ

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಒಡೆತನದ ಶುಗರ್ ಫ್ಯಾಕ್ಟರಿ ಬಂದ್​ಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ. ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಇರುವ ಶುಗರ್ ಫ್ಯಾಕ್ಟರಿ ಮತ್ತು ಏಥೆನಾಲ್ ಘಟಕಕ್ಕೆ ಬೀಗ ಹಾಕಲು ಆದೇಶಿಸಲಾಗಿದೆ. ಕಾರ್ಖಾನೆಯ ಕಲುಷಿತ ನೀರು ಮುಲ್ಲಾಮಾರಿ ಜಲಾಶಯಕ್ಕೆ ಬೀಡಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:00 pm, Sat, 27 January 24

Follow Us
ದತ್ತಾತ್ರೇಯ ಪಾಟೀಲ, ಕಲಬುರಗಿ
ದತ್ತಾತ್ರೇಯ ಪಾಟೀಲ, ಕಲಬುರಗಿ

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ