AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯಿಂದ ನನ್ನನ್ನು ಹೊರಹಾಕಲ್ಲ, ಪಕ್ಷದಲ್ಲಿ ಗಟ್ಟಿಯಾಗಿದ್ದೀನಿ: ಬೆಂಬಲಿಗರಿಗೆ ಯತ್ನಾಳ್ ಸಂದೇಶ

ಕಲಬುರಗಿ(Kalaburagi)ಯ ಶ್ರೀಶರಣಬಸವೇಶ್ವರ ಜಾತ್ರಾ ಮೈದಾನದಲ್ಲಿ ಹಮ್ಮಿಕೊಂಡಿದ್ದ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಸಮಾವೇಶದಲ್ಲಿ ಮಾತನಾಡಿದ, ‘ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal), ‘ಬಿಜೆಪಿಯಿಂದ ನನ್ನನ್ನು ಹೊರಹಾಕಲ್ಲ, ಬಿಜೆಪಿಯಲ್ಲಿ ಗಟ್ಟಿಯಾಗಿದ್ದೀನಿ. ಲೋಕಸಭಾ ಚುನಾವಣೆ ಮುಗಿಯಲಿ, ನಂತರ ನಾನು ತೋರಿಸುತ್ತೇನೆ ಎಂದರು.

ಬಿಜೆಪಿಯಿಂದ ನನ್ನನ್ನು ಹೊರಹಾಕಲ್ಲ, ಪಕ್ಷದಲ್ಲಿ ಗಟ್ಟಿಯಾಗಿದ್ದೀನಿ: ಬೆಂಬಲಿಗರಿಗೆ ಯತ್ನಾಳ್ ಸಂದೇಶ
ಬಿಜೆಪಿ ಶಾಸಕ ಯತ್ನಾಳ್
ದತ್ತಾತ್ರೇಯ ಪಾಟೀಲ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on: Mar 12, 2024 | 10:33 PM

Share

ಕಲಬುರಗಿ, ಮಾ.12: ‘ಬಿಜೆಪಿಯಿಂದ ನನ್ನನ್ನು ಹೊರಹಾಕಲ್ಲ, ಬಿಜೆಪಿಯಲ್ಲಿ ಗಟ್ಟಿಯಾಗಿದ್ದೀನಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal) ಹೇಳಿದರು. ಕಲಬುರಗಿ(Kalaburagi)ಯ ಶ್ರೀಶರಣಬಸವೇಶ್ವರ ಜಾತ್ರಾ ಮೈದಾನದಲ್ಲಿ ಹಮ್ಮಿಕೊಂಡಿದ್ದ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ಲೋಕಸಭಾ ಚುನಾವಣೆ ಮುಗಿಯಲಿ, ನಂತರ ನಾನು ತೋರಿಸುತ್ತೇನೆ. ಚುನಾವಣೆಯೊಳಗೆ ರಾಜ್ಯ ಕಾಂಗ್ರೆಸ್ ಸರ್ಕಾರ 2ಎ ಮೀಸಲಾತಿ ನೀಡಬೇಕು. ಇಲ್ಲದಿದ್ರೆ ಕಾಂಗ್ರೆಸ್ಗೆ ವೋಟ್​ ಹಾಕಬೇಡಿ. ನಾನು ಮೀಸಲಾತಿ ತಂದು ತೋರಿಸ್ತೆನೆ ಕೇಂದ್ರದಲ್ಲಿ ನಮ್ಮದೆ ಸರ್ಕಾರ ಬರುತ್ತೆ ಎಂದರು.

ಇನ್ನು ಲೋಕಸಭಾ ಚುನಾವಣೆಯಲ್ಲಿ ನಿರ್ಣಯ ತೆಗೆದುಕೊಳ್ಳಲು ಈ ಸಮಾವೇಶ‌ ಆಯೋಜಿಸಲಾಗಿದೆ. ಈ ಮೂಲಕ ದೀಕ್ಷಾ, ಪಂಚಮಸಾಲಿ ಸಮಾಜಗಳು ಒಂದು ಮಾಡಲು ಮುಂದಾಗಿದ್ದೇವೆ. ನಮ್ಮ ಹೋರಾಟದಿಂದಲೇ ವೀರಶೈವ ಲಿಂಗಾಯತ ಸಮಾಜ ಒಂದಾಗುತ್ತಿದೆ. ಮೀಸಲಾತಿ ದೊರೆಯುವುದಕ್ಕೆ ಪ್ರಧಾನಿ ಮೋದಿ, ಶಾ ಮುತುವರ್ಜಿ ವಹಿಸಿದ್ದರು. ಕೆಲ ಸ್ವಾಮೀಜಿಗಳು ಯಾರೂ ಏನು ಕೆಲಸ ಮಾಡುತ್ತಿಲ್ಲ ಎಂದು ಯತ್ನಾಳ್ ಸ್ವ ಸಮುದಾಯದ ಸ್ವಾಮೀಜಿಗಳ ವಿರುದ್ದ ಕಿಡಿಕಾರಿದರು.

ಇದನ್ನೂ ಓದಿ:ಪೂಜ್ಯ ತಂದೆ-ಮಕ್ಕಳು ಎಲ್ಲರನ್ನೂ ಮುಗಿಸಲು ಹೊರಟಿದ್ದಾರೆ: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ

ಕೆಲ ಸ್ವಾಮೀಜಿಗಳು, ‘ನೀನು ಸಿಎಂ ಆಗ್ತೀಯಾ ಎಂದು ಆಶೀರ್ವದಿಸ್ತಾರೆ, ನಮ್ಮ ವಿಜಯಪುರ ಮಂದಿ ಯಾವುದಕ್ಕೂ ಅಂಜುವುದಿಲ್ಲ. ವಿಧಾನಸಭೆ ಚುನಾವಣೆ ವೇಳೆ ನನಗೆ ಟಿಕೆಟ್ ತಪ್ಪಿಸ್ತೀನಿ ಎಂದು ಕೆಲವರು ಹೇಳಿದ್ದರು. ಅವರೆಲ್ಲಾ ಏನ್ ಮಾಡಿದ್ರು, ಬಿಜೆಪಿಯ ಮೊದಲ ಲಿಸ್ಟ್‌ನಲ್ಲೇ ನನಗೆ ಟಿಕೆಟ್ ಸಿಕ್ಕಿತು. ಪರೋಕ್ಷವಾಗಿ ವಿರೋಧಿಗಳ ವಿರುದ್ಧ ಬಿಜೆಪಿ ಶಾಸಕ ಯತ್ನಾಳ್ ಗುಡುಗಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ