AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲು ಪ್ರಯಾಣಿಕರೇ ಗಮನಿಸಿ: ರದ್ದಾಗಿದೆ ಬೆಂಗಳೂರು ಕಲಬುರಗಿ ವಿಶೇಷ ರೈಲು

Bengaluru Kalaburagi special train; ಬೇಸಿಗೆ ರಜೆಯಲ್ಲಿ ಜನರಿಗೆ ಅನುಕೂಲ ಮಾಡಿಕೊಡುವುದಕ್ಕಾಗಿ ಆರಂಭಿಸಲಾಗಿರುವ ಎಸ್‌ಎಂವಿಟಿ ಬೆಂಗಳೂರು ಮತ್ತು ಕಲಬುರಗಿ ನಡುವಣ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಹಠಾತ್ ರದ್ದುಗೊಳಿಸಲಾಗಿದೆ. ಇಷ್ಟೇ ಅಲ್ಲದೆ, ದಕ್ಷಿಣ ರೈಲ್ವೆ ವ್ಯಾಪ್ತಿಯ ಅನೇಕ ರೈಲು ಸಂಚಾರದಲ್ಲಿಯೂ ವ್ಯತ್ಯಯವಾಗಿದೆ. ಆ ಕುರಿತು ವಿವರ ಇಲ್ಲಿದೆ.

ರೈಲು ಪ್ರಯಾಣಿಕರೇ ಗಮನಿಸಿ: ರದ್ದಾಗಿದೆ ಬೆಂಗಳೂರು ಕಲಬುರಗಿ ವಿಶೇಷ ರೈಲು
ಬೆಂಗಳೂರು ಕಲಬುರಗಿ ವಿಶೇಷ ರೈಲು ರದ್ದು
ಗಣಪತಿ ಶರ್ಮಾ
|

Updated on: May 28, 2024 | 8:57 AM

Share

ಬೆಂಗಳೂರು, ಮೇ 28: ಸೆಂಟ್ರಲ್ ರೈಲ್ವೆ (Central Railway) ಕಾರ್ಯಾಚರಣೆಯ ನಿರ್ಬಂಧಗಳ ಕಾರಣದಿಂದ ಎಸ್‌ಎಂವಿಟಿ ಬೆಂಗಳೂರು ಮತ್ತು ಕಲಬುರಗಿ ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ರದ್ದುಗೊಳಿಸುವುದಾಗಿ ನೈಋತ್ಯ ರೈಲ್ವೆ (South Western Railway) ತಿಳಿಸಿದೆ. ಬೇಸಗೆ ರಜೆ ಅವಧಿಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡುವ ಉದ್ದೇಶದೊಂದಿಗೆ ಈ ವಿಶೇಷ ರೈಲು ಆರಂಭಿಸಲಾಗಿತ್ತು.

ಎಸ್‌ಎಂವಿಟಿ ಬೆಂಗಳೂರಿನಿಂದ (ರೈಲು ಸಂಖ್ಯೆ 06261) ಮೇ 29 ಮತ್ತು ಜೂನ್ 27 ರ ನಡುವೆ ಮತ್ತು ಕಲಬುರಗಿಯಿಂದ (ರೈಲು ಸಂಖ್ಯೆ 06262) ಮೇ 30 ಮತ್ತು ಜೂನ್ 28 ರ ನಡುವೆ ಸಂಚರಿಸಲಿರುವ ವಿಶೇಷ ರೈಲುಗಳು ರದ್ದಾಗಿವೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

ಇತರ ಕಡೆಗಳಲ್ಲಿಯೂ ರೈಲು ಸಂಚಾರದಲ್ಲಿ ವ್ಯತ್ಯಯ

ಮುಂಬೈಯ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್​​​​​ನಲ್ಲಿ ಪ್ಲಾಟ್​​ಫಾರ್ಮ್​​ ವಿಸ್ತರಣೆಗಾಗಿ 36 ಗಂಟೆಗಳ ಸಂಚಾರ ನಿರ್ಬಂಧದ ಕಾರಣ ದಕ್ಷಿಣ ರೈಲ್ವೆ ವ್ಯಾಪ್ತಿಯಲ್ಲಿ ಮೇ 31 ಮತ್ತು ಜೂನ್ 2 ರ ನಡುವೆ 69 ದೂರ ಸಂಚಾರದ ರೈಲುಗಳು ರದ್ದಾಗಿವೆ. 24 ಕೋಚ್ ಸಾಮರ್ಥ್ಯದ ರೈಲುಗಳಿಗೆ ಸಂಚಾರಕ್ಕೆ ಅನುವು ಮಾಡಿಕೊಡುವುದಕ್ಕೆ ಸಂಬಂಧಿಸಿದ ವಿಸ್ತರಣಾ ಕಾಮಗಾರಿ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್​​​​​ನಲ್ಲಿ ನಡೆಯುತ್ತಿದೆ. ಇದು ದಕ್ಷಿಣ ರೈಲ್ವೆ ವ್ಯಾಪ್ತಿಯಲ್ಲಿ ಇತರ ರೈಲುಗಳ ಸಂಚಾರದ ಮೇಲೂ ಪರಿಣಾಮ ಬೀರಿದೆ.

ದಕ್ಷಿಣ ರೈಲ್ವೆಯು ಸದ್ಯ ಉಪನಗರ ರೈಲುಗಳನ್ನು ಭಾಗಶಃ ರದ್ದುಗೊಳಿಸಿದೆ. ಚೆನ್ನೈ ಬೀಚ್ – ಚೆಂಗಲ್‌ಪೇಟ್ ಎಮು ಮೂಲಕ ಸಂಚರಿಸುವವರು ಚೆನ್ನೈ ಬೀಚ್‌ನಿಂದ ಹೊರಡುವುದು ಸಿಂಗಪೆರುಮಾಳ್ ಕೋಯಿಲ್‌ವರೆಗೆ ಮಾತ್ರ ಸಂಚರಿಸಬಹುದಾಗಿದೆ.

ಇದನ್ನೂ ಓದಿ: ಉಡುಪಿ: ಕಾರ್ಗತ್ತಲ ರಾತ್ರಿಯಲ್ಲಿ ಸಮಯ ಪ್ರಜ್ಞೆ ಮೆರೆದ ಸಿಬ್ಬಂದಿ, ಸ್ವಲ್ಪದರಲ್ಲೇ ತಪ್ಪಿತು ರೈಲು ದುರಂತ

ದಕ್ಷಿಣ ರೈಲ್ವೆಯು ಭಾನುವಾರ ರಾತ್ರಿ ತಿರುಚ್ಚಿಯಿಂದ ಕುಂಭಕೋಣಂ ಮತ್ತು ಮೈಲಾಡುತುರೈ ಮೂಲಕ ತಾಂಬರಂಗೆ ಮೆಮು ವಿಶೇಷ ರೈಲನ್ನು ಓಡಿಸಲಿದೆ. ಆದರೆ, ಇದರಲ್ಲಿ ಟಿಕೆಟ್ ಕಾಯ್ದಿರಿಸುವ ಸೌಲಭ್ಯ ಇರುವುದಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ