ರೈಲು ಪ್ರಯಾಣಿಕರೇ ಗಮನಿಸಿ: ರದ್ದಾಗಿದೆ ಬೆಂಗಳೂರು ಕಲಬುರಗಿ ವಿಶೇಷ ರೈಲು

Bengaluru Kalaburagi special train; ಬೇಸಿಗೆ ರಜೆಯಲ್ಲಿ ಜನರಿಗೆ ಅನುಕೂಲ ಮಾಡಿಕೊಡುವುದಕ್ಕಾಗಿ ಆರಂಭಿಸಲಾಗಿರುವ ಎಸ್‌ಎಂವಿಟಿ ಬೆಂಗಳೂರು ಮತ್ತು ಕಲಬುರಗಿ ನಡುವಣ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಹಠಾತ್ ರದ್ದುಗೊಳಿಸಲಾಗಿದೆ. ಇಷ್ಟೇ ಅಲ್ಲದೆ, ದಕ್ಷಿಣ ರೈಲ್ವೆ ವ್ಯಾಪ್ತಿಯ ಅನೇಕ ರೈಲು ಸಂಚಾರದಲ್ಲಿಯೂ ವ್ಯತ್ಯಯವಾಗಿದೆ. ಆ ಕುರಿತು ವಿವರ ಇಲ್ಲಿದೆ.

ರೈಲು ಪ್ರಯಾಣಿಕರೇ ಗಮನಿಸಿ: ರದ್ದಾಗಿದೆ ಬೆಂಗಳೂರು ಕಲಬುರಗಿ ವಿಶೇಷ ರೈಲು
ಬೆಂಗಳೂರು ಕಲಬುರಗಿ ವಿಶೇಷ ರೈಲು ರದ್ದು
Follow us
|

Updated on: May 28, 2024 | 8:57 AM

ಬೆಂಗಳೂರು, ಮೇ 28: ಸೆಂಟ್ರಲ್ ರೈಲ್ವೆ (Central Railway) ಕಾರ್ಯಾಚರಣೆಯ ನಿರ್ಬಂಧಗಳ ಕಾರಣದಿಂದ ಎಸ್‌ಎಂವಿಟಿ ಬೆಂಗಳೂರು ಮತ್ತು ಕಲಬುರಗಿ ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ರದ್ದುಗೊಳಿಸುವುದಾಗಿ ನೈಋತ್ಯ ರೈಲ್ವೆ (South Western Railway) ತಿಳಿಸಿದೆ. ಬೇಸಗೆ ರಜೆ ಅವಧಿಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡುವ ಉದ್ದೇಶದೊಂದಿಗೆ ಈ ವಿಶೇಷ ರೈಲು ಆರಂಭಿಸಲಾಗಿತ್ತು.

ಎಸ್‌ಎಂವಿಟಿ ಬೆಂಗಳೂರಿನಿಂದ (ರೈಲು ಸಂಖ್ಯೆ 06261) ಮೇ 29 ಮತ್ತು ಜೂನ್ 27 ರ ನಡುವೆ ಮತ್ತು ಕಲಬುರಗಿಯಿಂದ (ರೈಲು ಸಂಖ್ಯೆ 06262) ಮೇ 30 ಮತ್ತು ಜೂನ್ 28 ರ ನಡುವೆ ಸಂಚರಿಸಲಿರುವ ವಿಶೇಷ ರೈಲುಗಳು ರದ್ದಾಗಿವೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

ಇತರ ಕಡೆಗಳಲ್ಲಿಯೂ ರೈಲು ಸಂಚಾರದಲ್ಲಿ ವ್ಯತ್ಯಯ

ಮುಂಬೈಯ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್​​​​​ನಲ್ಲಿ ಪ್ಲಾಟ್​​ಫಾರ್ಮ್​​ ವಿಸ್ತರಣೆಗಾಗಿ 36 ಗಂಟೆಗಳ ಸಂಚಾರ ನಿರ್ಬಂಧದ ಕಾರಣ ದಕ್ಷಿಣ ರೈಲ್ವೆ ವ್ಯಾಪ್ತಿಯಲ್ಲಿ ಮೇ 31 ಮತ್ತು ಜೂನ್ 2 ರ ನಡುವೆ 69 ದೂರ ಸಂಚಾರದ ರೈಲುಗಳು ರದ್ದಾಗಿವೆ. 24 ಕೋಚ್ ಸಾಮರ್ಥ್ಯದ ರೈಲುಗಳಿಗೆ ಸಂಚಾರಕ್ಕೆ ಅನುವು ಮಾಡಿಕೊಡುವುದಕ್ಕೆ ಸಂಬಂಧಿಸಿದ ವಿಸ್ತರಣಾ ಕಾಮಗಾರಿ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್​​​​​ನಲ್ಲಿ ನಡೆಯುತ್ತಿದೆ. ಇದು ದಕ್ಷಿಣ ರೈಲ್ವೆ ವ್ಯಾಪ್ತಿಯಲ್ಲಿ ಇತರ ರೈಲುಗಳ ಸಂಚಾರದ ಮೇಲೂ ಪರಿಣಾಮ ಬೀರಿದೆ.

ದಕ್ಷಿಣ ರೈಲ್ವೆಯು ಸದ್ಯ ಉಪನಗರ ರೈಲುಗಳನ್ನು ಭಾಗಶಃ ರದ್ದುಗೊಳಿಸಿದೆ. ಚೆನ್ನೈ ಬೀಚ್ – ಚೆಂಗಲ್‌ಪೇಟ್ ಎಮು ಮೂಲಕ ಸಂಚರಿಸುವವರು ಚೆನ್ನೈ ಬೀಚ್‌ನಿಂದ ಹೊರಡುವುದು ಸಿಂಗಪೆರುಮಾಳ್ ಕೋಯಿಲ್‌ವರೆಗೆ ಮಾತ್ರ ಸಂಚರಿಸಬಹುದಾಗಿದೆ.

ಇದನ್ನೂ ಓದಿ: ಉಡುಪಿ: ಕಾರ್ಗತ್ತಲ ರಾತ್ರಿಯಲ್ಲಿ ಸಮಯ ಪ್ರಜ್ಞೆ ಮೆರೆದ ಸಿಬ್ಬಂದಿ, ಸ್ವಲ್ಪದರಲ್ಲೇ ತಪ್ಪಿತು ರೈಲು ದುರಂತ

ದಕ್ಷಿಣ ರೈಲ್ವೆಯು ಭಾನುವಾರ ರಾತ್ರಿ ತಿರುಚ್ಚಿಯಿಂದ ಕುಂಭಕೋಣಂ ಮತ್ತು ಮೈಲಾಡುತುರೈ ಮೂಲಕ ತಾಂಬರಂಗೆ ಮೆಮು ವಿಶೇಷ ರೈಲನ್ನು ಓಡಿಸಲಿದೆ. ಆದರೆ, ಇದರಲ್ಲಿ ಟಿಕೆಟ್ ಕಾಯ್ದಿರಿಸುವ ಸೌಲಭ್ಯ ಇರುವುದಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಡಿಎನ್​ಎ ಟೆಸ್ಟ್​ ಮಾಡಿಸಲು ಆಸ್ಪತ್ರೆಗೆ ತೆರಳುವಾಗಿ ಟೆನ್ಷನ್​ ಆದ ಪವಿತ್ರಾ
ಡಿಎನ್​ಎ ಟೆಸ್ಟ್​ ಮಾಡಿಸಲು ಆಸ್ಪತ್ರೆಗೆ ತೆರಳುವಾಗಿ ಟೆನ್ಷನ್​ ಆದ ಪವಿತ್ರಾ
ಡಿಕೆ ಶಿವಕುಮಾರ್​ ಸಭೆಗೂ ಕೈಕೊಟ್ಟ ವಿದ್ಯುತ್: ಅಧಿಕಾರಿಗಳ ಸರ್ಕಸ್ ನೋಡಿ
ಡಿಕೆ ಶಿವಕುಮಾರ್​ ಸಭೆಗೂ ಕೈಕೊಟ್ಟ ವಿದ್ಯುತ್: ಅಧಿಕಾರಿಗಳ ಸರ್ಕಸ್ ನೋಡಿ
ಆಕಾಶದಲ್ಲಿದ್ದ ವಿಮಾನದಲ್ಲಿ ಕೈಕೊಟ್ಟ AC, ಪ್ರಯಾಣಿಕರ ಪರದಾಟ: ವಿಡಿಯೋ ನೋಡಿ
ಆಕಾಶದಲ್ಲಿದ್ದ ವಿಮಾನದಲ್ಲಿ ಕೈಕೊಟ್ಟ AC, ಪ್ರಯಾಣಿಕರ ಪರದಾಟ: ವಿಡಿಯೋ ನೋಡಿ
‘ಡೆವಿಲ್​ ಎದುರು ನನ್ನ ಸಿನಿಮಾ ರಿಲೀಸ್​’: ಪ್ರಥಮ್​ ಬಹಿರಂಗ ಸವಾಲು
‘ಡೆವಿಲ್​ ಎದುರು ನನ್ನ ಸಿನಿಮಾ ರಿಲೀಸ್​’: ಪ್ರಥಮ್​ ಬಹಿರಂಗ ಸವಾಲು
ಚನ್ನಪಟ್ಟಣ ಬೈ ಎಲೆಕ್ಷನ್ ಅಖಾಡಕ್ಕೆ ಧುಮುಕಿದ ಡಿಕೆ ಶಿವಕುಮಾರ್‌
ಚನ್ನಪಟ್ಟಣ ಬೈ ಎಲೆಕ್ಷನ್ ಅಖಾಡಕ್ಕೆ ಧುಮುಕಿದ ಡಿಕೆ ಶಿವಕುಮಾರ್‌
ಕಾಸರಗೋಡಿನಲ್ಲಿ ಕೋಣದ ಆರ್ಭಟಕ್ಕೆ ಮನೆ, ಗೇಟು, ಕಾರು ನಜ್ಜುಗುಜ್ಜು
ಕಾಸರಗೋಡಿನಲ್ಲಿ ಕೋಣದ ಆರ್ಭಟಕ್ಕೆ ಮನೆ, ಗೇಟು, ಕಾರು ನಜ್ಜುಗುಜ್ಜು
ವಿಭಿನ್ನತೆಯಿಂದಲೇ ಜನರ ಮನ ಗೆದ್ದ ಈ ಕೋಳಿಯನ್ನೊಮ್ಮೆ ನೋಡಿ
ವಿಭಿನ್ನತೆಯಿಂದಲೇ ಜನರ ಮನ ಗೆದ್ದ ಈ ಕೋಳಿಯನ್ನೊಮ್ಮೆ ನೋಡಿ
ಬಸ್​​ಲ್ಲಿ ಸಿಕ್ತು 2.5 ಲಕ್ಷ ರೂ ಹಣ: ಹಿಂದಿರುಗಿಸಿದ KSRTC ಸಿಬ್ಬಂದಿ
ಬಸ್​​ಲ್ಲಿ ಸಿಕ್ತು 2.5 ಲಕ್ಷ ರೂ ಹಣ: ಹಿಂದಿರುಗಿಸಿದ KSRTC ಸಿಬ್ಬಂದಿ
ದರ್ಶನ್ ಅಂಧಾಭಿಮಾನಿ ಜೊತೆಗಿನ ಫೋನ್ ಮಾತುಕತೆ ಬಿಚ್ಚಿಟ್ಟ ಪ್ರಥಮ್
ದರ್ಶನ್ ಅಂಧಾಭಿಮಾನಿ ಜೊತೆಗಿನ ಫೋನ್ ಮಾತುಕತೆ ಬಿಚ್ಚಿಟ್ಟ ಪ್ರಥಮ್
ನಭೋ ಮಂಡಲದಲ್ಲಿ ವಿಸ್ಮಯ, ಸೂರ್ಯನ ಸುತ್ತ ಕಂಡು ಬಂದ ಕಾಮನಬಿಲ್ಲಿನ ಉಂಗುರ
ನಭೋ ಮಂಡಲದಲ್ಲಿ ವಿಸ್ಮಯ, ಸೂರ್ಯನ ಸುತ್ತ ಕಂಡು ಬಂದ ಕಾಮನಬಿಲ್ಲಿನ ಉಂಗುರ