AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದಲ್ಲಿ ಗಾಯಗೊಂಡ ಕಲಬುರಗಿ ಯುವ ಮೋರ್ಚಾ ಪದಾಧಿಕಾರಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಗೆ ಆಗಮಿಸಿದ್ದ ವೇಳೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವ ಮೋರ್ಚಾ ಪದಾಧಿಕಾರಿಯ ಆರೋಗ್ಯವನ್ನು ವಿಚಾರಿಸಿದರು.

ಅಪಘಾತದಲ್ಲಿ ಗಾಯಗೊಂಡ ಕಲಬುರಗಿ ಯುವ ಮೋರ್ಚಾ ಪದಾಧಿಕಾರಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on: Jan 20, 2023 | 6:10 PM

Share

ಬೆಂಗಳೂರು: ಪಕ್ಷದ ಕೆಲಸ ನಿರ್ವಹಿಸಿ ವಾಪಸ್ಸಾಗುತ್ತಿದ್ದ ವೇಳೆ ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ಕಲಬುರಗಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ (Kalaburagi BJP Yuva Morcha) ಪ್ರಧಾನ ಕಾರ್ಯದರ್ಶಿ ವೀರೇಂದ್ರ ಪಾಟೀಲ್ ರಾಯಕೋಡ ಅವರ ಆರೋಗ್ಯವನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ವಿಚಾರಿಸಿದ್ದಾರೆ. ನಿನ್ನೆ (ಜನವರಿ 19) ಪ್ರಧಾನಿ ಮೋದಿ ಅವರು ಕಲಬುರಗಿಗೆ ಆಗಮಿಸಿದ್ದ ವೇಳೆ ಅವರನ್ನು ಸ್ವಾಗತಿಸಲು ನಿಂತಿದ್ದವರ ಪೈಕಿ ವೀರೇಂದ್ರ ಪಾಟೀಲ್ ರಾಯಕೋಡ ಅವರು ಕೂಡ ಒಬ್ಬರಾಗಿದ್ದಾರೆ. ಕೈಯಲ್ಲಿ ವಾಕಿಂಗ್ ಸ್ಟಿಕ್ ಹಿಡಿದುಕೊಂಡಿರುವುದನ್ನು ನೋಡಿದ ಮೋದಿ ವೀರೇಂದ್ರ ಅವರ ಬಳಿ ಬಂದು ಆರೋಗ್ಯ ವಿಚಾರಿಸಿದರು.

ಮಳಖೇಡ ಹೆಲಿಪ್ಯಾಡ್​ನಲ್ಲಿ ಮೋದಿ ಅವರನ್ನು ಸ್ವಾಗತಿಸಲು ವೀರೇಂದ್ರ ಪಾಟೀಲ್ ರಾಯಕೋಡ ಅವರು ಕೈಯಲ್ಲಿ ವಾಕಿಂಗ್ ಸ್ಟಿಕ್ ಹಿಡಿದುಕೊಂಡು ನಿಂತಿದ್ದರು. ಈ ವೇಳೆ ವೀರೇಂದ್ರ ಅವರ ಬಳಿ ಬಂದ ಮೋದಿ, ಕಾಲಿಗೆ ಏನಾಯಿತು ಎಂದು ಕೇಳಿದ ವಿಚಾರಿಸಿದರು. ವಿಸ್ತಾರಕನಾಗಿ ಕೆಲಸ ಮುಗಿಸಿ ಬರುತ್ತಿದ್ದ ವೇಳೆ ಅಪಘಾತವಾಗಿದೆ ಎಂದು ಮೋದಿ ಬಳಿ ವೀರೇಂದ್ರ ಅವರು ಮಾಹಿತಿ ಹಂಚಿಕೊಂಡರು. ವೀರೇಂದ್ರ ಅವರು ಘಟನೆ ಬಗ್ಗೆ ಮಾತನಾಡಿದಾಗ ಬೈಕ್​ನಲ್ಲಿ ಹೋಗಿದ್ದೀಯಾ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ವೀರೇಂದ್ರ ಅವರು ಹೌದು ಎಂದಾಗ ಮೋದಿ ಅವರು, ಮೊದಲು ಆರಾಮಾಗು ನಂತರ ಕೆಲಸ ಮಾಡು ಎಂದು ಹೇಳಿ ರಾಯಕೋಡ ತಲೆ ಮುಟ್ಟಿ ಶುಭ ಹಾರೈಸಿದರು.

ಇದನ್ನೂ ಓದಿ: World Economic Forum: ಜಾಗತಿಕ ಪರಿಸ್ಥಿತಿ ಹದಗೆಟ್ಟ ಸಂದರ್ಭದಲ್ಲಿ ಮೋದಿ ನಾಯಕತ್ವ ನಿರ್ಣಾಯಕ; ವಿಶ್ವ ಆರ್ಥಿಕ ವೇದಿಕೆ

ಕಲಬುರಗಿಯ ಮಳಖೇಡದಲ್ಲಿ ನಿನ್ನೆ ನಡೆದ ಬಂಜಾರಾ ಸಮುದಾಯದ ಜನರಿಗೆ ಹಕ್ಕುಪತ್ರಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಿದ್ದರು. ಕಾರ್ಯಕ್ರಮಕ್ಕೆ ಮೊದಲು ಬಂಜಾರಾ ಪರಂಪರೆಯನ್ನು ಪ್ರತಿನಿಧಿಸುವ ನಗಾರಿಯನ್ನು ಪರಿಣಿತ ವಾದಕರ ಹಾಗೆ ಬಾರಿಸಿ ನೆರೆದಿದ್ದ ಲಕ್ಷಾಂತರ ಜನರನ್ನು ರಂಜಿಸಿದರು. ಅವರ ವಾದನ ಕೇಳಿದ ಜನರ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ