AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೇವರ್ಗಿ ಪುರಸಭೆಯಲ್ಲಿ ಬಿಜೆಪಿಗೆ ಬಿಗ್ ಶಾಕ್; 13 ಬಿಜೆಪಿ ಸದಸ್ಯರು ಜೆಡಿಎಸ್ ಸೇರ್ಪಡೆ

ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ಅವರು ಬಿಗ್ ಆಪರೇಷನ್ ಮಾಡಿ ಬಿಜೆಪಿ ಸದಸ್ಯರನ್ನ ಜೆಡಿಎಸ್​ಗೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. 17 ಬಿಜೆಪಿ ಸದಸ್ಯರಲ್ಲಿ 13 ಜನರನ್ನು ಸೆಳೆದು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಮೈತ್ರಿ ಮೈತ್ರಿ ಎಂದು ಓಡಾಡುತ್ತಿರುವ ಬಿಜೆಪಿ-ಜೆಡಿಎಸ್ ಮಿತ್ರ ಪಕ್ಷದಲ್ಲೇ ಬಿಗ್ ಆಪರೇಷನ್ ನಡೆದಿದೆ.

ಜೇವರ್ಗಿ ಪುರಸಭೆಯಲ್ಲಿ ಬಿಜೆಪಿಗೆ ಬಿಗ್ ಶಾಕ್; 13 ಬಿಜೆಪಿ ಸದಸ್ಯರು ಜೆಡಿಎಸ್ ಸೇರ್ಪಡೆ
ಜೇವರ್ಗಿ ಪುರಸಭೆಯಲ್ಲಿ BJPಗೆ ಬಿಗ್ ಶಾಕ್; 13 BJP ಸದಸ್ಯರು JDS ಸೇರ್ಪಡೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Aug 19, 2024 | 10:50 AM

Share

ಕಲಬುರಗಿ, ಆಗಸ್ಟ್​.19: ಜಿಲ್ಲೆಯ ಜೇವರ್ಗಿ ಪುರಸಭೆಯ 13 ಜನ ಬಿಜೆಪಿ ಸದಸ್ಯರು JDSಗೆ ಸೇರುವ ಮೂಲಕ ಶಾಕ್ ಕೊಟ್ಟಿದ್ದಾರೆ. ನಿನ್ನೆ ಬೆಂಗಳೂರಿನ JDS​ ಕಚೇರಿಯಲ್ಲಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರ ನೇತೃತ್ವದಲ್ಲಿ 13 ಜನ JDS ಸೇರ್ಪಡೆಯಾಗಿದ್ದಾರೆ.

ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ಅವರು ಬಿಗ್ ಆಪರೇಷನ್ ಮಾಡಿ ಬಿಜೆಪಿ ಸದಸ್ಯರನ್ನ ಜೆಡಿಎಸ್​ಗೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. 17 ಬಿಜೆಪಿ ಸದಸ್ಯರಲ್ಲಿ 13 ಜನರನ್ನು ಸೆಳೆದು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಈ ಮೂಲಕ ಸ್ಥಳೀಯ ಬಿಜೆಪಿ ನಾಯಕರಿಗೆ ಶಾಕ್ ಕೊಟ್ಟಿದ್ದಾರೆ. ಕಳೆದ‌ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಹಿನ್ನಲೆ ದೊಡ್ಡಪ್ಪಗೌಡ ಅವರು ಜೆಡಿಎಸ್​ನಿಂದ ಸ್ಪರ್ಧಿಸಿದ್ದರು.

ಇದನ್ನೂ ಓದಿ: ಎರಡನೇ ಮಹಡಿಯಿಂದ ಎಸಿ ಬಾಕ್ಸ್​ ತಲೆ ಮೇಲೆ ಬಿದ್ದು ಯುವಕ ಸಾವು

2008ರಲ್ಲಿ ಮಾಜಿ ಸಿಎಂ ಧರಂ ಸಿಂಗ್ ಅವರ ವಿರುದ್ಧ ಸ್ಪರ್ಧೆ ಮಾಡಿ ಗೆದ್ದು ಬೀಗಿದ್ದ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ್ ಅವರಿಗೆ ಕಳೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡಿರಲಿಲ್ಲ. ಇದರಿಂದ ಕಣ್ಣೀರು ಹಾಕಿದ್ದ ದೊಡ್ಡಪ್ಪಗೌಡ ಅವರು ಬಿಜೆಪಿ ವಿರುದ್ಧ ಕೆಂಡಕಾರಿದ್ದರು. ನಾನು 20 ವರ್ಷ ಪಕ್ಷ ಕಟ್ಟಿದೆ. ನಮ್ಮ ತಂದೆ ಕೂಡ ಇದೇ ಪಕ್ಷಕ್ಕೆ ದುಡಿದಿದ್ದರು. ನಮ್ಮ ಕಾರ್ಯಕರ್ತರಿಗೆ ನೋವಾದಾಗ ನಾನು ಯಾಕೆ ಆ ಪಕ್ಷದಲ್ಲಿ ಇರಬೇಕು. ಈಗ ನಾನು ನನ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಬಿಜೆಪಿ ತೊರೆದು ಜೆಡಿಎಸ್ ಸೇರಿದ್ದರು. ಸದ್ಯ ಇದೀಗ ತಮ್ಮ ಸೇಡನ್ನು ತೀರಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಮೈತ್ರಿ ಮೈತ್ರಿ ಎಂದು ಓಡಾಡುತ್ತಿರುವ ಬಿಜೆಪಿ-ಜೆಡಿಎಸ್ ಮಿತ್ರ ಪಕ್ಷದಲ್ಲೇ ಬಿಗ್ ಆಪರೇಷನ್ ನಡೆದಿದೆ. ದೊಡ್ಡಪ್ಪಗೌಡ ಪಾಟೀಲ್ ಅವರು 17 ಬಿಜೆಪಿ ಸದಸ್ಯರಿಗೆ ಗಾಳ ಹಾಕಿದ್ದು 13 ಸದಸ್ಯರನ್ನು ಜೆಡಿಎಸ್​ಗೆ ಸೆಳೆದಿದ್ದಾರೆ. ಇದು ಸ್ಥಳೀಯ ಬಿಜೆಪಿ ಸದಸ್ಯರಿಗೆ ಶಾಕ್ ತಂದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್