AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಅಪಘಾತವನ್ನೇ ಹಲ್ಲೆ ಎಂದ ಬಿಜೆಪಿ ಮುಖಂಡ: ಮಣಿಕಂಠ ರಾಠೋಡ್ ಮೇಲಿನ ಹಲ್ಲೆಯ ಅಸಲಿಯತ್ತು ಬಟಾಬಯಲು

ಮಣಿಕಂಠ ರಾಠೋಡ್ ಮೇಲಿನ ಹಲ್ಲೆಯ ಅಸಲಿಯತ್ತು ಬಟಾಬಯಲಾಗಿದೆ. ಚಿತ್ತಾಪುರ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಕಾಲ್ ರೇಕಾರ್ಡ್ ಹಿಸ್ಟರಿ ಟೆಕ್ನಿಕಲ್ ಎವಿಡೆನ್ಸ್ ಬೆನ್ನತ್ತಿದಾಗ ಹಲ್ಲೆಯ ಕಥೆ ಅಪಘಾತದ ಕಥೆಯಾಗಿ ಬಯಲಾಗಿದೆ. ಹೌದು..ಕಾರು ಅಪಘಾತವನ್ನೇ ಹಲ್ಲೆ ಮಾಡಿದ್ದಾರೆಂದು ಕಥೆ ಕಟ್ಟಿ ಸಿಕ್ಕಿಬಿದ್ದಿದ್ದಾರೆ. ಹಾಗಾದ್ರೆ, ಹೇಗೆಲ್ಲಾ ಸೀನ್ ಕ್ರಿಯೇಟ್ ಮಾಡಿದ್ರು ಎನ್ನುವ ವಿವರ ಇಲ್ಲಿದೆ ನೋಡಿ.

ಕಾರು ಅಪಘಾತವನ್ನೇ ಹಲ್ಲೆ ಎಂದ ಬಿಜೆಪಿ ಮುಖಂಡ: ಮಣಿಕಂಠ ರಾಠೋಡ್  ಮೇಲಿನ ಹಲ್ಲೆಯ ಅಸಲಿಯತ್ತು ಬಟಾಬಯಲು
ಮಣಿಕಂಠ ರಾಠೋಡ್
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ರಮೇಶ್ ಬಿ. ಜವಳಗೇರಾ

Updated on:Dec 06, 2023 | 2:04 PM

ಕಲಬುರಗಿ, (ಡಿಸೆಂಬರ್ 06): ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ (Manikanta Rathod)ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕಾರು ಅಪಘಾತವನ್ನೇ ಹಲ್ಲೆ ಮಾಡಿದ್ದಾರೆಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರೋಪಿಸಿದ್ದ ಮಣಿಕಂಠ ರಾಠೋಡ್ ಅಸಲಿಯತ್ತು ಬಟಾಬಯಲಾಗಿದೆ. ಹಲ್ಲೆ ಪ್ರಕರಣ ಸಂಬಂಧ ಮಣಿಕಂಠ ರಾಠೋಡ್​ ಬೆಂಬಲಿಗನನ್ನು ಪೊಲೀಸರು ವಿಚಾರಣೆಗೊಳಪಡಿಸಿದಾಗ ಮಣಿಕಂಠನ ನೌಟಂಕಿ ಆಟ ಬಯಲಾಗಿದೆ. ಈ ಮೂಲಕ ಚಿತ್ತಾಪುರ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಯಾವುದೇ ಹಲ್ಲೆ ನಡೆದಿಲ್ಲ. ಕಾರು ಅಪಘಾತದಲ್ಲಿ ಗಾಯಗೊಂಡು ಹಲ್ಲೆ ಮಾಡಿದ್ದಾರೆ ಎಂದು ಕಥೆ ಕಟ್ಟಿದ್ದರು ಎನ್ನುವುದು ಗೊತ್ತಾಗಿದೆ.

ಕಾರು ಅಪಘಾತವನ್ನ ರಾಜಕೀಯವಾಗಿ ಬಳಸಿಕೊಳ್ಳಲು ಕಥೆ ಕಟ್ಟಿದ ಮಣಿಕಂಠ ರಾಠೋಡ್, ನವೆಂಬರ್ 18 ರಂದು ಮಧ್ಯರಾತ್ರಿ ಹಲ್ಲೆ ಮಾಡಿದ್ದಾರೆ ಎಂದು ಮಣಿಕಂಠ ಹೇಳಿದ್ದ. ಅದಲ್ಲದೇ ಸಚಿವ ಪ್ರಿಯಾಂಕ್ ಖರ್ಗೆ ಬೆಂಬಲಿಗರು ಹಲ್ಲೆ ಮಾಡಿದ್ದಾರೆಂದು ಆರೋಪಿಸಿದ್ದ. ಅಷ್ಟೇ ಅಲ್ಲದೇ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ. ಆದ್ರೆ, ಪೊಲೀಸರು ಈ ಪ್ರಕರಣವನ್ನು ತನಿಖೆ ನಡೆಸಿದಾಗ ಮಣಿಕಂಠ ರಾಠೋಡ್ ಕಟ್ಟು ಕಥೆಯ ಸತ್ಯಾಂಶ ಬಯಲಿಗೆ ಬಂದಿದೆ. ಇದರೊಂದಿಗೆ ಮಣಿಕಂಠ, ಪ್ರಿಯಾಂಕ್ ಖರ್ಗೆ ಮೇಲೆ ಗೂಬೆ ಕೂರಿಸಲು ಹೋಗಿ ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಬಿಯರ್ ಬಾಟಲ್​ಗಳಿಂದ ಹಲ್ಲೆ

ಮಣಿಕಂಠ ರಾಠೋಡ್​ನ ಅಸಲಿ ಕಥೆ ಹೀಗಿದೆ

ಬಿಜೆಪಿ ಮಣಿಕಂಠ ರಾಠೋಡ್ ಮೇಲಿನ ಹಲ್ಲೆ ದೂರು ಗಂಭೀರವಾಗಿ ಪರಿಗಣಿಸಿದ್ದ ಶಹಬಾದ್ ಪೊಲೀಸರು, ಈ ಪ್ರಕರಣವನ್ನ ಬೆನ್ನತ್ತಿ ಹೋದಾಗ ಅಸಲಿಯತ್ತು ಬಟಾಬಯಲಾಗಿದೆ. ಮಣಿಕಂಠ ರಾಠೋಡ್ ಇನ್ನೋವಾ ಕ್ರಿಸ್ಟಾ ವೈಟ್ ಕಲರ್ ಕಾರು ಯಾದಗಿರಿ ಜಿಲ್ಲೆಯ ಚೆಪಟ್ಲಾ ಬಳಿ ಅಪಘಾತವಾಗಿತ್ತು. ನವಂಬರ್ 18 ರ ಮಧ್ಯರಾತ್ರಿ ಕಾರು ಮರಕ್ಕೆ ಡಿಕ್ಕಿಯಾಗಿತ್ತು. ಮರಕ್ಕೆ ಡಿಕ್ಕಿ ಹೊಡೆದ ಹಿನ್ನಲೆ‌ ಕಾರಿನಲ್ಲಿದ್ದ ಮಣಿಕಂಠ ರಾಠೋಡ್ ಗಾಯಗೊಂಡಿದ್ದ. ಗಾಯಗೊಂಡ ಮಣಿಕಂಠ ರಾಠೋಡ್ ತನ್ನ ಮತ್ತೊಂದು ಕಾರಿನಲ್ಲಿ ತೆರಳಿದ್ದ. ಇನ್ನು ಅಪಘಾತಗೊಂಡ ಇನ್ನೋವಾ ಕ್ರಿಸ್ಟಾ ಕಾರನ್ನು ಟೋಯಿಂಗ್ ಮೂಲಕ ರಾತ್ರೋ ರಾತ್ರಿ ಹೈದರಾಬಾದ್ ಶಿಫ್ಟ್ ಮಾಡಿಸಿದ್ದ.

ತನ್ನ ಮತ್ತೊಂದು ಕಾರಿನಲ್ಲಿ ಚಿತ್ತಾಪುರಕ್ಕೆ ಆಗಮಿಸಿದ್ದ ಮಣಿಕಂಠ ರಾಠೋಡ್, ಚಿತ್ತಾಪುರದಿಂದ ಕಲಬುರಗಿಗೆ ಬರುವಾಗ ಹಲ್ಲೆ ಮಾಡಲಾಗಿದೆ ಎಂದು ಕಥೆ ಕಟ್ಟಿದ್ದ. ತನ್ನದೆ ಕಾರಿನ ಗಾಜನ್ನ ಒಡೆದು ಹಾಕಿ ಏಳೆಂಟು ದುಷ್ಕರ್ಮಿಗಳಿಂದ ಹಲ್ಲೆಯಾಗಿದೆ ಎಂದು ಸೀನ್ ಕ್ರಿಯೇಟ್ ಮಾಡಿದ್ದಾನೆ. ಬಳಿಕ ಚಿತ್ತಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಆಗಿದ್ದ. ಆದ್ರೆ, ಮಣಿಕಂಠ ರಾಠೋಡ್ ಕಾರಿನಲ್ಲಿ ಬರುವಾಗ ಹಲ್ಲೆಯಾದ ಕಾರಿನಲ್ಲಿ ಒಂದೇ ಒಂದು ಹನಿ ರಕ್ತ ಬಿದ್ದಿರಲಿಲ್ಲ.

ಇನ್ನು ಮಣಿಕಂಠ ರಾಠೋಡ್ ಕಾಲ್ ರೇಕಾರ್ಡ್ ಹಿಸ್ಟರಿ ಟೆಕ್ನಿಕಲ್ ಎವಿಡೆನ್ಸ್ ಬೆನ್ನತ್ತಿದಾಗ ಹಲ್ಲೆಯ ಕಥೆ ಅಪಘಾತದ ಕಥೆಯಾಗಿ ಬಯಲಾಗಿದೆ. ಹಲ್ಲೆ ಪ್ರಕರಣ ಬೇಧಿದಸಿದ ಬಳಿಕ ಮಣಿಕಂಠ ರಾಠೋಡ್ ಜೊತೆಗಿದ್ದವನನ್ನ ವಿಚಾರಣೆ ನಡೆಸಿದಾಗ ಅಪಘಾತದ ಕಥೆ ಬಿಚ್ಚಿಟ್ಟಿದ್ದಾನೆ. ಇದರೊಂದಿಗೆ ಅಪಘಾತವನ್ನ ರಾಜಕೀಯವಾಗಿ ಬಳಸಿಕೊಳ್ಳಲು ಹೋಗಿ ಮಣಿಕಂಠ ರಾಠೋಡ್ ಸಿಕ್ಕಿಬಿದ್ದಿದ್ದಾನೆ.

ಕಲಬುರಗಿ ಎಸ್ಪಿ ಸ್ಪಷ್ಟನೆ

ಇನ್ನು ಈ ಬಗ್ಗೆ ಸ್ಪಷ್ಟಪಡಿಸಿದ ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಸಲು, ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರು ಶಹಬಾದ್ ತಾಲೂಕಿನ ಶಂಕರವಾಡಿ ಕ್ರಾಸ್ ಬಳಿ ಮಾರಣಾಂತೀಕ ಹಲ್ಲೆ ಆಗಿತ್ತು ದೂರು ನೀಡಿದ್ದರು‌. ಅವರ ದೂರಿನ್ವಯ ಶಹಬಾದ್ ಠಾಣೆಯಲ್ಲಿ 307 ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಆದ್ರೆ ಸಾಕ್ಷಿಗಳ ವಿಚಾರಣೆ ಬಳಿಕ ಅದು ಕೊಲೆಯತ್ನ ಅಲ್ಲ. ಬದಲಾಗಿ ಅಪಘಾತ ಆಗಿದೆ ಎನ್ನುವುದು ಗೊತ್ತಾಗಿದೆ.. ಗುರುಮಿಠಕಲ್ ಬಳಿ ಅಪಘಾತವಾಗಿತ್ತು. ಮರಕ್ಕೆ ಡಿಕ್ಕಿ ಹೊಡೆದು ರಾಠೋಡ್ ಗೆ ಗಾಯವಾಗಿತ್ತು. ಸದ್ಯ ಪ್ರಕರಣ ತನೀಖೆಯಲ್ಲಿದೆ. ಕೆಲ ಪ್ರತ್ಯೇಕ್ಷ ಸಾಕ್ಷಿದಾರರು,ಕೆಲ ಟೆಕ್ನಿಕಲ್ ಸಾಕ್ಷ್ಯ ಸಂಗ್ರಹಿಸಿದ್ದೆವೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:20 pm, Wed, 6 December 23

ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ