AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸದಸ್ಯನಿಂದ ಮುಸ್ಲಿಂ ಮಹಿಳೆಯರ ಅವಹೇಳನ ಆರೋಪ: ಕಾಂಗ್ರೆಸ್​​ ಸದಸ್ಯ ಆಕ್ರೋಶ

ಬಿಜೆಪಿ ಸದಸ್ಯ ಕೃಷ್ಣಾ ನಾಯಕ ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಪಾಲಿಕೆ ಸದಸ್ಯ ಅಯೂಬ್ ತಬ್ಬುಖಾನ್ ಕುರ್ಚಿ ಎತ್ತಿಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ನಡೆದ ಮಹಾನಗರ ಪಾಲಿಕೆ ಸಭೆಯಲ್ಲಿ ಘಟನೆ ನಡೆದಿದೆ. ಇದರಿಂದ ಕೆರಳಿದ ಅಯೂಬ್ ತಬ್ಬುಖಾನ್ ಕುರ್ಚಿ ಎತ್ತಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸದಸ್ಯನಿಂದ ಮುಸ್ಲಿಂ ಮಹಿಳೆಯರ ಅವಹೇಳನ ಆರೋಪ: ಕಾಂಗ್ರೆಸ್​​ ಸದಸ್ಯ ಆಕ್ರೋಶ
ಮಹಾನಗರ ಪಾಲಿಕೆ ಸಭೆಯಲ್ಲಿ ಗಲಾಟೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Dec 29, 2023 | 6:16 PM

Share

ಕಲಬುರಗಿ, ಡಿಸೆಂಬರ್​ 29: ಮಂಡ್ಯದಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್​​ಎಸ್​ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸಬೇಕು ಎಂದು ವಿವಿಧ ಸಂಘಟನೆಗಳು ಆಗ್ರಹಿಸಿವೆ. ಸದ್ಯ ಇದರ ಮಧ್ಯೆ ಕಲಬುರಗಿ ಮಹಾನಗರ ಪಾಲಿಕೆ ಸಭೆಯಲ್ಲಿ ಬಿಜೆಪಿ ಸದಸ್ಯ ಕೃಷ್ಣಾ ನಾಯಕ ಮುಸ್ಲಿಂ ಮಹಿಳೆಯರ (Muslim women) ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಪಾಲಿಕೆ ಸದಸ್ಯ ಅಯೂಬ್ ತಬ್ಬುಖಾನ್ ಕುರ್ಚಿ ಎತ್ತಿಹಾಕಿ ಆಕ್ರೋಶ ವ್ಯಕ್ತಪಡಿಸಿರುವಂತಹ ಘಟನೆ ನಡೆದಿದೆ.

ಪೌರ ಕಾರ್ಮಿಕ ನೇಮಕಾತಿ ಸಂಬಂಧ ಗಲಾಟೆ ಮಾಡಲಾಗಿದ್ದು, ಬಂಜಾರ ಸಮುದಾಯದ ಮಹಿಳೆಯರು ಕಸ ಗುಡಿಸುವುದನ್ನು ಕಂಡಿದ್ದೇವೆ. ಆದರೆ ಬುರ್ಖಾ ಹಾಕಿಕೊಂಡ ಮಹಿಳೆಯರು ಕಸ ಗುಡಿಸುವುದನ್ನು ನೋಡಿದ್ದೀರಾ ಎಂದು ಕೃಷ್ಣಾ ನಾಯಕ ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಮಹಿಳೆಯರ ವಿರುದ್ಧ ಅಕ್ಷೇಪಾರ್ಹ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್​ಐಆರ್

ಇದರಿಂದ ಕೆರಳಿದ ಅಯೂಬ್ ತಬ್ಬುಖಾನ್ ಕುರ್ಚಿ ಎತ್ತಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೃಷ್ಣಾ ನಾಯಕ ಕ್ಷೆಮೆ ಕೋರುವಂತೆ ಕೈ ಸದಸ್ಯರು ಪಟ್ಟು ಹಿಡಿದರು. ಬಳಕ ಮೇಯರ್ ಸೂಚನೆಯಂತೆ ಕೃಷ್ಣಾ ನಾಯಕ ಕ್ಷಮೆ ಕೋರಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಮಹಿಳೆಯರ ವಿರುದ್ದ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

ತಮ್ಮ ಸೇವೆಯನ್ನು ಖಾಯಂಗೊಳಿಸಬೇಕು ಎಂದು ಒತ್ತಾಯಿಸಿ ಪೌರಕಾರ್ಮಿಕರು ಹಲವು ದಿನಗಳಿಂ ಪ್ರತಿಭಟನೆ ನಡೆಸಿದ್ದು, ಈ ಕುರಿತಾಗಿ ಚರ್ಚೆ ಕೈಗೊಳ್ಳಲಾಗಿತ್ತು. 967 ಪೌರಕಾರ್ಮಿಕರನ್ನು ನೇಮಕ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಒಟ್ಟಾರೆ 1041 ಕಾರ್ಮಿಕರು ಕೆಲಸ ಮಾಡುತ್ತಿದ್ದು, ಎಲ್ಲರನ್ನೂ ಖಾಯಂ ಮಾಡಬೇಕು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:11 pm, Fri, 29 December 23

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ