AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ಬಿಜೆಪಿ ಸಂಕಲ್ಪ ಸಮಾವೇಶ; ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದ ಬಿ.ಎಸ್. ಯಡಿಯೂರಪ್ಪ

ಲೋಕಸಭಾ ಚುನಾವಣೆ(Lok sabha election) ಕಾವು ಜೋರಾಗಿದೆ. ಇದರ ಬೆನ್ನಲ್ಲೇ ಇಂದು(ಮಾ.16) ಕಲ್ಬುರ್ಗಿಯಲ್ಲಿ ಬಿಜೆಪಿ ಸಂಕಲ್ಪ ಸಮಾವೇಶ ಹಮ್ಮಿಕೊಂಡಿದ್ದು, ಈ ಮಧ್ಯೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (B. S. Yediyurappa), ‘ಕಲ್ಯಾಣ ಕರ್ನಾಟಕಕ್ಕೆ ಮೋದಿ ಅವರು ಹೆಚ್ಚು ಆಸಕ್ತಿಯನ್ನ ಕೊಟ್ಟಿದ್ದು, ಈ ಬಾರಿ ರಾಜ್ಯದಲ್ಲಿ 28 ಕ್ಕೆ 28 ಸ್ಥಾನ ಗೆಲ್ಲುತ್ತೇವೆ. ಈ ಮೂಲಕ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ ಎಂದರು.

ಕಲಬುರಗಿಯಲ್ಲಿ ಬಿಜೆಪಿ ಸಂಕಲ್ಪ ಸಮಾವೇಶ; ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದ ಬಿ.ಎಸ್. ಯಡಿಯೂರಪ್ಪ
ಬಿಎಸ್​ ಯಡಿಯೂರಪ್ಪ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Mar 16, 2024 | 3:04 PM

Share

ಕಲಬುರಗಿ, ಮಾ.16: ಲೋಕಸಭಾ ಚುನಾವಣೆ(Lok sabha election) ಕಾವು ಜೋರಾಗಿದೆ. ಇದರ ಬೆನ್ನಲ್ಲೇ ಇಂದು(ಮಾ.16) ಕಲ್ಬುರ್ಗಿಯಲ್ಲಿ ಬಿಜೆಪಿ ಸಂಕಲ್ಪ ಸಮಾವೇಶ ಹಮ್ಮಿಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಕಲಬುರಗಿಗೆ ಆಗಮಿಸಿದ್ದಾರೆ. ಈ ಮಧ್ಯೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (B. S. Yediyurappa), ‘ರಾಜ್ಯಕ್ಕೆ ಮೋದಿ ಅವರು ಸಾಕಷ್ಟು ಅನುದಾನ ಕೊಟ್ಟಿದ್ದು, ಕಲ್ಯಾಣ ಕರ್ನಾಟಕದಿಂದಲೇ ಪ್ರಧಾನಿ ಚುನಾವಣಾ ಪ್ರಚಾರ ಆರಂಭಿಸುತ್ತಿದ್ದಾರೆ ಎಂದರು.

ಕಾಂಗ್ರೆಸ್ ಮುಳುಗುತ್ತಿರುವ ಹಡಗು

ಕಲ್ಯಾಣ ಕರ್ನಾಟಕಕ್ಕೆ ಮೋದಿ ಹೆಚ್ಚು ಆಸಕ್ತಿಯನ್ನ ಕೊಟ್ಟಿದ್ದು, ಈ ಬಾರಿ ರಾಜ್ಯದಲ್ಲಿ 28 ಕ್ಕೆ 28 ಸ್ಥಾನ ಗೆಲ್ಲುತ್ತೇವೆ. ಈ ಮೂಲಕ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ ಎಂದರು. ಇದೇ ವೇಳೆ ‘ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಕೇವಲ ಪ್ರಚಾರಕ್ಕಾಗಿ ಕೆಲವರ ಕಾರ್ಯಕ್ರಮ ಘೋಷಣೆ ಮಾಡಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಗಾಳಿ ಬೀಸುತ್ತಿದೆ. ಯಾವುದೋ ಕಾರಣದಿಂದ ವಿಧಾನಸಭೆಯಲ್ಲಿ ಹಿನ್ನಡೆಯಾಗಿರಬಹುದು ಅಷ್ಟೇ, ರಾಜ್ಯದ 28 ಕ್ಷೇತ್ರದಲ್ಲಿ ಕಾಂಗ್ರೆಸ್ ಒಂದು ಸ್ಥಾನವನ್ನಾದರೂ ಗೆಲ್ಲಲಿ ನೋಡೋಣ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:ಮಲ್ಲಿಕಾರ್ಜುನ ಖರ್ಗೆ ಕೋಟೆಯಲ್ಲಿ ಮೋದಿ ರಣಕಹಳೆ; ಇಂದು ಕಲಬುರಗಿಯಲ್ಲಿ ಮೋದಿ ಮಿನಿ ರೋಡ್​ ಶೋ

ಈಶ್ವರಪ್ಪರನ್ನ ಯಡಿಯೂರಪ್ಪ ಕುಟುಂಬ ರಾಜಕೀಯವಾಗಿ ಮುಗಿಸ್ತಿದೆ-ಮುಕಡಪ್ಪ

ಇತ್ತ ಬೆಂಗಳೂರಿನ ಪ್ರೆಸ್ ಕ್ಲಬ್​ನಲ್ಲಿ ನಡೆಯುತ್ತಿರುವ ‌ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿಂದುಳಿದ ದಲಿತ ಸಮುದಾಯಗಳ ಒಕ್ಕೂಟದ ಮುಖಂಡ ಮುಕಡಪ್ಪ, ‘ಮಾಜಿ ಸಚಿವ ಈಶ್ವರಪ್ಪ ಪುತ್ರ ಲೋಕಸಭಾ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಯಡಿಯೂರಪ್ಪ ವಿರುದ್ದ ಕಿಡಿಕಾರಿದ್ದಾರೆ. ‘ಈಶ್ವರಪ್ಪರನ್ನ, ಯಡಿಯೂರಪ್ಪ ಕುಟುಂಬ ರಾಜಕೀಯವಾಗಿ ಮುಗಿಸುತ್ತಿದೆ ಎಂದಿದ್ದಾರೆ. ನಮಗೆ ಮೋದಿ ಅವರೇ ಗೆಲ್ಲಬೇಕು ಎಂಬ ಆಸೆಯಿದೆ. ಆದ್ರೆ, ಯಡಿಯೂರಪ್ಪ ಅವರ ಕೆಟ್ಟ ಬುದ್ದಿಯಿಂದ ಕುರುಬರಿಗೆ ಬಿಜೆಪಿಯಿಂದ ಅನ್ಯಾಯ ಆಗುತ್ತಿದೆ ಎಂದು ಯಡಿಯೂರಪ್ಪ ವಿರುದ್ದ ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?