AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ: ಆತ್ಮಹತ್ಯೆಯಲ್ಲ, ಕೊಲೆ ಎನ್ನುತ್ತಿರುವ ಕುಟುಂಬಸ್ಥರು

ಆತ ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿದ್ದ. ಮೊನ್ನೆ(ಮೇ.10) ನಡೆದ ವಿಧಾನಸಭೆ ಚುನಾವಣೆಯಲ್ಲಿ ತನ್ನ ಬೂತ್​ನ ಬಿಜೆಪಿ ಏಜೆಂಟ್ ಆಗಿ ಸಂಜೆಯವರೆಗೆ ಕೆಲಸ ಮಾಡಿದ್ದ. ಆದ್ರೆ, ರಾತ್ರಿ ಕಳೆದು ಬೆಳಗಾಗೋದರಲ್ಲಿ ಬಿಜೆಪಿ ಕಾರ್ಯಕರ್ತ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಇದು ಸಾವಲ್ಲ, ಬದಲಾಗಿ ಕೊಲೆ ಅಂತಿದ್ದಾರೆ ಕುಟುಂಬದವರು. ರಾಜಕೀಯ ಕಾರಣಕ್ಕೆ ಕೊಲೆ ನಡೆದಿರೋ ಶಂಕೆ ವ್ಯಕ್ತವಾಗಿದೆ.

ನೇಣು ಬಿಗಿದ ಸ್ಥಿತಿಯಲ್ಲಿ  ಬಿಜೆಪಿ ಕಾರ್ಯಕರ್ತನ ಶವ ಪತ್ತೆ: ಆತ್ಮಹತ್ಯೆಯಲ್ಲ, ಕೊಲೆ ಎನ್ನುತ್ತಿರುವ ಕುಟುಂಬಸ್ಥರು
ಚಿಂಚೋಳಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: May 12, 2023 | 11:15 AM

Share

ಕಲಬುರಗಿ: ರಾಜ್ಯ ವಿಧಾನಸಭೆ ಚುನಾವಣೆ(Karnataka Assembly Election) ಮೊನ್ನೆಯಷ್ಟೇ(ಮೇ.10) ಮತದಾನ ನಡೆದಿದ್ದು, ನಾಳೆ ಫಲಿತಾಂಶ ಹೊರಬಿಳಲಿದೆ. ಜಿಲ್ಲೆಯಲ್ಲಿ ಕೂಡ ಶಾಂತಿಯುತವಾಗಿ ಮತದಾನ ನಡೆದಿದೆ. ಆದ್ರೆ, ನಿನ್ನೆ(ಮೇ.10) ಚಿಂಚೋಳಿ (Chincholi) ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಡಾ. ಅವಿನಾಸ್ ಜಾಧವ್( Avinash Jadhav) ಪರ, ಸಲಗರ ಬಸಂತಪುರ ತಾಂಡಾದ ಬೂತ್​ನಲ್ಲಿ ಬಿಜೆಪಿ ಏಜೆಂಟ್ ಆಗಿದ್ದ ರಾಮು ರಾಠೋಡ್ ಎನ್ನುವ 45 ವರ್ಷದ ವ್ಯಕ್ತಿ ನಿನ್ನೆ(ಮೇ.11) ಮುಂಜಾನೆ ಶವವಾಗಿ ಪತ್ತೆಯಾಗಿದ್ದಾನೆ. ಹೌದು ರಾಮು ರಾಠೋಡ್, ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿದ್ದ ಇತ. ಅನೇಕ ಬಾರಿ ಮುಂಬೈಗೆ ಹೋಗಿ ಬಿಜೆಪಿ ಕಾರ್ಯಕರ್ತರನ್ನು ಸಂಪರ್ಕಿಸಿ ಅವರನ್ನು ಮತದಾನಕ್ಕೆ ಕರೆದುಕೊಂಡು ಬಂದಿದ್ದ. ಈ ಭಾಗದಲ್ಲಿ ಬಿಜೆಪಿಯ ಕಾರ್ಯಕ್ರಮದಲ್ಲಿ ಭಾಗಿಯಾಗುವದಲ್ಲದೆ, ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸುವ ಕೆಲಸ ಮಾಡಿದ್ದ. ನಿನ್ನೆ(ಮೇ.10) ಮುಂಜಾನೆಯಿಂದ ಬಿಜೆಪಿ ಏಜೆಂಟ್ ಆಗಿ ಕೆಲಸ ಮಾಡಿದ್ದ ರಾಮು ರಾಠೋಡ್, ಇವಿಎಮ್ ಮಷಿನ್ ಹೋಗೋವರಗೆ ತಾಂಡಾದ ಶಾಲೆಯಲ್ಲಿಯೇ ಇದ್ದ.

ಚುನಾವಣೆ ಕೆಲಸ ಮುಗಿದ ಮೇಲೆ ಮದ್ಯ ಸೇವನೆ ಮಾಡಿದ್ದ ರಾಮು, ತನ್ನ ಮಗಳಿಗೆ ಪೋನ್ ಮಾಡಿದ್ದನಂತೆ. ಮಗಳು ಮನೆಗೆ ಹೋಗು ಎಂದು ಹೇಳಿದಾಗ, ಮನೆಗೆ ಬಂದು ಮಲಗಿದ್ದನಂತೆ. ರಾತ್ರಿ 12 ಗಂಟೆ ಸಮಯದಲ್ಲಿ ಮನೆಗೆ ಬಂದಿದ್ದ ರಾಮು, ಮಧ್ಯರಾತ್ರಿ ಯಾರೋ ಪೋನ್ ಮಾಡಿದರೆಂದು ಮನೆಯಿಂದ ಹೊರಗೆ ಹೋಗಿದ್ದನಂತೆ. ಆದ್ರೆ, ಮತ್ತೆ ಮಗಳು ಪೋನ್ ಮಾಡಿದಾಗ, ಪೋನ್ ರಿಂಗ್ ಆದ್ರು, ಕೂಡ ಪೋನ್ ತೆಗೆದಿಲ್ಲ. ಹೀಗಾಗಿ ರಾಮು ರಾಠೋಡ್ ಪುತ್ರರು ಮತ್ತು ಸಂಬಂಧಿಗಳು ಸುತ್ತಮುತ್ತ ಹುಡುಕಾಡಿದ್ದಾರೆ. ಆದ್ರೆ, ಮುಂಜಾನೆ ರಾಮು ರಾಠೋಡ್, ತಾಂಡಾದ ಹೊರವಯದಲ್ಲಿರುವ ಕೃಷಿ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಇದನ್ನೂ ಓದಿ:Karnataka Assembly Election 2023: ಮತದಾನದಲ್ಲಿ ಈ ಜಿಲ್ಲೆಯೇ ರಾಜ್ಯಕ್ಕೆ ಪ್ರಥಮ. ಕಾರಣವೇನು?

ಆತ್ಮಹತ್ಯೆಯಲ್ಲ, ಕೊಲೆ ಎನ್ನುವ ಅನುಮಾನ

ಇನ್ನು ರಾಮು ರಾಠೋಡ್, ಕಾಲುಗಳು ನೆಲಕ್ಕೆ ತಾಗುತ್ತಿರುವುದರಿಂದ , ಚಿಕ್ಕ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವುದು ಮತ್ತು ಶವದ ಮೇಲೆ ಕೆಲವಡೇ ಗಾಯದ ಗುರುತುಗಳು ಇರೋದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಕುಟುಂಬದವರು, ರಾಮು ರಾಠೋಡ್​ನದ್ದು ಸಹಜ ಸಾವಲ್ಲ,, ಕೊಲೆಯೆಂದು ಆರೋಪಿಸಿದ್ದಾರೆ. ರಾಮು ರಾಠೋಡ್ ಕುಡಿಯುವುದನ್ನ ಬಿಟ್ಟಿದ್ದ. ಆದ್ರೆ, ಮೊನ್ನೆ(ಮೇ.10) ಆತನಿಗೆ ಯಾರೋ ಚೆನ್ನಾಗಿ ಕುಡಿಸಿದ್ದಾರೆ. ರಾತ್ರಿ ಸಮಯದಲ್ಲಿ ಕರೆದುಕೊಂಡು ಹೋಗಿ ಕೊಲೆ ಮಾಡಿ, ನಂತರ ಮರಕ್ಕೆ ನೇಣು ಹಾಕಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ನಮ್ಮ ತಂದೆ ಆತ್ಮಹತ್ಯೆ ಮಾಡಿಕೊಳ್ಳುವಂತಹ ವ್ಯಕ್ತಿಯಾಗಿರಲಿಲ್ಲ, ಅನೇಕರಿಗೆ ಬುದ್ದಿ ಹೇಳುತ್ತಿದ್ದ. ಇನ್ನು ಆತ ಯಾರ ಜೊತೆ ಕೂಡ ವೈಷಮ್ಯ ಇರಲಿಲ್ಲ. ಆದ್ರೆ, ರಾಜಕೀಯ ಕಾರಣಕ್ಕೆ ಯಾರಾದ್ರು, ಕೊಲೆ ಮಾಡಿರಬಹುದೆಂದು ಆರೋಪಿಸುತ್ತಿದ್ದಾರೆ. ಇನ್ನು ಮಾಹಿತಿ ತಿಳಿದ ನಂತರ ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಆಗಮಿಸಿ ಪರಿಶೀಲನೆ ನಡೆಸಿದ್ರು. ಸಾವಿನ ಬಗ್ಗೆ ಅನುಮಾನವಿದ್ದು, ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

ಸದ್ಯ ರಾಮು ಸಾವಿನ ಬಗ್ಗೆ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ರಾಮು ಸಾವಿನ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ತನಿಖೆ ನಂತರವೇ, ರಾಮು ರಾಠೋಡ್​ನದ್ದು ಕೊಲೆಯಾ ಅಥವಾ ಆತ್ಮಹತ್ಯೆಯಾ ಅನ್ನೋದು ಗೊತ್ತಾಗಲಿದೆ. ಆದ್ರೆ, ಚುನಾವಣೆ ನಡೆದ ದಿನವೇ, ಬಿಜೆಪಿ ಕಾರ್ಯಕರ್ತನ ಸಾವು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದ್ದು, ಈ ಬಗ್ಗೆ ಪೊಲೀಸರು ನಿಸ್ಪಕ್ಷಪಾತವಾಗಿ ತನಿಖೆ ನಡೆಸಬೇಕಿದೆ.

ವರದಿ: ಸಂಜಯ್ ಟಿವಿ9 ಕಲಬುರಗಿ

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ