AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ

ಕಲಬುರಗಿಯ ಕರುಣೇಶ್ವರ ನಗರದಲ್ಲಿರುವ ಚಂದ್ರಕಾಂತ ಪಾಟೀಲ್ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಮಧ್ಯಾಹ್ನ 1 ಗಂಟೆಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಶಾಲಾ ಸಿಬ್ಬಂದಿ ತಕ್ಷಣ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದರು.ಪೊಲೀಸರು ಮತ್ತು ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದ್ದಾರೆ. ಬೆದರಿಕೆ ಇಮೇಲ್ ತಮಿಳುನಾಡಿನಿಂದ ಬಂದಿದೆ ಎಂದು ಶಂಕಿಸಲಾಗಿದೆ.

ಕಲಬುರಗಿಯ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ
ಕಲಬುರಗಿಯ ಖಾಸಗಿ ಶಾಲೆ ಬಾಂಬ್ ಬೆದರಿಕೆ ಸಂದೇಶ
ದತ್ತಾತ್ರೇಯ ಪಾಟೀಲ್​
| Edited By: ವಿವೇಕ ಬಿರಾದಾರ|

Updated on:Feb 04, 2025 | 12:59 PM

Share

ಕಲಬುರಗಿ, ಫೆಬ್ರವರಿ 04: ಕಲಬುರಗಿಯ (Kalaburagi) ಕರುಣೇಶ್ವರ ನಗರದಲ್ಲಿರುವ ವಿಧಾನಪರಿಷತ್ ಸದಸ್ಯ ಬಿಜಿ ಪಾಟೀಲ್ ಒಡೆತನದ ಚಂದ್ರಕಾಂತ ಪಾಟೀಲ್ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಮಧ್ಯಾಹ್ನ ಒಂದು ಗಂಟೆಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ‌ ಹಾಕಲಾಗಿದೆ. ಸಂದೇಶ ಕಂಡ ಕೂಡಲೆ ಶಾಲೆಯ ಸಿಬ್ಬಂದಿ ಮಕ್ಕಳನ್ನು ಮನೆಗೆ ಕಳುಹಿಸಿದ್ದಾರೆ. ಅಶೋಕ ನಗರ ಠಾಣೆ ಪೊಲೀಸರು ಮತ್ತು ಬಾಂಬ್ ಸ್ಕ್ವಾಡ್​ ಶಾಲೆಗೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಬೆದರಿಕೆ ಸಂದೇಶ ತಮಿಳುನಾಡಿನಿಂದ ಬಂದಿದೆ ಎಂದು ಶಂಕಿಸಲಾಗಿದೆ.

ವಿಚಾರ ತಿಳಿಯುತ್ತಿದ್ದಂತೆ ಶಾಲೆಗೆ ಕಲಬುರಗಿ ನಗರ ಪೋಲಿಸ್ ಆಯುಕ್ತ ಡಾ.ಶರಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಲೆಯಲ್ಲಿ ಬಾಂಬ್​​ ನಿಷ್ಕ್ರಿಯ ದಳ, ಶ್ವಾನದಳ​​ ಪರಿಶೀಲನೆ ನಡೆಸಿದೆ. ಮೇಲ್​​ನಲ್ಲಿ ತಮಿಳುನಾಡಿನ ರಾಜಕೀಯದ ಬಗ್ಗೆ ಉಲ್ಲೇಖಿಸಲಾಗಿದೆ. ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡು ತನಿಖೆ ಮಾಡುತ್ತೇವೆ. ತಮಿಳು ಮೇಲ್ ಐಡಿಯಿಂದ ಇ-ಮೇಲ್ ಸಂದೇಶ ಬಂದಿದೆ. ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:32 pm, Tue, 4 February 25

Follow Us
ಬಿಗ್ ಬಾಸ್ ಆಟ ಆರಂಭ ಆಗೋದಕ್ಕೂ ಮೊದಲೇ ಶುರುವಾಯ್ತು ಜಗಳ
ಬಿಗ್ ಬಾಸ್ ಆಟ ಆರಂಭ ಆಗೋದಕ್ಕೂ ಮೊದಲೇ ಶುರುವಾಯ್ತು ಜಗಳ
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!