ಕಲಬುರಗಿಯ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ

ಕಲಬುರಗಿಯ ಕರುಣೇಶ್ವರ ನಗರದಲ್ಲಿರುವ ಚಂದ್ರಕಾಂತ ಪಾಟೀಲ್ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಮಧ್ಯಾಹ್ನ 1 ಗಂಟೆಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಶಾಲಾ ಸಿಬ್ಬಂದಿ ತಕ್ಷಣ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದರು.ಪೊಲೀಸರು ಮತ್ತು ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದ್ದಾರೆ. ಬೆದರಿಕೆ ಇಮೇಲ್ ತಮಿಳುನಾಡಿನಿಂದ ಬಂದಿದೆ ಎಂದು ಶಂಕಿಸಲಾಗಿದೆ.

ಕಲಬುರಗಿಯ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ
ಕಲಬುರಗಿಯ ಖಾಸಗಿ ಶಾಲೆ ಬಾಂಬ್ ಬೆದರಿಕೆ ಸಂದೇಶ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ವಿವೇಕ ಬಿರಾದಾರ

Updated on:Feb 04, 2025 | 12:59 PM

ಕಲಬುರಗಿ, ಫೆಬ್ರವರಿ 04: ಕಲಬುರಗಿಯ (Kalaburagi) ಕರುಣೇಶ್ವರ ನಗರದಲ್ಲಿರುವ ವಿಧಾನಪರಿಷತ್ ಸದಸ್ಯ ಬಿಜಿ ಪಾಟೀಲ್ ಒಡೆತನದ ಚಂದ್ರಕಾಂತ ಪಾಟೀಲ್ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಮಧ್ಯಾಹ್ನ ಒಂದು ಗಂಟೆಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ‌ ಹಾಕಲಾಗಿದೆ. ಸಂದೇಶ ಕಂಡ ಕೂಡಲೆ ಶಾಲೆಯ ಸಿಬ್ಬಂದಿ ಮಕ್ಕಳನ್ನು ಮನೆಗೆ ಕಳುಹಿಸಿದ್ದಾರೆ. ಅಶೋಕ ನಗರ ಠಾಣೆ ಪೊಲೀಸರು ಮತ್ತು ಬಾಂಬ್ ಸ್ಕ್ವಾಡ್​ ಶಾಲೆಗೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಬೆದರಿಕೆ ಸಂದೇಶ ತಮಿಳುನಾಡಿನಿಂದ ಬಂದಿದೆ ಎಂದು ಶಂಕಿಸಲಾಗಿದೆ.

ವಿಚಾರ ತಿಳಿಯುತ್ತಿದ್ದಂತೆ ಶಾಲೆಗೆ ಕಲಬುರಗಿ ನಗರ ಪೋಲಿಸ್ ಆಯುಕ್ತ ಡಾ.ಶರಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಲೆಯಲ್ಲಿ ಬಾಂಬ್​​ ನಿಷ್ಕ್ರಿಯ ದಳ, ಶ್ವಾನದಳ​​ ಪರಿಶೀಲನೆ ನಡೆಸಿದೆ. ಮೇಲ್​​ನಲ್ಲಿ ತಮಿಳುನಾಡಿನ ರಾಜಕೀಯದ ಬಗ್ಗೆ ಉಲ್ಲೇಖಿಸಲಾಗಿದೆ. ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡು ತನಿಖೆ ಮಾಡುತ್ತೇವೆ. ತಮಿಳು ಮೇಲ್ ಐಡಿಯಿಂದ ಇ-ಮೇಲ್ ಸಂದೇಶ ಬಂದಿದೆ. ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:32 pm, Tue, 4 February 25

ರಕ್ಷಿತಾರನ್ನು ಮದುವೆಯಾದಾಗ ಅಂಬರೀಶ್ ಹೇಳಿದ್ದನ್ನು ಮೆಲಕು ಹಾಕಿದ ಪ್ರೇಮ್
ರಕ್ಷಿತಾರನ್ನು ಮದುವೆಯಾದಾಗ ಅಂಬರೀಶ್ ಹೇಳಿದ್ದನ್ನು ಮೆಲಕು ಹಾಕಿದ ಪ್ರೇಮ್
ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಜನ ಸಾವು
ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಜನ ಸಾವು
ಅಪ್ಪನನ್ನು ಇಷ್ಟಪಡುವ ಕಾರಣಕ್ಕೆ ಮಗನನ್ನೂ ಇಷ್ಟಪಡುವ ಅಗತ್ಯವಿಲ್ಲ: ನಿರಾಣಿ
ಅಪ್ಪನನ್ನು ಇಷ್ಟಪಡುವ ಕಾರಣಕ್ಕೆ ಮಗನನ್ನೂ ಇಷ್ಟಪಡುವ ಅಗತ್ಯವಿಲ್ಲ: ನಿರಾಣಿ
ಆಯತಪ್ಪಿ ಬಿದ್ದಿದ್ದ ಬೈಕ್​ ಸವಾರ: ಗಾಯಾಳುಗೆ ನೆರವಾದ ಸಂತೋಷ್ ಲಾಡ್
ಆಯತಪ್ಪಿ ಬಿದ್ದಿದ್ದ ಬೈಕ್​ ಸವಾರ: ಗಾಯಾಳುಗೆ ನೆರವಾದ ಸಂತೋಷ್ ಲಾಡ್
ವಿರೋಧಪಕ್ಷಗಳ ಟೀಕೆಗೆ ಗುರಿಯಾಗದ ಬಜೆಟ್ ಮಂಡನೆ ಮುಖ್ಯಮಂತ್ರಿಗೆ ಸಾಧ್ಯವೇ?
ವಿರೋಧಪಕ್ಷಗಳ ಟೀಕೆಗೆ ಗುರಿಯಾಗದ ಬಜೆಟ್ ಮಂಡನೆ ಮುಖ್ಯಮಂತ್ರಿಗೆ ಸಾಧ್ಯವೇ?
ದೇವೇಗೌಡ ತಮ್ಮ ಮಕ್ಕಳ ಬಗ್ಗೆ ಮಾತಾಡಿದ್ದೆಲ್ಲ ಗೊತ್ತಿದೆ: ಚಲುವರಾಯಸ್ಚಾಮಿ
ದೇವೇಗೌಡ ತಮ್ಮ ಮಕ್ಕಳ ಬಗ್ಗೆ ಮಾತಾಡಿದ್ದೆಲ್ಲ ಗೊತ್ತಿದೆ: ಚಲುವರಾಯಸ್ಚಾಮಿ
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್