AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ಹೆಲಿಕಾಪ್ಟರ್​​​ ಲ್ಯಾಂಡಿಂಗ್ ವೇಳೆ ಹಾರಿಬಂದ ಪ್ಲಾಸ್ಟಿಕ್ ಚೀಲಗಳು: ಕೆಲ ಕಾಲ ಆತಂಕ ಸೃಷ್ಟಿ

ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪವಾಗಿರುವ ಘಟನೆ ಜಿಲ್ಲೆಯ ಜೇವರ್ಗಿ ಪಟ್ಟಣ ಹೊರವಲಯದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್​​ನಲ್ಲಿ ನಡೆದಿದೆ.

ವಿವೇಕ ಬಿರಾದಾರ
|

Updated on:Mar 06, 2023 | 2:04 PM

Share

ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ (BS Yediyurappa) ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪವಾಗಿರುವ ಘಟನೆ ಜಿಲ್ಲೆಯ ಜೇವರ್ಗಿ ಪಟ್ಟಣ ಹೊರವಲಯದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್​​ನಲ್ಲಿ ನಡೆದಿದೆ. ಜೇವರ್ಗಿಯಲ್ಲಿ ನಡೆಯುತ್ತಿರವ ವಿಜಯ ಸಂಕಲ್ಪ ರಥಯಾತ್ರೆ ಸಂಬಂಧ ಯಡಿಯೂರಪ್ಪ ಜೇವರ್ಗಿ ಆಗಮಿಸಿದ್ದಾರೆ. ಹೆಲಿಕಾಪ್ಟರ್​ ಮೂಲಕ ಬಂದ ಬಿಎಸ್​ ಯಡಿಯೂರಪ್ಪ ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಹೆಲಿಪ್ಯಾಡ್​​ನಲ್ಲಿ ಕಾಪ್ಟರ್​ ಲ್ಯಾಂಡ್​​ ಆಗುವ ವೇಳೆ  ಪ್ಲಾಸ್ಟಿಕ್ ಚೀಲಗಳು ಹಾರಿಬಂದಿವೆ. ತಕ್ಷಣ ಎಚ್ಚೆತ್ತ ಪೈಲೆಟ್‌ ಹೆಲಿಕಾಪ್ಟರ್​ನ್ನು ಲ್ಯಾಂಡ್​ ಮಾಡದೆ ಬೇರೆಡೆ ತೆಗೆದುಕೊಂಡು ಹೋಗಿದ್ದಾರೆ. ಇದರಿಂದ ಕ್ಷಣಕಾಲ ಆತಂಕ ಸೃಷ್ಟಿಯಾಗಿತ್ತು.

ಹೆಲಿಪ್ಯಾಡ್ ಸುತ್ತ ಜಮೀನಿನನಲ್ಲಿ ಹಾಕಲಾಗಿರೋ ಪ್ಲಾಸ್ಟಿಕ್ ಚೀಲಗಳನ್ನು ಹಾಕಿದ್ದರು. ಲ್ಯಾಂಡಿಂಗ್ ವೇಳೆ ಹೆಲಿಕಾಪ್ಟರ್ ಪ್ಲಾಸ್ಟಿಕ್ ಚೀಲಗಳು ಹಾರಿ ಬಂದಿವೆ. ಕೂಡಲೆ ಎಚ್ಚತ್ತ ಪೈಲೆಟ್ ಹೆಲಿಕಾಪ್ಟರ್​​ನ್ನು ಟೇಕ್​ ಆಫ್​​ ಮಾಡಿದ್ದಾರೆ. ನಂತರ  ಒಂದೆರಡು ಸುತ್ತು ಹೆಲಿಕಾಪ್ಟರ್​ನ್ನು ಆಕಾಶದಲ್ಲಿ ಹಾರಾಟ ನಡೆಸಿದ್ದಾರೆ. ಈ ವೇಳೆ  ಪೊಲೀಸರು ಪ್ಲಾಸ್ಟಿಕ್ ಚೀಲಗಳನ್ನು ತೆರವುಗೊಳಿಸಿದ್ದಾರೆ. ಬಳಿಕ ಪೈಲೆಟ್ ಲ್ಯಾಂಡ್​ ಮಾಡಿದ್ದಾರೆ. ಹೆಲಿಕ್ಯಾಪ್ಟರ್ ಮೇಲೆ ಪ್ಲಾಸ್ಟಿಕ್ ಚೀಲಗಳು ತೂರಿಬಂದಿದ್ದರಿಂದ ಅಧಿಕಾರಿಗಳು ಮತ್ತು ಪೊಲೀಸರು ಕಕ್ಕಾಬಿಕ್ಕಿಯಾಗಿದ್ದಾರೆ.    ​​

Published On - 12:51 pm, Mon, 6 March 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?