AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಫೇಮಸ್ ಜಾತ್ರೆಗಳೇ ಈ ಗ್ಯಾಂಗ್​ನ ಟಾರ್ಗೆಟ್: ಈ ಖದೀಮರ ತಂಡ ಏನ್ ಮಾಡುತ್ತೆ ಗೊತ್ತಾ?

ಕಲಬುರಗಿಯ ನಾಲವಾರದ ಕೋರಿ ಸಿದ್ದೇಶ್ವರ ಜಾತ್ರೆಯಲ್ಲಿ ನಡೆದ ಕಾರು ಕಳ್ಳತನ ಪ್ರಕರಣದಲ್ಲಿ ಒಬ್ಬ ಖದೀಮನನ್ನು ವಾಡಿ ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್ ರಾಜ್ಯದ ಪ್ರಸಿದ್ಧ ಜಾತ್ರೆಗಳನ್ನು ಗುರಿಯಾಗಿಸಿಕೊಂಡು ಕಾರುಗಳನ್ನು ಕಳವು ಮಾಡುತ್ತಿತ್ತು. ಬಂಧಿತ ಆರೋಪಿ ಮಹಾರಾಷ್ಟ್ರ ಮೂಲದವನಾಗಿದ್ದು, ಇನ್ನೋವಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ರಾಜ್ಯದ ಫೇಮಸ್ ಜಾತ್ರೆಗಳೇ ಈ ಗ್ಯಾಂಗ್​ನ ಟಾರ್ಗೆಟ್: ಈ ಖದೀಮರ ತಂಡ ಏನ್ ಮಾಡುತ್ತೆ ಗೊತ್ತಾ?
ರಾಜ್ಯದ ಫೇಮಸ್ ಜಾತ್ರೆಗಳೇ ಈ ಗ್ಯಾಂಗ್​ನ ಟಾರ್ಗೆಟ್: ಈ ಖದೀಮರ ತಂಡ ಏನ್ ಮಾಡುತ್ತೆ ಗೊತ್ತಾ?
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Feb 09, 2025 | 3:19 PM

Share

ಕಲಬುರಗಿ, ಫೆಬ್ರವರಿ 09: ಜಾತ್ರೆಯಲ್ಲಿ ಪಾರ್ಕಿಂಗ್ ಮಾಡಿರುವ ಕಾರ್​​ಗಳನ್ನು ಕಳ್ಳತನ (car theft) ಮಾಡುತ್ತಿದ್ದ ಗ್ಯಾಂಗ್​​ನ ಓರ್ವ ಖದೀಮನನ್ನು ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣ ಪೊಲೀಸರು ಬಂಧಿಸಿದ್ದಾರೆ. ರಾಜ್ಯದ ಫೇಮಸ್ ಜಾತ್ರೆಗಳನ್ನೇ ಈ ಗ್ಯಾಂಗ್​ ಟಾರ್ಗೆಟ್ ಮಾಡುತ್ತಿತ್ತು. ಅದೇ ರೀತಿಯಾಗಿ ಜ.30 ರಂದು ಕಲಬುರಗಿಯ ನಾಲವಾರದ ಕೋರಿ ಸಿದ್ದೇಶ್ವರ ಜಾತ್ರೆಯಲ್ಲಿ ಇನ್ನೋವಾ ಕಾರು ಕಳ್ಳತನ ಮಾಡಿದ್ದರು. ಪ್ರಕರಣ ಬೆನ್ನು ಹತ್ತಿಹೋದ ಪೊಲೀಸರಿಗೆ ಖದೀಮರ ಅಸಲಿ ವಿಚಾರ ತಿಳಿದಿದೆ.

ಸದ್ಯ ಮಹಾರಾಷ್ಟ್ರ ಮೂಲದ ವಿಠ್ಠಲ್ ಲಷ್ಕರೆ ಎಂಬಾತನನ್ನು ಬಂಧಿಸಲಾಗಿದ್ದು, ಇನ್ನುಳಿದ ನಾಲ್ವರಿಗಾಗಿ ಖಾಕಿ ಪಡೆ ಶೋಧ ನಡೆಸಿದೆ. ಬಂಧಿತನಿಂದ ಇನ್ನೋವಾ ಕಾರು ವಶಕ್ಕೆ ಪಡೆಯಲಾಗಿದೆ. ಉಳಿದ ಆರೋಪಿಗಳು ಹಾಗೂ ಕದ್ದ ಕಾರುಗಳ ಬಗ್ಗೆ ತನಿಖೆ ನಡೆಯುತ್ತಿದೆ. ಇಷ್ಟೇ ಅಲ್ಲದೆ ಇನ್ನು ಹಲವು ಕಾರು ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಆನೇಕಲ್: ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು

ಪ್ರಸಿದ್ಧ ಜಾತ್ರಾ ಮಹೋತ್ಸವಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಗ್ಯಾಂಗ್, ಜಾತ್ರೆಗೆ ಬಂದಿದ್ದ ಜನರ ಕಾರ್ ಗಳನ್ನೆ ಕಳ್ಳತನ ಮಾಡುತ್ತಿದ್ದರು. ಕಾರ್ ಕೀಗಳನ್ನ ಬೆಲ್ಟ್​ಗೆ ಹಾಕುವವರನ್ನು ಹಿಂಬಾಲಿಸುತ್ತಿದ್ದ ಗ್ಯಾಂಗ್, ಬಳಿಕ ಕೀ ಎಗರಿಸಿ ಕಾರು ಕಳ್ಳತನ ಮಾಡುತ್ತಿದ್ದರು.

ಬದಾಮಿ ಬನಶಂಕರಿ ದೇವಿ ಜಾತ್ರೆಯಲ್ಲಿ ಎರಡು ಕಾರ್, ಎಮ್ಮಿಗನೂರು ಜಾತ್ರೆಯಲ್ಲಿ ಒಂದು ಕಾರು ಕದ್ದು ಪಾರಾರಿಯಾಗಿದ್ದಾರೆ. ಅಲ್ಲದೇ ಮುಂದಿನ ಜಾತ್ರೆಗಳ ಬಗ್ಗೆ ತಮ್ಮ ಡೈರಿಯಲ್ಲಿ ಬರೆದುಕೊಂಡಿದ್ದರು. ಇನ್ನು ಕದ್ದ ಕಾರ್​ಗಳನ್ನ ಅಕ್ರಮ ಚಟುವಟಿಕೆಗೆ ಬಳಸುತ್ತಿದ್ದರು. ಸದ್ಯ ವಾಡಿ ಪೊಲೀಸರಿಂದ ಓರ್ವನ ಬಂಧನ ಮಾಡಲಾಗಿದೆ.

ಬುಕ್ಕಾಪಟ್ಟಣದಲ್ಲಿ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ದಾಳಿ: ಓರ್ವನ ಬಂಧನ

ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ದಾಳಿ ಕೊರಟಗೆರೆ ಪೊಲೀಸರು ದಾಳಿ ಮಾಡಿರುವಂತಹ ಘಟನೆ ತುಮಕೂರು‌ ಜಿಲ್ಲೆಯ ಕೊರಟಗೆರೆ ತಾಲೂಕಿನ ಬುಕ್ಕಾಪಟ್ಟಣದಲ್ಲಿ ನಡೆದಿದೆ. ಕೋಳಿ ಶೆಡ್​​ನಲ್ಲಿ ಗ್ಯಾಸ್ ರೀಫಿಲ್ಲಿಂಗ್ ದಂಧೆ ನಡೀತಿತ್ತು. ವಕೀಲರು, ಪತ್ರಕರ್ತರ ನಕಲಿ ಐಡಿಗಳನ್ನ ಬಳಸಿ ಕೃತ್ಯವೆಸಗಲಾಗಿದೆ.

ಇದನ್ನೂ ಓದಿ: ಕಾಶಿಯಲ್ಲಿ ನದಿಯಲ್ಲಿ ಮುಳುಗಿ ಬಾಗಲಕೋಟೆ ಮೂಲದ ವ್ಯಕ್ತಿ ಸಾವು

ದಾಳಿ‌ ವೇಳೆ 138 ಗ್ಯಾಸ್ ಸಿಲಿಂಡರ್‌ಗಳು ಸೀಜ್ ಮಾಡಲಾಗಿದೆ. ಆರೋಪಿ ರಘು ಎಂಬುವವನನ್ನ ಪೊಲೀಸರು ಬಂಧಿಸಿದ್ದಾರೆ. ರೀಫಿಲ್ಲಿಂಗ್​​​ಗೆ ಬಳಸುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ