AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗಾಗಿ ಮನವಿ ಮಾಡಿದ ಮಹಿಳೆಯನ್ನು ಮಂಚಕ್ಕೆ ಕರೆದ ಗ್ರಾಮ ಪಂಚಾಯ್ತಿ ಸದಸ್ಯ

ಸ್ವಂತ ಸೂರಿಲ್ಲದವರಿಗೆ ಸೂರು ಕಲ್ಪಿಸುವ ನಾನಾ ಯೋಜನೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನುಷ್ಠಾನಕ್ಕೆ ತರುತ್ತಲೇ ಇದ್ದು, ಇಂತಹ ಅನೇಕ ಯೋಜನೆಗಳು ಇಂದಿಗೂ ಅರ್ಹರಿಗೆ ತಲುಪಲಾರದಂತಹ ಸ್ಥಿತಿ ಒದಗಿದೆ. ಸೂರಿಲ್ಲದವರಿಗೆ ಆಶ್ರಯ ಮನೆ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆಗಳಡಿಯಲ್ಲಿ ಕಡುಬಡವರಿಗೆ ಮನೆ ಮಂಜೂರು ಮಾಡಲಾಗುತ್ತೆ. ಆದ್ರೆ, ಇಲ್ಲೋರ್ವ ಗ್ರಾಮ ಪಂಚಾಯಿತಿ ಸದಸ್ಯನೋರ್ವ, ಮನೆಗಾಗಿ ಮನವಿ ಮಾಡಿದ ಮಹಿಳೆಯನ್ನ ಮಂಚಕ್ಕೆ ಕರೆದಿರುವ ಆರೋಪ ಕೇಳಿಬಂದಿದೆ.

ಮನೆಗಾಗಿ ಮನವಿ ಮಾಡಿದ ಮಹಿಳೆಯನ್ನು ಮಂಚಕ್ಕೆ ಕರೆದ ಗ್ರಾಮ ಪಂಚಾಯ್ತಿ ಸದಸ್ಯ
Neelakantha
ದತ್ತಾತ್ರೇಯ ಪಾಟೀಲ್​
| Edited By: |

Updated on: Mar 13, 2025 | 3:11 PM

Share

ಕಲಬುರಗಿ, (ಮಾರ್ಚ್​ 13): ಸರ್ಕಾರದ ವತಿಯಿಂದ ನೀಡಲಾಗುವ ಮನೆ ಕೇಳಲುಬಂದ ಮಹಿಳೆಗೆ ಗ್ರಾಮ ಪಂಚಾಯಿತಿ ಸದಸ್ಯ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮದಲ್ಲಿ ನಡೆದಿದೆ. ಮನೆ ಕೇಳಲು ಬಂದ ಮಹಿಳೆಗೆ ಮರಗುತ್ತಿ ಗ್ರಾಮ ಪಂಚಾಯತಿ ಸದಸ್ಯ ನೀಲಕಂಠ ರಾಠೋಡ್ ಮಂಚಕ್ಕೆ ಕರೆದಿದ್ದಾನೆ. ಪಂಚಾಯತಿ ಮನೆ ಮಾಡಿಸಿಕೊಡುತ್ತೇನೆ ನನ್ನ ಜೊತೆ ಮಲಕೋ. ನೀನು ಬರಲಿಲ್ಲ ಅಂದ್ರೆ ನಿನ್ನ ಮಗಳನ್ನಾದರೂ ಕಳಿಸು ಎಂದಿದ್ದಾನೆ. ಈ ಸಂಬಂಧ ಮಹಿಳೆ, ನೀಲಕಂಠ ರಾಠೋಡ್ ವಿರುದ್ಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ಮಳಸಾಪುರ ಗ್ರಾಮದ ಮಹಿಳೆ ಮನೆ ಮಾಡಿಸಿಕೊಡಿ ಎಂದು ಗ್ರಾಮ ಪಂಚಾಯಿತಿ ಸದಸ್ಯ ನೀಲಕಂಠಗೆ ಮನವಿ ಮಾಡಿದ್ದಾಳೆ. ಆಗ ನೀಲಕಂಠ, ಪಂಚಾಯತಿಯಿಂದ ಮನೆ ಮಾಡಿಸಿಕೊಡಲು ದುಡ್ಡಿಗೆ ಬೇಡಿಕೆ ಇಟ್ಟಿದ್ದಾನೆ. ದುಡ್ಡು ಕೊಡಲು ಆಗದಿದ್ದರೆ ನನ್ನ ಜೊತೆ ಮಲಕೋ ಎಂದು ಒತ್ತಾಯ ಮಾಡಿದ್ದಾನೆ. ಅಲ್ಲದೇ ನೀನು ಬರಲಿಲ್ಲ ಅಂದ್ರೆ ನಿನ್ನ ಮಗಳನ್ನ ಕಳುಹಿಸು ಎಂದಿದ್ದಾನೆ. ಹೀಗಂತ ಮಹಿಳೆ ಆರೋಪಿಸಿದ್ದಾಳೆ.

ಇದನ್ನೂ ಓದಿ: ಹನಿಟ್ರ್ಯಾಪ್ ಖೆಡ್ಡಾಕ್ಕೆ ಬಿದ್ದ ಬಿಜೆಪಿ ಮುಖಂಡ: ಬೆತ್ತಲೆ ವಿಡಿಯೋ..20 ಲಕ್ಷಕ್ಕೆ ಡಿಮ್ಯಾಂಡ್‌.. ಮಾಯಾಂಗನೆ ಲಾಕ್

ಇದರಿಂದ ಆಕ್ರೋಶಗೊಂಡ ಮಹಿಳೆ, ಮಳಸಾಪುರ ಗ್ರಾಮದಿಂದ ಮರಗುತ್ತಿ ಪಂಚಾಯತಿಗೆ ಆಯ್ಕೆಯಾಗಿರುವ ನೀಲಕಂಠನ ವಿರುದ್ಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನ ಮೇರೆಗ ಪೊಲೀಸರು ಬಿಎನ್​ಎಸ್ ಕಾಯ್ದೆ 75, 78,79 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ
Image
ಕರ್ನಾಟಕದಲ್ಲಿ ಮತ್ತೊಂದು ಹೀನ ಕೃತ್ಯ: ಮಗಳನ್ನೇ ಗರ್ಭಿಣಿ ಮಾಡಿದ ನೀಚ ತಂದೆ
Image
ಬಾಲಕಿಯನ್ನು ಪುಸಲಾಯಿಸಿ ಗರ್ಭಿಣಿ ಮಾಡಿದ 2 ಮಕ್ಕಳ ತಂದೆ ಅರೆಸ್ಟ್
Image
ಬೆಳಗಾವಿ ನರ್ಸಿಂಗ್ ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು
ಈದ್ ಮಿಲಾದ್ ಆಚರಣೆ ವೇಳೆ ಗಲಾಟೆ: ಗೃಹ ಸಚಿವ ಖರ್ಗೆ ಖಡಕ್ ಎಚ್ಚರಿಕೆ
ಈದ್ ಮಿಲಾದ್ ಆಚರಣೆ ವೇಳೆ ಗಲಾಟೆ: ಗೃಹ ಸಚಿವ ಖರ್ಗೆ ಖಡಕ್ ಎಚ್ಚರಿಕೆ
4 ವರ್ಷದೊಳಗೆ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್
4 ವರ್ಷದೊಳಗೆ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್
ಗರ್ಭಿಣಿ ಮಹಿಳಾ ಕಾನ್ಸ್ಟೇಬಲ್ ಮೇಲೆ ರಾಡ್ ನಿಂದ ಹಲ್ಲೆ: ಆರೋಪಿ ಬಂಧನ
ಗರ್ಭಿಣಿ ಮಹಿಳಾ ಕಾನ್ಸ್ಟೇಬಲ್ ಮೇಲೆ ರಾಡ್ ನಿಂದ ಹಲ್ಲೆ: ಆರೋಪಿ ಬಂಧನ