AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಠ ಕೇಳುವಾಗಲೇ ವಿದ್ಯಾರ್ಥಿನಿಯರ ಮೇಲೆ ಕುಸಿದ ಕಾಲೇಜು ಕಟ್ಟಡದ ಮೇಲ್ಛಾವಣಿಯ ಪ್ಲಾಸ್ಟರ್: ತಪ್ಪಿದ ಭಾರಿ ಅನಾಹುತ

ಕಲಬುರಗಿಯ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಪಾಠ ಕೇಳುತ್ತಿದ್ದಾಗಲೇ ಕೊಠಡಿಯ ಮೇಲ್ಛಾವಣಿ ಪ್ಲಾಸ್ಟರ್ ಕುಸಿದು ಐವರು ವಿದ್ಯಾರ್ಥಿನಿಯರು ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಸಂಭವನೀಯ ಭಾರಿ ಅನಾಹುತವೊಂದು ಅದೃಷ್ಟವಶಾತ್ ತಪ್ಪಿದೆ. ಶಾಸಕ ಅಲ್ಲಮಪ್ರಭು ಪಾಟೀಲ್‌ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ್ದಾರೆ.

ಪಾಠ ಕೇಳುವಾಗಲೇ ವಿದ್ಯಾರ್ಥಿನಿಯರ ಮೇಲೆ ಕುಸಿದ ಕಾಲೇಜು ಕಟ್ಟಡದ ಮೇಲ್ಛಾವಣಿಯ ಪ್ಲಾಸ್ಟರ್: ತಪ್ಪಿದ ಭಾರಿ ಅನಾಹುತ
ಕುಸಿದ ಕಾಲೇಜು ಕಟ್ಟಡದ ಮೇಲ್ಛಾವಣಿಯ ಪ್ಲಾಸ್ಟರ್Image Credit source: Tv9 Kannada
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Jun 12, 2026 | 5:35 PM

Share

ಕಲಬುರಗಿ, ಜೂನ್​​ 12: ಪಾಠ ಕೇಳುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಕಾಲೇಜು ಕಟ್ಟಡದ ಮೇಲ್ಛಾವಣಿಯ ಪ್ಲಾಸ್ಟರ್​​ ಕುಸಿದಿರುವ ಆಘಾತಕಾರಿ ಘಟನೆ ಕಲಬುರಗಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. ಘಟನೆ ವೇಳೆ 80ಕ್ಕೂ ಅಧಿಕ ಯುವತಿಯರು ಕೊಠಡಿಯಲ್ಲಿದ್ದರು ಎನ್ನಲಾಗಿದ್ದು, ಅದೃಷ್ಟವಶಾತ್​​ ಸಂಭವನೀಯ ಭಾರಿ ಅನಾಹುತವೊಂದು ತಪ್ಪಿದೆ. ಐವರು ವಿದ್ಯಾರ್ಥಿಗಳಿಗೆ ಈ ವೇಳೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗ್ತಿದೆ.

ಈ ಕಾಲೇಜಿನಲ್ಲಿ ಸುಮಾರು 2 ಸಾವಿರ ಜನ ವಿದ್ಯಾರ್ಥಿನಿಯರಿದ್ದು, ಬಹುತೇಕ ಗ್ರಾಮೀಣ ಭಾಗದ ಹೆಣ್ಣು ಮಕ್ಕಳೇ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಹೀಗಿದ್ದರೂ ಕಾಲೇಜಿನ ಕಟ್ಟಡವೇ ವಿದ್ಯಾರ್ಥಿನಿಗಳ ಪಾಲಿಗೆ ಕಂಟಕವಾಗಿ ಮಾರ್ಪಟ್ಟಿದೆ. ಇಂದು ಬೆಳಗ್ಗೆ ಎಂದಿನಂತೆ ಪಿಯುಸಿ ಪ್ರಥಮ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರು ಕ್ಲಾಸ್ ರೂಮ್​​ಗೆ ಬಂದಿದ್ದರು. ಕೊಠಡಿಗೆ ಬಂದ ಪ್ರಾಧ್ಯಾಪಕರೂ ಪಾಠ ಶುರುಮಾಡಿದ್ದರು. ಈ ವೇಳೆ ಏಕಾ ಏಕಿ ಮೇಲ್ಛಾವಣಿಯ ಪ್ಲಾಸ್ಟರ್​​ ಕುಸಿದಿದ್ದು, ಘಟನೆಯಲ್ಲಿ ಪೂಜಾ, ಶೀತಲ್, ಸೃಷ್ಟಿ, ಸ್ನೇಹಾ ಹಾಗೂ ದಿವ್ಯಾ ಎಂಬ ಐದು ಜನ ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳನ್ನು ಕೂಡಲೇ ಕಲಬುರಗಿಯ ಜಿಮ್ಸ್ ಆಸ್ಪತ್ರೆ ಆವರಣದಲ್ಲಿರುವ ಟ್ರಾಮಾ ಕೇರ್‌ ಸೆಂಟರ್​​ಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಲಂಚ ಪಡೆಯುತ್ತಿದ್ದಾಗ ರೆಡ್​ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಎಎಸ್​ಐ, ಕಾನ್​ಸ್ಟೇಬಲ್

8 ವರ್ಷಗಳ ಹಿಂದಷ್ಟೇ ನಿರ್ಮಿಸಿರುವ ಕಟ್ಟಡ

ಇನ್ನು ಈ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ನಿರ್ಮಾಣ ಮಾಡಿ ಇನ್ನೂ 8 ವರ್ಷಗಳೂ ಕಳೆದಿಲ್ಲ. ಹೀಗಿದ್ದರೂ ಇಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಈ ಹಿಂದೆಯೂ ಇದೇ ರೀತಿ ಪ್ಲಾಸ್ಟರ್​​ ಕುಸಿದಿತ್ತು. ಆದರೆ ಆ ಸಮಯದಲ್ಲಿ ಕೊಠಡಿಯಲ್ಲಿ ಯಾರು ಇಲ್ಲದ ಕಾರಣ ಅನಾಹುತ ತಪ್ಪಿತ್ತು. ಈಗ ಅದೇ ರೂಂನ ಪಕ್ಕದ ಕೊಠಡಿಯಲ್ಲಿ ಘಟನೆ ನಡೆದಿದೆ. ಬಹುತೇಕ ಕ್ಲಾಸ್​​ ರೂಂಗಳ ಸ್ಥಿತಿ ಹೀಗೆ ಇರುವ ಕಾರಣ ವಿದ್ಯಾರ್ಥಿನಿಯರು ಜೀವ ಕೈಯಲ್ಲಿ ಹಿಡಿದೇ ಪಾಠ ಕೇಳಬೇಕಾದ ಸ್ಥಿತಿ ಇಲ್ಲಿನದು. ಹೀಗಾಗಿ ಸಂಬಂಧಪಟ್ಟವರು ಈ ಸಂಬಂಧ ತುರ್ತಾಗಿ ಎಚ್ಚೆತ್ತುಕೊಳ್ಳಬೇಕೆಂಬ ಆಗ್ರಹ ವ್ಯಕ್ತವಾಗಿದೆ.

ತನಿಖೆಗೆ ಶಾಸಕರ ಆಗ್ರಹ

ಘಟನೆ ಬೆನ್ನಲ್ಲೇ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿರುವ ಶಾಸಕ ಅಲ್ಲಮಪ್ರಭು ಪಾಟೀಲ್‌, ಕಾಲೇಜು ಕಟ್ಟಡದ ಕಾಮಗಾರಿ ಸಂಬಂಧ ತನಿಖೆಗೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ