AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಜಯದೇವ ಆಸ್ಪತ್ರೆಯಲ್ಲಿ ಕೆಲಸ ಕೊಡಿಸುವುದಾಗಿ 110 ಜನರಿಗೆ ವಂಚನೆ

ಕಲಬುರಗಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಹಗರಣ ದೇಶಾದ್ಯಂತ ಸುದ್ದಿಯಾಗಿತ್ತು. ಈ ಪ್ರಕರಣ ಜನಮಾನಸದಿಂದ ಮಾಸುವ ಮುನ್ನವೇ ಮತ್ತೊಂದು ಹಗರಣ ನಡೆದಿದೆ. ಕಲಬುರಗಿ ಜಯದೇವ ಆಸ್ಪತ್ರೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ 110 ಜನರಿಗೆ ವಂಚಿಸಲಾಗಿದೆ.

ಕಲಬುರಗಿ ಜಯದೇವ ಆಸ್ಪತ್ರೆಯಲ್ಲಿ ಕೆಲಸ ಕೊಡಿಸುವುದಾಗಿ 110 ಜನರಿಗೆ ವಂಚನೆ
ಕಲಬುರಗಿ ಜಯದೇವ ಆಸ್ಪತ್ರೆ
ದತ್ತಾತ್ರೇಯ ಪಾಟೀಲ್​
| Edited By: ವಿವೇಕ ಬಿರಾದಾರ|

Updated on: Aug 23, 2024 | 10:59 AM

Share

ಕಲಬುರಗಿ, ಆಗಸ್ಟ್​ 23: ಕಲಬುರಗಿ ಜಯದೇವ ಆಸ್ಪತ್ರೆಯಲ್ಲಿ (Kalaburagi Jayadeva Hospital) ಡಿ ದರ್ಜೆ ನೌಕರಿ ಕೊಡಿಸುವುದಾಗಿ ಹೇಳಿ ಬರೋಬ್ಬರಿ 110 ಜನರಿಂದ ಹಣ ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಕಲಬುರಗಿಯಲ್ಲಿ ನಿರ್ಮಾಣವಾಗಿರುವ ಜಯದೇವ ಹೃದ್ರೋಗ ಆಸ್ಪತ್ರೆ ಸೆಪ್ಟೆಂಬರ್​​ನಲ್ಲಿ ಲೋಕಾರ್ಪಣೆಗೊಳ್ಳಲಿದೆ. ಆಸ್ಪತ್ರೆಯಲ್ಲಿ ಡಿ ದರ್ಜೆಯ ನೌಕರಿ ಕೊಡಿಸುವುದಾಗಿ ಐವರು 110 ಜನರಿಂದ 70 ಲಕ್ಷ ರೂ. ಹಣ ಪಡೆದು ವಂಚಿಸಿದ್ದಾರೆ.

ಕಿರಾಣಿ ಅಂಗಡಿ ವ್ಯಾಪಾರಿ ಸಂತೋಷ್, ರಾಜಶೇಖರ್ ಸೇರಿದಂತೆ ಐವರನ್ನು ಸೈಬರ್ ಕ್ರೈಂ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದಾರೆ. ಕಲಬುರಗಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಇನ್ನಷ್ಟು ಜನ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ಚಿಕಿತ್ಸೆ ಪಡೆದುಕೊಳ್ಳಲು ಬಂದು ಎಂಬಿಬಿಎಸ್ ವಿದ್ಯಾರ್ಥಿನಿಗೆ ಮರ್ಮಾಂಗ ತೋರಿಸಿದ ಯುವಕ‌

ಕಲಬುರಗಿ ಜಯದೇವ ಆಸ್ಪತ್ರೆ ನಿರ್ಮಾಣ ಕಾರ್ಯ ಸಂಪೂರ್ಣವಾಗಿ ಮುಗಿದಿದ್ದು, ಸೆಪ್ಟೆಂಬರ್​​ನಲ್ಲಿ ಉದ್ಘಾಟನೆಯಾಗಲಿದೆ. ಆಸ್ಪತ್ರೆಯಲ್ಲಿ ಈಗಾಗಲೆ ಚಿಕಿತ್ಸ ನೀಡಲಾಗುತ್ತಿದೆ. 371 ಹಾಸಿಗೆಗಳ ಆಸ್ಪತ್ರೆ ಇದೇ ವರ್ಷ ಫೆಬ್ರವರಿಯಲ್ಲಿ ತನ್ನ ತಾತ್ಕಾಲಿಕ ಕಾರ್ಯ ಆರಂಭಿಸಿದೆ. 371 ಹಾಸಿಗೆಗಳ ಆಸ್ಪತ್ರೆಯಲ್ಲಿ 100 ತೀವ್ರ ನಿಗಾ ಘಟಕದ ಹಾಸಿಗೆಗಳು, ಸಾಮಾನ್ಯ ವಾರ್ಡ್‌ಗಳಿಗೆ 250 ಹಾಸಿಗೆಗಳು ಮತ್ತು ವಿಶೇಷ ಮತ್ತು ಡೀಲಕ್ಸ್ ಕೋಣೆಗಳಿಗಾಗಿ 25 ಹಾಸಿಗೆಗಳು. ಇದು ಮೂರು ಆಪರೇಷನ್ ಥಿಯೇಟರ್‌ಗಳು ಮತ್ತು ಮೂರು ಕ್ಯಾಥ್ ಲ್ಯಾಬ್‌ಗಳನ್ನು ಹೊಂದಿದೆ.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ 180 ರೂ. ಕೋಟಿ ಮಂಜೂರು ಮಾಡಿದ್ದು, ಆಸ್ಪತ್ರೆಯನ್ನು ಸುಧಾರಿತ ಸಾಧನಗಳೊಂದಿಗೆ ಮೇಲ್ದರ್ಜೆಗೇರಿಸಲು 56 ಕೋಟಿ ರೂ. ವೆಚ್ಚವಾಗಿದೆ ಎಂದು ವರದಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!