AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ತಾಪುರದಲ್ಲಿ RSS ಪಥಸಂಚಲನ ವಿವಾದ: ಎಜಿ ಕಚೇರಿಯಲ್ಲಿ ನಡೆದ 2ನೇ ಶಾಂತಿ ಸಭೆಯ ತೀರ್ಮಾನವೇನು?

ಚಿತ್ತಾಪುರದಲ್ಲಿ RSS ಪಥಸಂಚಲನ ವಿಚಾರ ಸಂಬಂಧ ಹೈಕೋರ್ಟ್​ ಆದೇಶದ ಮೇರೆಗೆ ಶಾಂತಿ ಸಭೆ ಅಡ್ವೊಕೇಟ್ ಜನರಲ್ (ಎಜಿ) ಕಚೇರಿಯಲ್ಲಿ ನಡೆಯಿತು. ಈ ವೇಳೆ ಅರ್ಜಿದಾರರು ಪ್ರಸ್ತಾವನೆ ಸಲ್ಲಿಸಿದ್ದು, ನ.13 ಅಥವಾ 16ರಂದು ಪಥಸಂಚಲನಕ್ಕೆ ಅನುಮತಿ ಕೋರಿದ್ದಾರೆ. ಪಥಸಂಚಲನ ವಿಚಾರವಾಗಿ ನಡೆದ ಎರಡನೇ ಶಾಂತಿ ಸಭೆ ಇದಾಗಿದ್ದು, ಅಕ್ಟೋಬರ್ 28ರಂದು ಕಲಬುರಗಿಯಲ್ಲಿ ನಡೆದಿದ್ದ ಮೊದಲ ಸಭೆ ವಿಫಲವಾಗಿತ್ತು.

ಚಿತ್ತಾಪುರದಲ್ಲಿ RSS ಪಥಸಂಚಲನ ವಿವಾದ: ಎಜಿ ಕಚೇರಿಯಲ್ಲಿ ನಡೆದ 2ನೇ ಶಾಂತಿ ಸಭೆಯ ತೀರ್ಮಾನವೇನು?
RSS ಪಥಸಂಚಲನ
Ramesha M
| Edited By: |

Updated on:Nov 07, 2025 | 4:32 PM

Share

ಬೆಂಗಳೂರು, ನವೆಂಬರ್​ 05: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ RSS ಪಥಸಂಚಲನ ವಿಚಾರ ಸಂಬಂಧ ಹೈಕೋರ್ಟ್​ ಆದೇಶದ ಮೇರೆಗೆ 2ನೇ ಬಾರಿ ಶಾಂತಿ ಸಭೆ ಬೆಂಗಳೂರಿನ‌ ಅಡ್ವೊಕೇಟ್ ಜನರಲ್ (ಎಜಿ) ಕಚೇರಿಯಲ್ಲಿ ನಡೆಯಿತು. ಅರ್ಜಿದಾರ ಅಶೋಕ್ ಪಾಟೀಲ್, ಹಿರಿಯ ವಕೀಲ ಅರುಣ್ ಶ್ಯಾಮ್, ಕಡ್ಲೂರ್ ಸತ್ಯನಾರಾಯಣಾಚಾರ್ಯ, ಎಜಿ ಶಶಿಕಿರಣ್ ಶೆಟ್ಟಿ, ಕಲಬುರಗಿ ಜಿಲ್ಲಾಡಳಿತದ ಅಧಿಕಾರಿಗಳು ಭಾಗಿಯಾಗಿದ್ದರು. ಇಂದಿನ ಸಭೆಯಲ್ಲಾದ ತೀರ್ಮಾನದ ವರದಿಯನ್ನ ನ.7ರಂದು ಹೈಕೋರ್ಟ್​ಗೆ ಎಜಿ ತಿಳಿಸಲಿದ್ದಾರೆ.

ಅರ್ಜಿದಾರರ ಪ್ರಸ್ತಾವನೆ

ಅಡ್ವೊಕೇಟ್ ಜನರಲ್ ಕಚೇರಿಯಲ್ಲಿ ಅರ್ಜಿದಾರರು ಪ್ರಸ್ತಾವನೆ ಸಲ್ಲಿಸಿದ್ದು, ನ.13 ಅಥವಾ 16ರಂದು ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಅನುಮತಿ ಕೋರಿದ್ದಾರೆ. 850 ಗಣವೇಷಧಾರಿಗಳು ಮಾತ್ರ ಪಥಸಂಚಲನದಲ್ಲಿ ಭಾಗವಹಿಸುತ್ತಾರೆ. 3.1 ಕಿ.ಮೀ. ಪಥಸಂಚಲನ ನಡೆಸಲಾಗುತ್ತೆ. 4 ಸಾಲಿನ ಬದಲು 3 ಸಾಲಿನಲ್ಲಿ ಹೋಗುತ್ತೇವೆ. ಮಧ್ಯಾಹ್ನ 3ರಿಂದ 6.30ರವರೆಗೆ ಪಥಸಂಚಲನಕ್ಕೆ ಅನುಮತಿ ಕೊಡಿ ಎಂದು ಹೇಳಿದ್ದಾರೆ. ಅರ್ಜಿದಾರರು ಸಲ್ಲಿಸಿರುವ ಪ್ರಸ್ತಾವನೆ ಬಗ್ಗೆ ಜಿಲ್ಲಾಡಳಿತ ತೀರ್ಮಾನಿಸಬೇಕಿದ್ದು, ಪಥಸಂಚಲನದಲ್ಲಿ ಸ್ಥಳೀಯರಿಗೆ ಮಾತ್ರ ಅವಕಾಶ ನೀಡುವುದಾಗಿಯೂ ಅರ್ಜಿದಾರರು ತಿಳಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ: ನ. 2ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಮುಂದಾಗಿದ್ದ RSSಗೆ ಹಿನ್ನಡೆ

ವಿಫಲವಾಗಿದ್ದ ಮೊದಲನೇ ಶಾಂತಿಸಭೆ

ಚಿತ್ತಾಪುರದಲ್ಲಿ RSS ಪಥಸಂಚಲನದ ವಿಚಾರವಾಗಿ ಹೈಕೋರ್ಟ್​ ಸೂಚನೆ ಮೇರೆಗೆ ಅಕ್ಟೋಬರ್ 28ರಂದು ಕಲಬುರಗಿಯಲ್ಲಿ 10 ಸಂಘಟನೆಗಳ ಜತೆ ನಡೆದ ಸಾಂತಿಸಭೆ ವಿಫಲವಾಗಿತ್ತು. ಡಿಸಿ ಫೌಜಿಯಾ, SP ಅಡ್ಡೂರು ಶ್ರೀನಿವಾಸಲು ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆರ್​ಎಸ್​ಎಸ್​ ಹಾಗೂ ಭೀಮ್ ಆರ್ಮಿ ನಡುವೆ ವಾಗ್ವಾದ ನಡೆದಿದ್ದರಿಂದ ಯಾವುದೇ ನಿರ್ಧಾರ ಆಗಿರಲಲ್ಲಿಲ್ಲ. ಈ ವಿಚಾರವಾಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಕೋರ್ಟ್​ ಅಂತಿಮವಾಗಿ ನವೆಂಬರ್ 5ರಂದು ಬೆಂಗಳೂರಿನ‌ ಅಡ್ವೊಕೇಟ್ ಜನರಲ್ ಕಚೇರಿಯಲ್ಲಿ ಮತ್ತೊಂದು ಶಾಂತಿ ನಡೆಸಲು ಸೂಚಿಸಿ ವಿಚಾರಣೆಯನ್ನು ನವೆಂಬರ್ 7ಕ್ಕೆ ಮುಂದೂಡಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:17 pm, Wed, 5 November 25

Follow Us
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್