AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್​ಐ ನೇಮಕಾತಿ ಅಕ್ರಮದ ತನಿಖೆ ಚುರುಕುಗೊಳಿಸಿದ ಸಿಐಡಿ; ಒಎಂಆರ್​ ಶೀಟ್​​ಗಳನ್ನು ಎಫ್​ಎಸ್​ಎಲ್​ಗೆ ಕಳಿಸಲು ಸಿದ್ಧತೆ

545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮವೀಗ ದೊಡ್ಡ ವಿವಾದಕ್ಕೆ ಕಾರಣವಾಗುತ್ತಿದ್ದು, ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಕೇಸ್​​ಗೆ ಸಂಬಂಧಪಟ್ಟು ಅಫಜಲ್​​ಪುರ ಬ್ಲಾಕ್​ ಕಾಂಗ್ರೆಸ್ ಅಧ್ಯಕ್ಷ ಮಹಂತೇಶ್​ ಪಾಟೀಲ್​​ನನ್ನು ಈಗಾಗಲೇ ಸಿಐಡಿ ಬಂಧಿಸಿದೆ.

ಪಿಎಸ್​ಐ ನೇಮಕಾತಿ ಅಕ್ರಮದ ತನಿಖೆ ಚುರುಕುಗೊಳಿಸಿದ ಸಿಐಡಿ; ಒಎಂಆರ್​ ಶೀಟ್​​ಗಳನ್ನು ಎಫ್​ಎಸ್​ಎಲ್​ಗೆ ಕಳಿಸಲು ಸಿದ್ಧತೆ
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on: Apr 23, 2022 | 11:07 AM

Share

ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮದ ಬಗ್ಗೆ ಸಿಐಡಿ ತನಿಖೆ ನಡೆಸುತ್ತಿದೆ. ವಿವಿಧ ಆಯಾಮಗಳಲ್ಲಿ ವಿಚಾರಣೆ, ಪರಿಶೀಲನೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಈಗ ಅಭ್ಯರ್ಥಿಗಳ ಒಎಂಆರ್​ ಶೀಟ್​​ನ್ನು ಎಫ್​​ಎಸ್​ಎಲ್​​ಗೆ ಕಳಿಸಲು  ಅಂದರೆ ವಿಧಿ ವಿಜ್ಞಾನ ಪರೀಕ್ಷೆಗೆ ಕಳಿಸಲು ಸಿದ್ಧತೆ ನಡೆಸಿದ್ದಾರೆ. ಅದಕ್ಕಾಗಿ ಒಎಂಆರ್ ಕಾರ್ಬನ್​ ಶೀಟ್​​ಗಳನ್ನೂ ಸಂಗ್ರಹ ಮಾಡುತ್ತಿದ್ದಾರೆ.  ಕಾರ್ಬನ್​ ಒಎಂಆರ್ ಶೀಟ್​ ಮತ್ತು ಮೂಲ ಒಎಂಆರ್​ ಶೀಟ್​ ಎರಡನ್ನೂ ಎಫ್​ಎಸ್​ಎಲ್​​ಗೆ ಕಳಿಸಿ ಪರಿಶೀಲನೆ ನಡೆಸಲಿದ್ದು, ವರದಿಯ ಬಳಿಕವಷ್ಟೇ ಪರೀಕ್ಷೆಯಲ್ಲಿ ಎಷ್ಟರ ಮಟ್ಟಿಗೆ ಅಕ್ರಮ ನಡೆದಿದೆ ಎಂಬುದು ಗೊತ್ತಾಗುತ್ತದೆ.  

545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮವೀಗ ದೊಡ್ಡ ವಿವಾದಕ್ಕೆ ಕಾರಣವಾಗುತ್ತಿದ್ದು, ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಕೇಸ್​​ಗೆ ಸಂಬಂಧಪಟ್ಟು ಅಫಜಲ್​​ಪುರ ಬ್ಲಾಕ್​ ಕಾಂಗ್ರೆಸ್ ಅಧ್ಯಕ್ಷ ಮಹಂತೇಶ್​ ಪಾಟೀಲ್​​ನನ್ನು ಈಗಾಗಲೇ ಸಿಐಡಿ ಬಂಧಿಸಿದ್ದು, ಈತನ ಸಹೋದರ ಪ್ರಕರಣದ ಕಿಂಗ್​ಪಿನ್​ ರುದ್ರಗೌಡ ಪಾಟೀಲ್​ಗಾಗಿ ಶೋಧ ಕಾರ್ಯ ನಡೆಯುತ್ತಿದೆ.  ಈ ಮಹಂತೇಶ್​ ಪಟೇಲ್​ ಮತ್ತು ರುದ್ರಗೌಡ ಪಟೇಲ್​ ರಾಜಕೀಯವಾಗಿ ಪ್ರಾಬಲ್ಯ ಹೊಂದುವ ಮಹದಾಶಯ ಹೊತ್ತಿದ್ದರು. ಮಹಂತೇಶ್​ ಪಟೇಲ್​​ನನ್ನು ಬಂಧಿಸಲು ಸಿಐಡಿ ಅಧಿಕಾರಿಗಳು ಹೋಗಿದ್ದಾಗ ಆತ ಅಧಿಕಾರಿಗಳಿಗೇ ಅವಾಜ್​ ಹಾಕಿದ್ದರಿಂದ ಕೊರಳು ಪಟ್ಟಿ ಹಿಡಿದು ಅರೆಸ್ಟ್​ ಎಳೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ಇಂದು ಕಲಬುರಗಿ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕ ಪ್ರಿಯಾಂಕ್​ ಖರ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿ,  ಈಗಾಗಲೇ ಸಿಐಡಿ  ಅಧಿಕಾರಿಗಳು 13 ಆರೋಪಿಗಳನ್ನು ಬಂಧಿಸಿದ್ದಾರೆ. ಸಣ್ಣ ಮೀನುಗಳನ್ನು ಬಂಧಿಸಿದ್ದಾರೆ, ಆದರೆ ತಿಮಿಂಗಿಲಗಳು ಓಡಾಡುತ್ತಿವೆ. ಅಕ್ರಮದ ಹಣ ಮೇಲ್ಮಟ್ಟದವರೆಗೆ ಹೋಗುತ್ತಿದೆ ಎಂಬ ಮಾಹಿತಿ ಇದೆ. ಪೊಲೀಸರು ಕಲಬುರಗಿಯಲ್ಲಿ ಸಣ್ಣಪುಟ್ಟವರನ್ನು ಹಿಡಿದರೆ ಸಾಲದು. ನೇಮಕಾತಿ ಅಕ್ರಮದಲ್ಲಿ ದೊಡ್ಡ ವ್ಯಕ್ತಿಗಳು ಶಾಮೀಲಾಗಿದ್ದಾರೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಸಂಭಾಷಣೆಯೊಂದರ ಆಡಿಯೋವನ್ನೂ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ಕಲಬುರಗಿಯಲ್ಲಿ 545 ಪಿಎಸ್‌ಐಗಳ ನೇಮಕಾತಿಯಲ್ಲಿ ಭಾರೀ ಅಕ್ರಮ; 8 ಜನ ಅರೆಸ್ಟ್, ಎಸ್ಕೇಪ್ ಆದವರಿಗಾಗಿ ತಲಾಶ್

VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್